Homeಮುಖಪುಟಮಾನನಷ್ಟ ಮೊಕದ್ದಮೆ | ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಮಾನನಷ್ಟ ಮೊಕದ್ದಮೆ | ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಜ.20) ತಡೆ ನೀಡಿದೆ.

2019ರ ಲೋಕಸಭಾ ಚುನಾವಣೆಗೆ ಮುನ್ನ ಜಾರ್ಖಂಡ್‌ನ ಚೈಬಾಸಾದಲ್ಲಿ ನಡೆದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಉಲ್ಲೇಖಿಸಿದ ಆರೋಪವಿದೆ. ಈ ಸಂಬಂಧ ಬಿಜೆಪಿ ನಾಯಕ ನವೀನ್ ಝಾ ಅವರು ದೂರು ದಾಖಲಿಸಿದ್ದರು.

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ “ವಿಚಾರಣಾ ನ್ಯಾಯಾಲಯ ಪ್ರಕರಣದ ವಿಚಾರಣೆ ಮುಂದುವರೆಸುವುದಕ್ಕೆ ತಡೆಯಾಜ್ಞೆ ನೀಡಿದೆ ಎಂದು ವರದಿಗಳು ಹೇಳಿವೆ.

ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಗಾಂಧಿ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ನೀವು ನೊಂದ ವ್ಯಕ್ತಿಯಲ್ಲದಿರುವಾಗ ದೂರು ನೀಡಲು ಹೇಗೆ ಸಾಧ್ಯ ಎಂದು ನವೀನ್ ಝಾ ದೂರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಂಘ್ವಿ ಅವರ ಅರ್ಜಿಯನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಜಾರ್ಖಂಡ್ ಸರ್ಕಾರ ಮತ್ತು ದೂರುದಾರ (ಝಾ) ಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಜಾರ್ಖಂಡ್ ಹೈಕೋರ್ಟ್ ತಮ್ಮ ಅರ್ಜಿಯನ್ನು ವಜಾಗೊಳಿಸಿದ ನಂತರ, ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ 2018ರ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಹುಲ್ ಗಾಂಧಿಯವರ ಹೇಳಿಕೆಗಳು ‘ಪ್ರಥಮ ನೋಟಕ್ಕೆ ಮಾನನಷ್ಟಕರ’ ಎಂದು ಪರಿಗಣಿಸಿ, ಜಾರ್ಖಂಡ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಂಬುಜ್ ನಾಥ್ ಅವರು ಅರ್ಜಿಯನ್ನು ವಜಾಗೊಳಿಸಿದ್ದರು.

ಮಾರ್ಚ್ 18, 2018 ರಂದು ನಡೆದ ಕಾಂಗ್ರೆಸ್ ಸಮಗ್ರ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅಮಿತ್ ಶಾ ಅವರ ವಿರುದ್ದ ಮಾನನಷ್ಟದ ಹೇಳಿಕೆ ನೀಡಿದ್ದಾರೆ ಎಂದು ಝಾ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ರಾಹುಲ್ ಗಾಂಧಿ ಹೇಳಿಕೆ “ಭಾರತೀಯ ಜನತಾ ಪಕ್ಷ (ಬಿಜೆಪಿ) ಗಾಗಿ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿರುವ” ಎಲ್ಲಾ ಕಾರ್ಯಕರ್ತರು, ಬೆಂಬಲಿಗರು ಮತ್ತು ನಾಯಕರಿಗೆ ಮಾಡಿದ ಅವಮಾನ ಎಂದು ಅವರು ಹೇಳಿದ್ದರು.

ಇದನ್ನೂ ಓದಿ : ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...