Homeಮುಖಪುಟಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

- Advertisement -
- Advertisement -

ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಇಸ್ರೇಲಿ ಪಡೆಗಳು 46,788ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಂದು 110,453 ಜನರನ್ನು ಗಾಯಗೊಳಿಸಿದ 460 ದಿನಗಳಿಗೂ ಹೆಚ್ಚು ಕಾಲದ ಆಕ್ರಮಣದ ನಂತರ ಕದನ ವಿರಾಮಕ್ಕೆ ನೆತನ್ಯಾಹು ಸರ್ಕಾರ ಮುಂದಾಗಿದೆ.

ಆರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಂಪುಟ ಸಭೆಯ ನಂತರ ಇಸ್ರೇಲ್ ಸರ್ಕಾರ ಶನಿವಾರ (ಜ.17) ಬೆಳಗಿನ ಜಾವ ಕದನ ವಿರಾಮ ಒಪ್ಪಂದವನ್ನು ಅಂಗೀಕರಿಸಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

“ಒತ್ತೆಯಾಳುನ್ನು ಬಿಡುಗಡೆ ಮಾಡುವ ಒಪ್ಪಂದವನ್ನು ಸರ್ಕಾರ ಅನುಮೋದಿಸಿದೆ. ಒತ್ತೆಯಾಳುಗಳ ಬಿಡುಗಡೆ ಕಾರ್ಯ ಭಾನುವಾರದಿಂದ (ಜ.19) ಜಾರಿಗೆ ಬರಲಿದೆ ಎಂದು” ನೆತನ್ಯಾಹು ಕಚೇರಿ ಹೇಳಿದೆ.

ಕದನ ವಿರಾಮ ಒಪ್ಪಂದವನ್ನು ಇಸ್ರೇಲ್ ಸಂಪುಟದ ಕೆಲವರು ತೀವ್ರವಾಗಿ ವಿರೋಧಿಸಿದರು. ಆದರೂ, ನೆತನ್ಯಾಹು ನೇತೃತ್ವದ ಸಮ್ಮಿಶ್ರ ಸರ್ಕಾರದ 24 ಮಂದಿ ಸಚಿವರು ಒಪ್ಪಂದದ ಪರ ಮತ ಚಲಾಯಿಸಿದ್ದಾರೆ. ಎಂಟು ಮಂದಿ ವಿರುದ್ದ ಮತ ಹಾಕಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಇಸ್ರೇಲಿ ಭದ್ರತಾ ಸಂಪುಟವು ಶುಕ್ರವಾರ (ಜ.16) ಕದನ ವಿರಾಮ ಒಪ್ಪಂದದ ಪರವಾಗಿ ಮತ ಚಲಾಯಿಸಿದೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಗಾಝಾದಲ್ಲಿ ಒತ್ತೆಯಾಳುಗಳಾಗಿರುವ ಕೆಲವು ಇಸ್ರೇಲ್ ನಾಗರಿಕರನ್ನು ಹಮಾಸ್ ಬಿಡುಗಡೆ ಮಾಡಲಿದೆ. ಇಸ್ರೇಲ್ ಕೂಡ ಗಾಝಾದಿಂದ ಬಂಧಿಸಿ ಕರೆದೊಯ್ದಿರುವ ಕೆಲ ಪ್ಯಾಲೆಸ್ತೀನ್ ನಾಗರಿಕರನ್ನು ಬಿಡುಗಡೆ ಮಾಡಲಿದೆ.

ಮೊದಲ ಹಂತ ಯಶಸ್ವಿಯಾದರೆ, ಹಮಾಸ್ ಇನ್ನಷ್ಟು ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ.

ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಹಂತವಾಗಿ ಇಸ್ರೇಲ್ ಸೇನೆಯು ಸಂಪೂರ್ಣವಾಗಿ ಯುದ್ಧ ನಿಲ್ಲಿಸಿ ಗಾಝಾ ಪ್ರದೇಶದಿಂದ ಹಿಂದಿರುಗಲಿದೆ. ಉತ್ತರ ಗಾಝಾದ ನಾಗರಿಕರು ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ವಾಪಾಸಾಗಲಿದ್ದಾರೆ. ಮಾನವೀಯ ನೆರವು ಹೆಚ್ಚಾಗಲಿದೆ ಮತ್ತು ಗಾಝಾದ ಮರು ನಿರ್ಮಾಣ ಕಾರ್ಯ ಪ್ರಾರಂಭಗೊಳ್ಳಲಿದೆ.

ವರದಿಗಳ ಪ್ರಕಾರ, ಇಸ್ರೇಲ್ ಸಚಿವ ಸಂಪುಟ ಕದನ ವಿರಾಮ ಒಪ್ಪಂದಕ್ಕೆ ಅನುಮೋದನೆ ನೀಡಿದ ಬಳಿಕ, ಒಪ್ಪಂದದ ಮೊದಲ ಹಂತವಾಗಿ ಬಿಡುಗಡೆ ಮಾಡಲಿರುವ 737 ಪ್ಯಾಲೆಸ್ತೀನಿಯರ ಪಟ್ಟಿ ಪ್ರಕಟಿಸಿದೆ. ಆ ಪಟ್ಟಿಯಂತೆ ಭಾರತೀಯ ಕಾಲಮಾನ ಭಾನುವಾರ ಸಂಜೆ 4 ಗಂಟೆಗೆ (14:00 GMT)ಬಂಧಿತರು ಬಿಡುಗಡೆಯಾಗಲಿದ್ದಾರೆ.

ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...