Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...