Homeಮುಖಪುಟಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

ಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

- Advertisement -
- Advertisement -

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣ ಭಾನುವಾರ (ಜ.19) ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಯಿತು. ಭಾರತದ ಪುರುಷರು ಮತ್ತು ಮಹಿಳೆಯರ ತಂಡಗಳು ತಮ್ಮ ಫೈನಲ್‌ ಪಂದ್ಯಗಳಲ್ಲಿ ನೇಪಾಳವನ್ನು ಸೋಲಿಸಿ ಚೊಚ್ಚಲ ಖೋ ಖೋ ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ಕರ್ನಾಟಕದ ಚೈತ್ರಾ ಬಿ. ಅವರ ಅಮೋಘ ಆಟದಿಂದ ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಜಯಭೇರಿ ಬಾರಿಸಿತು. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ಚೊಚ್ಚಲ ವಿಶ್ವಕಿರೀಟ ತನ್ನದಾಗಿಸಿಕೊಂಡಿತು. ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್ಸ್‌ ಅಪ್‌ ಆಯಿತು.

ಮಹಿಳಾ ತಂಡದ ನಾಯಕಿ ಪ್ರಿಯಾಂಕಾ ಇಂಗಲ್ ಬಹು ಟಚ್ ಪಾಯಿಂಟ್‌ಗಳೊಂದಿಗೆ ಮುನ್ನಡೆ ಸಾಧಿಸಿದರು. ವುಮೆನ್ ಇನ್ ಬ್ಲೂ ತಂಡವು ಸರದಿ 1ರಲ್ಲಿ ಭದ್ರ ಬುನಾದಿ ಹಾಕಲು ಸಹಾಯ ಮಾಡಿದರು. ಅಲ್ಲಿ ಅವರು 14 ಅಂಕಗಳನ್ನು ಗಳಿಸಿದರು. ಈ ಮೂಲಕ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿತು. ಅರ್ಧಾವಧಿಯಲ್ಲಿ 34-11 ಮುನ್ನಡೆ ಸಾಧಿಸಿತು, ನಂತರ ಹಿಂತಿರುಗಿ ನೋಡಲಿಲ್ಲ.

ಪಂದ್ಯಾಟದ ಕೊನೆಯ ಸರದಿಯಲ್ಲಿ ಚೈತ್ರಾ ಬಿ ಅವರ ಐದು ನಿಮಿಷಗಳಿಗೂ ಹೆಚ್ಚು ಸಮಯದ ಅದ್ಭುತ ಕನಸಿನ ಓಟವು ಭಾರತವನ್ನು ವಿಜಯಶಾಲಿಯನ್ನಾಗಿ ಮಾಡಿತು. ಖೋ ಖೋ ವಿಶ್ವಕಪ್‌ನ ಮಹಿಳಾ ವಿಭಾಗದ ಮೊದಲ ಚಾಂಪಿಯನ್‌ ಆಗಿ ಭಾರತ ಹೊರ ಹೊಮ್ಮಿತು.

ಪುರುಷರ ತಂಡವೂ ಮೊದಲು ದಾಳಿಗಿಳಿದು ಆಕರ್ಷಕ ನೆಗೆತ, ಸ್ಕೈಡೈವ್‌ ಮೂಲಕ ಮೊಲದ ಸರದಿಯಲ್ಲಿ 26 ಅಂಕಗಳನ್ನು ಕಲೆ ಹಾಕಿತು. ಎರಡನೇ ಸರದಿಯಲ್ಲಿ ಎದುರಾಳಿ ತಂಡವು 18 ಅಂಕ ಪಡೆದರೆ, ಮೂರನೇ ಸರದಿಯಲ್ಲಿ ಮತ್ತೆ ಆತಿಥೇಯ ತಂಡದ ಆಟಗಾರರು 28 ಅಂಕ ಸಂಪಾದಿಸಿ ಅಂತರವನ್ನು ಹಿಗ್ಗಿಸಿಕೊಂಡರು. ಅಂತಿಮ ಸರದಿಯಲ್ಲೂ ಎದುರಾಳಿ ತಂಡ ಹೆಚ್ಚಿನ ಪ್ರತಿರೋಧ ತೋರಲು ಅತಿಥೇಯ ತಂಡ ಅವಕಾಶ ನೀಡಲಿಲ್ಲ.

ಒಟ್ಟು 19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಅಂತಿಮ ಹಣಾ ಹಣಿಯಲ್ಲಿ 78–40ರಿಂದ ಆತಿಥೇಯ ತಂಡ ಪಾರಮ್ಯ ಮೆರೆಯಿತು.

ಪುರುಷರ ವಿಭಾಗದ ಫೈನಲ್‌ನಲ್ಲಿ ನೇಪಾಳ ತಂಡವನ್ನು 54–36ರಿಂದ ಮಣಿಸಿದ ಭಾರತದ ಪಡೆ ಅಜೇಯವಾಗಿ ಉಳಿಯಿತು. ಪುರುಷರ ವಿಭಾಗದಲ್ಲಿ 20 ತಂಡಗಳು ಭಾಗವಹಿಸಿದ್ದವು.

ಇದನ್ನೂ ಓದಿ : ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...