Homeಮುಖಪುಟಬಜೆಟ್ - 2025 ಅಧಿವೇಶನದಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಲಿರುವ ಕೇಂದ್ರ ಸರ್ಕಾರ

ಬಜೆಟ್ – 2025 ಅಧಿವೇಶನದಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಲಿರುವ ಕೇಂದ್ರ ಸರ್ಕಾರ

- Advertisement -
- Advertisement -

ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರವು ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸುವ ಸಾಧ್ಯತೆಯಿದೆ ಎಂದು TNIE ಶನಿವಾರ ವರದಿ ಮಾಡಿದೆ. ಈ ಮಸೂದೆಯು, ಪ್ರಸ್ತುತ ಐಟಿ ಕಾನೂನನ್ನು ಸರಳೀಕರಿಸಲು, ಅದನ್ನು ಅರ್ಥವಾಗುವಂತೆ ಮಾಡಲು ಮತ್ತು ಪುಟಗಳ ಸಂಖ್ಯೆಯನ್ನು ಸುಮಾರು 60%ದಷ್ಟು ಕಡಿಮೆ ಮಾಡಲು ಪ್ರಯತ್ನಿಸುತ್ತದೆ ಎಂದು ಅದು ಹೇಳಿದೆ. ಬಜೆಟ್ – 2025

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಜುಲೈ ಬಜೆಟ್‌ನಲ್ಲಿ ಆರು ದಶಕಗಳಷ್ಟು ಹಳೆಯದಾದ 1961 ರ ಆದಾಯ ತೆರಿಗೆ ಕಾಯ್ದೆಯ ಸಮಗ್ರ ಪರಿಶೀಲನೆಯನ್ನು ಆರು ತಿಂಗಳೊಳಗೆ ಮಾಡುವುದಾಗಿ ಘೋಷಿಸಿದ್ದರು. 2025ರ ಬಜೆಟ್ ಅಧಿವೇಶನವು ಜನವರಿ 31 ರಿಂದ ಏಪ್ರಿಲ್ 4 ರವರೆಗೆ ನಿಗದಿಪಡಿಸಲಾಗಿದೆ.

“ಹೊಸ ಆದಾಯ ತೆರಿಗೆ ಕಾನೂನನ್ನು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪರಿಚಯಿಸಲಾಗುವುದು. ಇದು ಹೊಸ ಕಾನೂನಾಗಿರುತ್ತದೆ ಮತ್ತು ಅಸ್ತಿತ್ವದಲ್ಲಿರುವ ಕಾಯ್ದೆಗೆ ತಿದ್ದುಪಡಿಯಲ್ಲ. ಪ್ರಸ್ತುತ, ಕರಡು ಕಾನೂನನ್ನು ಕಾನೂನು ಸಚಿವಾಲಯ ಪರಿಶೀಲಿಸುತ್ತಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಅದನ್ನು ಸಂಸತ್ತಿನಲ್ಲಿ ತರಲಾಗುವುದು” ಎಂದು ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ. ಬಜೆಟ್ – 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೊದಲಾರ್ಧ (ಜನವರಿ 31-ಫೆಬ್ರವರಿ 13) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಪ್ರಾರಂಭವಾಗಲಿದೆ ಮತ್ತು ನಂತರ 2024-25 ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು. ಮಾರ್ಚ್ 10 ರಂದು ಮತ್ತೆ ಸಂಸತ್ತು ಸಭೆ ಸೇರಲಿದ್ದು, ಏಪ್ರಿಲ್ 4 ರವರೆಗೆ ಅಧಿವೇಶನ ನಡೆಯಲಿದೆ.

1961 ರ ಐಟಿ ಕಾಯ್ದೆಯ ಸಮಗ್ರ ಪರಿಶೀಲನೆಗಾಗಿ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಘೋಷಣೆಗೆ ಅನುಗುಣವಾಗಿ, ಕೇಂದ್ರ ನೇರ ತೆರಿಗೆ ಮಂಡಳಿ(ಸಿಬಿಡಿಟಿ)ಯು ಪರಿಶೀಲನೆಯ ಮೇಲ್ವಿಚಾರಣೆಗೆ ಮತ್ತು ಕಾಯ್ದೆಯನ್ನು ಸಂಕ್ಷಿಪ್ತ, ಸ್ಪಷ್ಟ ಮತ್ತು ಅರ್ಥಮಾಡಿಕೊಳ್ಳಲು ಸುಲಭಗೊಳಿಸಲು ಆಂತರಿಕ ಸಮಿತಿಯನ್ನು ಸ್ಥಾಪಿಸಿತ್ತು. ಈ ಸಮಿತಿಯು ವಿವಾದಗಳು, ಮೊಕದ್ದಮೆಗಳನ್ನು ಕಡಿಮೆ ಮಾಡುತ್ತದೆ ಮತ್ತು ತೆರಿಗೆದಾರರಿಗೆ ಹೆಚ್ಚಿನ ತೆರಿಗೆ ಖಚಿತತೆಯನ್ನು ಒದಗಿಸುತ್ತದೆ. ಅಲ್ಲದೆ, ಕಾಯ್ದೆಯ ವಿವಿಧ ಅಂಶಗಳನ್ನು ಪರಿಶೀಲಿಸಲು 22 ವಿಶೇಷ ಉಪಸಮಿತಿಗಳನ್ನು ಸ್ಥಾಪಿಸಲಾಯಿತು.

ಭಾಷೆಯ ಸರಳೀಕರಣ, ಮೊಕದ್ದಮೆ ಕಡಿತ, ಅನುಸರಣೆ ಕಡಿತ ಮತ್ತು ಅನಗತ್ಯ/ಬಳಕೆಯಲ್ಲಿಲ್ಲದ ನಿಬಂಧನೆಗಳ ವಿಚಾರಗಳಿಗೆ ನಾಲ್ಕು ವಿಭಾಗಗಳಲ್ಲಿ ಸಾರ್ವಜನಿಕರ ಅಭಿಪ್ರಾಯ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದೆ. ಕಾಯ್ದೆಯ ಪರಿಶೀಲನೆಯ ಕುರಿತು ಆದಾಯ ತೆರಿಗೆ ಇಲಾಖೆಯು ಪಾಲುದಾರರಿಂದ 6,500 ಸಲಹೆಗಳನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ. ನಿಬಂಧನೆಗಳು ಮತ್ತು ಅಧ್ಯಾಯಗಳನ್ನು ಗಣನೀಯವಾಗಿ ಕಡಿಮೆ ಮಾಡಲಾಗುವುದು ಮತ್ತು ಬಳಕೆಯಲ್ಲಿಲ್ಲದ ನಿಬಂಧನೆಗಳನ್ನು ಅಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನಿರ್ಮಲಾ ಸೀತಾರಾಮನ್ ತಮ್ಮ 2024 ಜುಲೈ ಬಜೆಟ್ ಭಾಷಣದಲ್ಲಿ, ಕಾಯಿದೆಯನ್ನು ಸಂಕ್ಷಿಪ್ತ, ಸ್ಪಷ್ಟ, ಓದಲು ಮತ್ತು ಅರ್ಥಮಾಡಿಕೊಳ್ಳಲು ಸುಲಭವಾಗುವಂತೆ ಮಾಡುವುದು ಪರಿಶೀಲನೆಯ ಉದ್ದೇಶ ಎಂದು ಹೇಳಿದ್ದರು. “ಈ ಪರಿಶೀಲನೆಯು ವಿವಾದಗಳು ಮತ್ತು ಮೊಕದ್ದಮೆಗಳನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ತೆರಿಗೆದಾರರಿಗೆ ತೆರಿಗೆ ಖಚಿತತೆಯನ್ನು ಒದಗಿಸುತ್ತದೆ. ಜೊತೆಗೆ, ಇದನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ” ಎಂದು ಅವರು ಹೇಳಿದ್ದರು.

ಇದನ್ನೂಓದಿ:  ‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...