Homeಅಂತರಾಷ್ಟ್ರೀಯGaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

- Advertisement -
- Advertisement -

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire

ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ ನಡುವಿನ ಗಡಿಯುದ್ದಕ್ಕೂ ಫಿಲಡೆಲ್ಫಿ ಕಾರಿಡಾರ್‌ಗೆ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದವು ಎಂದು ಹಮಾಸ್ ಪರ ಮಾಧ್ಯಮಗಳು ಭಾನುವಾರ ಮುಂಜಾನೆ ವರದಿ ಮಾಡಿವೆ. ಹಾಗಾಗಿ, ಯುದ್ಧ ಪೀಡಿತ ಗಾಜಾ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. Gaza ceasefire

ಜನವರಿ 20 ರಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನಕ್ಕೆ ಮೊದಲು ಕದನ ವಿರಾಮ ಘೋಷಣೆಯಾಗಿದೆ. ಶನಿವಾರ ರಾಷ್ಟ್ರವನ್ನುದ್ದೇಶಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಭಾಷಣದಲ್ಲಿ, ಮತ್ತೆ ಯುದ್ಧ ಅಗತ್ಯವಿದ್ದರೆ ಇಸ್ರೇಲ್‌ಗೆ ಅಮೆರಿಕದ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

42 ದಿನಗಳ ಮೊದಲ ಹಂತವನ್ನು “ತಾತ್ಕಾಲಿಕ ಕದನ ವಿರಾಮ” ಎಂದು ಕರೆದ ಅವರು, “ಒಂದು ವೇಳೆ ಯುದ್ಧವನ್ನು ಪುನರಾರಂಭಿಸುವಂತೆ ಏನಾದರೂ ನಡೆದರೆ, ನಾವು ಮತ್ತೆ ರಣರಂಗಕ್ಕೆ ಇಳಿಯಲಿದ್ದೇವೆ” ಎಂದು ಹೇಳಿದ್ದರು.

ಅದಾಗ್ಯೂ, ಸ್ಥಳೀಯ ಸಮಯ ಬೆಳಿಗ್ಗೆ 8:30 ಕ್ಕೆ ಕದನ ವಿರಾಮ ಪ್ರಾರಂಭವಾಗಲಿದ್ದು, ಒಪ್ಪಂದ ಪ್ರಾರಂಭವಾಗುವ ಗಡುವು ಮುಗಿದರೂ, ಹಮಾಸ್ ಬಿಡುಗಡೆ ಮಾಡುವ ಒತ್ತೆಯಾಳುಗಳ ಪಟ್ಟಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಇಸ್ರೇಲ್‌ನ ಉನ್ನತ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ. “ಸೈನ್ಯವು ಗಾಜಾದಲ್ಲಿ ಈಗಲೂ ದಾಳಿ ಮಾಡುವುದನ್ನು ಮುಂದುವರೆಸಿದೆ. ಹಮಾಸ್ ಒಪ್ಪಂದವನ್ನು ಪಾಲಿಸುವವರೆಗೆ ದಾಳಿ ನಡೆಸಲಿದೆ” ಎಂದು ಅವರು ಹೇಳಿದ್ದಾರೆ.

ಪಟ್ಟಿಯನ್ನು ತಲುಪಿಸಲಾಗುವುದು ಮತ್ತು ಒಪ್ಪಂದವು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿಗಳು ಭರವಸೆ ನೀಡಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ನಡುವೆಯು ಇಸ್ರೇಲ್ ದಾಳಿಯಿಂದ ಗಾಜಾದಾದ್ಯಂತ ಕನಿಷ್ಠ ಎಂಟು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ವರದಿ ಮಾಡಿದೆ.

ಈ ನಡುವೆ, ಬಂಧಿತರು ಮತ್ತು ಕೈದಿಗಳ ವಿನಿಮಯ ಒಪ್ಪಂದದ ಮೊದಲ ಹಂತದಲ್ಲಿ ಬಿಡುಗಡೆಗೊಳ್ಳುವ ಬಂಧಿತರ ಹೆಸರನ್ನು ಹಮಾಸ್ ಬಿಡುಗಡೆ ಮಾಡುವವರೆಗೆ ಗಾಜಾದಲ್ಲಿ ಕದನ ವಿರಾಮ ಪ್ರಾರಂಭವಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ತಾಂತ್ರಿಕ ಕಾರಣದಿಂದ ಕದನ ವಿರಾಮ ವಿಳಂಬವಾಗುತ್ತಿದೆ ಎಂದು ಪ್ಯಾಲೇಸ್ತೀನಿ ಹೋರಾಟಗಾರರು ಹೇಳಿದ್ದಾರೆ.

ಕದನ ವಿರಾಮದ ಮೊದಲ ದಿನದಂದು, ಇಸ್ರೇಲ್-ಹಮಾಸ್ ಒಪ್ಪಂದದ ಪ್ರಕಾರ ಗಾಜಾದಲ್ಲಿ ಕದನ ವಿರಾಮಕ್ಕೆ, ಮೂವರು ಇಸ್ರೇಲಿ ಬಂಧಿತರನ್ನು ಮತ್ತು ಸುಮಾರು 95 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧದಿಂದ ಕನಿಷ್ಠ 46,899 ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದು, ಸುಮಾರು 1,10,725 ಜನರು ಗಾಯಗೊಂಡಿದ್ದಾರೆ. ಅದೇ ದಿನ ಪ್ಯಾಲೆಸ್ತೀನ್ ಹೋರಾಟಗಾರ ಗುಂಪು ಹಮಾಸ್ ನೇತೃತ್ವದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,139 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರನ್ನು ಅವರು ಸೆರೆಯಾಳುಗಳನ್ನಾಗಿ ಕರೆದೊಯ್ದಿದ್ದರು.

ಇದನ್ನೂಓದಿ:  ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಇದನ್ನೂಓದಿ:  ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...