Homeಮುಖಪುಟಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

- Advertisement -
- Advertisement -

ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಇಸ್ರೇಲಿ ಪಡೆಗಳು 46,788ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಂದು 110,453 ಜನರನ್ನು ಗಾಯಗೊಳಿಸಿದ 460 ದಿನಗಳಿಗೂ ಹೆಚ್ಚು ಕಾಲದ ಆಕ್ರಮಣದ ನಂತರ ಕದನ ವಿರಾಮಕ್ಕೆ ನೆತನ್ಯಾಹು ಸರ್ಕಾರ ಮುಂದಾಗಿದೆ.

ಆರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಂಪುಟ ಸಭೆಯ ನಂತರ ಇಸ್ರೇಲ್ ಸರ್ಕಾರ ಶನಿವಾರ (ಜ.17) ಬೆಳಗಿನ ಜಾವ ಕದನ ವಿರಾಮ ಒಪ್ಪಂದವನ್ನು ಅಂಗೀಕರಿಸಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

“ಒತ್ತೆಯಾಳುನ್ನು ಬಿಡುಗಡೆ ಮಾಡುವ ಒಪ್ಪಂದವನ್ನು ಸರ್ಕಾರ ಅನುಮೋದಿಸಿದೆ. ಒತ್ತೆಯಾಳುಗಳ ಬಿಡುಗಡೆ ಕಾರ್ಯ ಭಾನುವಾರದಿಂದ (ಜ.19) ಜಾರಿಗೆ ಬರಲಿದೆ ಎಂದು” ನೆತನ್ಯಾಹು ಕಚೇರಿ ಹೇಳಿದೆ.

ಕದನ ವಿರಾಮ ಒಪ್ಪಂದವನ್ನು ಇಸ್ರೇಲ್ ಸಂಪುಟದ ಕೆಲವರು ತೀವ್ರವಾಗಿ ವಿರೋಧಿಸಿದರು. ಆದರೂ, ನೆತನ್ಯಾಹು ನೇತೃತ್ವದ ಸಮ್ಮಿಶ್ರ ಸರ್ಕಾರದ 24 ಮಂದಿ ಸಚಿವರು ಒಪ್ಪಂದದ ಪರ ಮತ ಚಲಾಯಿಸಿದ್ದಾರೆ. ಎಂಟು ಮಂದಿ ವಿರುದ್ದ ಮತ ಹಾಕಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಇಸ್ರೇಲಿ ಭದ್ರತಾ ಸಂಪುಟವು ಶುಕ್ರವಾರ (ಜ.16) ಕದನ ವಿರಾಮ ಒಪ್ಪಂದದ ಪರವಾಗಿ ಮತ ಚಲಾಯಿಸಿದೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಗಾಝಾದಲ್ಲಿ ಒತ್ತೆಯಾಳುಗಳಾಗಿರುವ ಕೆಲವು ಇಸ್ರೇಲ್ ನಾಗರಿಕರನ್ನು ಹಮಾಸ್ ಬಿಡುಗಡೆ ಮಾಡಲಿದೆ. ಇಸ್ರೇಲ್ ಕೂಡ ಗಾಝಾದಿಂದ ಬಂಧಿಸಿ ಕರೆದೊಯ್ದಿರುವ ಕೆಲ ಪ್ಯಾಲೆಸ್ತೀನ್ ನಾಗರಿಕರನ್ನು ಬಿಡುಗಡೆ ಮಾಡಲಿದೆ.

ಮೊದಲ ಹಂತ ಯಶಸ್ವಿಯಾದರೆ, ಹಮಾಸ್ ಇನ್ನಷ್ಟು ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ.

ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಹಂತವಾಗಿ ಇಸ್ರೇಲ್ ಸೇನೆಯು ಸಂಪೂರ್ಣವಾಗಿ ಯುದ್ಧ ನಿಲ್ಲಿಸಿ ಗಾಝಾ ಪ್ರದೇಶದಿಂದ ಹಿಂದಿರುಗಲಿದೆ. ಉತ್ತರ ಗಾಝಾದ ನಾಗರಿಕರು ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ವಾಪಾಸಾಗಲಿದ್ದಾರೆ. ಮಾನವೀಯ ನೆರವು ಹೆಚ್ಚಾಗಲಿದೆ ಮತ್ತು ಗಾಝಾದ ಮರು ನಿರ್ಮಾಣ ಕಾರ್ಯ ಪ್ರಾರಂಭಗೊಳ್ಳಲಿದೆ.

ವರದಿಗಳ ಪ್ರಕಾರ, ಇಸ್ರೇಲ್ ಸಚಿವ ಸಂಪುಟ ಕದನ ವಿರಾಮ ಒಪ್ಪಂದಕ್ಕೆ ಅನುಮೋದನೆ ನೀಡಿದ ಬಳಿಕ, ಒಪ್ಪಂದದ ಮೊದಲ ಹಂತವಾಗಿ ಬಿಡುಗಡೆ ಮಾಡಲಿರುವ 737 ಪ್ಯಾಲೆಸ್ತೀನಿಯರ ಪಟ್ಟಿ ಪ್ರಕಟಿಸಿದೆ. ಆ ಪಟ್ಟಿಯಂತೆ ಭಾರತೀಯ ಕಾಲಮಾನ ಭಾನುವಾರ ಸಂಜೆ 4 ಗಂಟೆಗೆ (14:00 GMT)ಬಂಧಿತರು ಬಿಡುಗಡೆಯಾಗಲಿದ್ದಾರೆ.

ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...