Homeಮುಖಪುಟಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

- Advertisement -
- Advertisement -

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ.

ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಬಂಧಿತ ಆರೋಪಿ ಬಾಂಗ್ಲಾದೇಶಿಯಾಗಿದ್ದು, 5-6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದು, ಅವನು ಕೆಲವು ದಿನಗಳ ಕಾಲ ಮುಂಬೈನಲ್ಲಿ ಮತ್ತು ನಂತರ ಮುಂಬೈ ಸುತ್ತಮುತ್ತ ವಾಸಿಸುತ್ತಿದ್ದನು. ಆರೋಪಿಯು ಮನೆಗೆಲಸದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಅವರು ತಿಳಿಸಿದ್ದಾರೆ.

ಜನವರಿ 16ರ ಗುರುವಾರ ಬೆಳಗಿನ ಜಾವ ಬಾಂದ್ರಾ ಪ್ರದೇಶದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಅಲಿ ಖಾನ್ ಅವರ 12ನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಆರೋಪಿ ನುಗ್ಗಿದ್ದನು. ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ ಶರೀಫುಲ್, ನಟನೊಂದಿಗಿನ ಜಗಳದಲ್ಲಿ ಸೈಫ್‌ಗೆ ಹಲವು ಬಾರಿ ಇರಿದಿದ್ದ. ನಂತರ ಆತನು ಸ್ಥಳದಿಂದ ಪರಾರಿಯಾಗಿದ್ದನು.

ಆರೋಪಿಯು ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಗಳನ್ನು ಹೊಂದಿದ್ದನು ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ಹೇಗೆ ಬಂಧಿಸಿದರು?

ನಗರ ಅಪರಾಧ ವಿಭಾಗ ಮತ್ತು ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು 20 ತಂಡಗಳನ್ನು ರಚಿಸಿದ್ದರು. ಈ ಘಟನೆ ಸಂಬಂಧ ಅವರು ಈಗ ಸಂಬಂಧವಿಲ್ಲದ ಹಲವಾರು ಶಂಕಿತರನ್ನು ಬಂಧಿಸಿದ್ದರು.

ತನಿಖೆಯ ಸಮಯದಲ್ಲಿ ಆರೋಪಿಯು ದಾದರ್ ರೈಲ್ವೆ ನಿಲ್ದಾಣದ ಹೊರಗೆ ಮೂರು ಬಾರಿ ಕಾಣಿಸಿಕೊಂಡಿದ್ದಾನೆ ಮತ್ತು ಅವನು ವರ್ಲಿ ಕೋಳಿವಾಡಕ್ಕೆ ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನೂರಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ನಂತರ ದಾಳಿಕೋರನು ಆ ಪ್ರದೇಶದ ಕಾರ್ಮಿಕ ಗುತ್ತಿಗೆದಾರನನ್ನು ಭೇಟಿ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕಾರ್ಮಿಕ ಗುತ್ತಿಗೆದಾರರನನ್ನು ಪೊಲೀಸರು ಸಂಪರ್ಕಿಸಿದಾಗ 30 ವರ್ಷದ ಆರೋಪಿಯ ಬಗ್ಗೆ ಎಲ್ಲಾ ವಿವರಗಳನ್ನು ಪಡೆದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುತ್ತಿಗೆದಾರನ ನಿರ್ದೇಶನದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಥಾಣೆ ಪಶ್ಚಿಮದ ಹಿರಾನಂದಾನಿ ಎಸ್ಟೇಟ್‌ನಲ್ಲಿರುವ ಟಿಸಿಎಸ್ ಕಾಲ್ ಸೆಂಟರ್‌ನ ಹಿಂದಿರುವ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಿಕ ಶಿಬಿರದಲ್ಲಿ ಪತ್ತೆಹಚ್ಚಿದರು.

ಈ ಹಿಂದೆ ಆರೋಪಿಯು ಥಾಣೆ ಮೂಲದ ಹೋಟೆಲ್‌ನಲ್ಲಿಯೂ ಕೆಲಸ ಮಾಡುತ್ತಿದ್ದನು ಮತ್ತು ಇಲ್ಲಿಯವರೆಗೆ ಅವನ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ದಾಖಲೆಗಳು ಕಂಡುಬಂದಿಲ್ಲವೆನ್ನಲಾಗಿದೆ.

ಆರೋಪಿಯು ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್‌ ಗೆ ಪ್ರವೇಶಿಸಿದಾಗ ಅವನನ್ನು ನಟನ ಉದ್ಯೋಗಿ ಎಲಿಯಮ್ಮ ಫಿಲಿಪ್ಸ್ ಅಲಿಯಾಸ್ ಲಿಮಾ ಮೊದಲು ನೋಡಿದವರಾಗಿದ್ದಾರೆ. ಅವಳು ಅವನನ್ನು ತಡೆಯಲು ಪ್ರಯತ್ನಿಸಿದಳು. ಆದರೆ ಅವನೊಂದಿಗಿನ ಜಗಳದಲ್ಲಿ ಅವಳ ಕೈಗೆ ಗಾಯಗಳಾಗಿದ್ದವು. ಈ ಸಂದರ್ಭ ಸೈಫ್ ಅಲಿ ಖಾನ್ ಅವರಿಗೆ ಆಕೆಯ ಕಿರುಚಾಟ ಕೇಳಿಬಂತು. ನಂತರ ಅವರು ಮಧ್ಯಪ್ರವೇಶಿಸಿ ದಾಳಿಕೋರನೊಂದಿಗೆ ಹೋರಾಡಿದರು, ಈ ಪ್ರಕ್ರಿಯೆಯಲ್ಲಿ ಅವರು ತೀವ್ರವಾಗಿ ಗಾಯಗೊಂಡರು.

ನಟನಿಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅನೇಕ ಶಸ್ತ್ರಚಿಕಿತ್ಸೆಗಳು ನಡೆದವು ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರದೊಳಗೆ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವರ್ಷಗಳ ಕೆಳಗೆ ವೈದ್ಯನ ವಿರುದ್ಧ ದೂರು ನೀಡಿದ ದಲಿತ ನರ್ಸ್: ಈಗ ವೈದ್ಯನ ಪ್ರತಿದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...