Homeಮುಖಪುಟಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

ಖೋ ಖೋ ವಿಶ್ವಕಪ್ | ಭಾರತದ ಮಹಿಳೆಯರು, ಪುರುಷರ ತಂಡಗಳು ಚಾಂಪಿಯನ್

- Advertisement -
- Advertisement -

ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣ ಭಾನುವಾರ (ಜ.19) ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಯಿತು. ಭಾರತದ ಪುರುಷರು ಮತ್ತು ಮಹಿಳೆಯರ ತಂಡಗಳು ತಮ್ಮ ಫೈನಲ್‌ ಪಂದ್ಯಗಳಲ್ಲಿ ನೇಪಾಳವನ್ನು ಸೋಲಿಸಿ ಚೊಚ್ಚಲ ಖೋ ಖೋ ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ಕರ್ನಾಟಕದ ಚೈತ್ರಾ ಬಿ. ಅವರ ಅಮೋಘ ಆಟದಿಂದ ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಜಯಭೇರಿ ಬಾರಿಸಿತು. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ಚೊಚ್ಚಲ ವಿಶ್ವಕಿರೀಟ ತನ್ನದಾಗಿಸಿಕೊಂಡಿತು. ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್ಸ್‌ ಅಪ್‌ ಆಯಿತು.

ಮಹಿಳಾ ತಂಡದ ನಾಯಕಿ ಪ್ರಿಯಾಂಕಾ ಇಂಗಲ್ ಬಹು ಟಚ್ ಪಾಯಿಂಟ್‌ಗಳೊಂದಿಗೆ ಮುನ್ನಡೆ ಸಾಧಿಸಿದರು. ವುಮೆನ್ ಇನ್ ಬ್ಲೂ ತಂಡವು ಸರದಿ 1ರಲ್ಲಿ ಭದ್ರ ಬುನಾದಿ ಹಾಕಲು ಸಹಾಯ ಮಾಡಿದರು. ಅಲ್ಲಿ ಅವರು 14 ಅಂಕಗಳನ್ನು ಗಳಿಸಿದರು. ಈ ಮೂಲಕ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿತು. ಅರ್ಧಾವಧಿಯಲ್ಲಿ 34-11 ಮುನ್ನಡೆ ಸಾಧಿಸಿತು, ನಂತರ ಹಿಂತಿರುಗಿ ನೋಡಲಿಲ್ಲ.

ಪಂದ್ಯಾಟದ ಕೊನೆಯ ಸರದಿಯಲ್ಲಿ ಚೈತ್ರಾ ಬಿ ಅವರ ಐದು ನಿಮಿಷಗಳಿಗೂ ಹೆಚ್ಚು ಸಮಯದ ಅದ್ಭುತ ಕನಸಿನ ಓಟವು ಭಾರತವನ್ನು ವಿಜಯಶಾಲಿಯನ್ನಾಗಿ ಮಾಡಿತು. ಖೋ ಖೋ ವಿಶ್ವಕಪ್‌ನ ಮಹಿಳಾ ವಿಭಾಗದ ಮೊದಲ ಚಾಂಪಿಯನ್‌ ಆಗಿ ಭಾರತ ಹೊರ ಹೊಮ್ಮಿತು.

ಪುರುಷರ ತಂಡವೂ ಮೊದಲು ದಾಳಿಗಿಳಿದು ಆಕರ್ಷಕ ನೆಗೆತ, ಸ್ಕೈಡೈವ್‌ ಮೂಲಕ ಮೊಲದ ಸರದಿಯಲ್ಲಿ 26 ಅಂಕಗಳನ್ನು ಕಲೆ ಹಾಕಿತು. ಎರಡನೇ ಸರದಿಯಲ್ಲಿ ಎದುರಾಳಿ ತಂಡವು 18 ಅಂಕ ಪಡೆದರೆ, ಮೂರನೇ ಸರದಿಯಲ್ಲಿ ಮತ್ತೆ ಆತಿಥೇಯ ತಂಡದ ಆಟಗಾರರು 28 ಅಂಕ ಸಂಪಾದಿಸಿ ಅಂತರವನ್ನು ಹಿಗ್ಗಿಸಿಕೊಂಡರು. ಅಂತಿಮ ಸರದಿಯಲ್ಲೂ ಎದುರಾಳಿ ತಂಡ ಹೆಚ್ಚಿನ ಪ್ರತಿರೋಧ ತೋರಲು ಅತಿಥೇಯ ತಂಡ ಅವಕಾಶ ನೀಡಲಿಲ್ಲ.

ಒಟ್ಟು 19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಅಂತಿಮ ಹಣಾ ಹಣಿಯಲ್ಲಿ 78–40ರಿಂದ ಆತಿಥೇಯ ತಂಡ ಪಾರಮ್ಯ ಮೆರೆಯಿತು.

ಪುರುಷರ ವಿಭಾಗದ ಫೈನಲ್‌ನಲ್ಲಿ ನೇಪಾಳ ತಂಡವನ್ನು 54–36ರಿಂದ ಮಣಿಸಿದ ಭಾರತದ ಪಡೆ ಅಜೇಯವಾಗಿ ಉಳಿಯಿತು. ಪುರುಷರ ವಿಭಾಗದಲ್ಲಿ 20 ತಂಡಗಳು ಭಾಗವಹಿಸಿದ್ದವು.

ಇದನ್ನೂ ಓದಿ : ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...