Homeಅಂತರಾಷ್ಟ್ರೀಯ35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

- Advertisement -
- Advertisement -

ನವೆಂಬರ್‌ನಲ್ಲಿ ದಕ್ಷಿಣ ನಗರವಾದ ಝುಹೈನಲ್ಲಿ ನಡೆದ ಉದ್ದೇಶಪೂರ್ವಕ ಕಾರು ಅಪಘಾತದಲ್ಲಿ 35 ಜನರನ್ನು ಕೊಂದ ವ್ಯಕ್ತಿಯನ್ನು ಚೀನಾವು ಸೋಮವಾರ ಗಲ್ಲಿಗೇರಿಸಿದೆ.

ನವೆಂಬರ್ 11ರಂದು 62 ಹರೆಯದ ಫ್ಯಾನ್ ವೀಕಿ ಎಂಬಾತ ಕ್ರೀಡಾ ಸಂಕೀರ್ಣದ ಹೊರಗೆ ವ್ಯಾಯಾಮ ಮಾಡುತ್ತಿದ್ದ ಜನರ ಗುಂಪಿನ ಕಡೆ ಉದ್ದೇಶಪೂರ್ವಕವಾಗಿ ಸಣ್ಣ ಎಸ್‌ಯುವಿಯನ್ನು ಚಲಾಯಿಸಿದನು. ಇದು 2014ರ ನಂತರ ಚೀನಾದಲ್ಲಿ ನಡೆದ ಅತ್ಯಂತ ಕೆಟ್ಟ ಅಪರಾಧ ಪ್ರಕರಣವಾಗಿತ್ತು.

ಕಳೆದ ತಿಂಗಳು ಅವನಿಗೆ ಮರಣದಂಡನೆ ವಿಧಿಸಲಾಯಿತು, ನ್ಯಾಯಾಲಯವು ಅವನ ಯೋಚನೆಯು ಅತ್ಯಂತ ಕೆಟ್ಟದ್ದಾಗಿತ್ತು ಮತ್ತು ಅಪರಾಧದ ಸ್ವರೂಪವು ಅತ್ಯಂತ ಭೀಕರವಾಗಿತ್ತು ಎಂದು ಹೇಳಿದೆ.

ಸೋಮವಾರ ಝುಹೈ ನ್ಯಾಯಾಲಯವು ಸುಪ್ರೀಂ ಪೀಪಲ್ಸ್ ಕೋರ್ಟ್ ಹೊರಡಿಸಿದ ಮರಣದಂಡನೆ ಆದೇಶದ ಪ್ರಕಾರ ಫ್ಯಾನ್ ವೀಕಿಯುನನ್ನು ಗಲ್ಲಿಗೇರಿಸಿದೆ ಎಂದು ರಾಜ್ಯ ಪ್ರಸಾರಕ ಸಿಸಿಟಿವಿ ತಿಳಿಸಿದೆ.

ಪುರಸಭೆಯ ಸಾರ್ವಜನಿಕ ಅಭಿಯೋಜಕರು ಕಾನೂನಿಗೆ ಅನುಸಾರವಾಗಿ (ಮರಣದಂಡನೆ) ಮೇಲ್ವಿಚಾರಣೆ ಮಾಡಲು ಸಿಬ್ಬಂದಿಯನ್ನು ಕಳುಹಿಸಿದ್ದಾರೆ ಎಂದು ಸಿಸಿಟಿವಿ ವರದಿ ಮಾಡಿದೆ.

ಫ್ಯಾನ್ ನ ದಾಳಿಯು ಚೀನಾದಲ್ಲಿ ವ್ಯಾಪಕ ಸಾರ್ವಜನಿಕ ಆಘಾತ ಮತ್ತು ಸಮಾಜದ ಸ್ಥಿತಿಯ ಬಗ್ಗೆ ಆತ್ಮಾವಲೋಕನಕ್ಕೆ ಕಾರಣವಾಗಿತ್ತು. ಸ್ವತಃ ಚಾಕುವಿನಿಂದ ಕೊಯ್ದುಕೊಂಡು ಕೋಮಾ ಸ್ಥಿತಿಯಲ್ಲಿದ್ದ ಆತನನ್ನು ಸ್ಥಳದಲ್ಲೇ ಬಂಧಿಸಲಾಯಿತು ಎಂದು ಪೊಲೀಸರು ಆ ಸಮಯದಲ್ಲಿ ತಿಳಿಸಿದ್ದರು.

ಕಳೆದ ತಿಂಗಳು ನಡೆದ ವಿಚಾರಣೆಯಲ್ಲಿ ಫ್ಯಾನ್ ಕೆಲವು ಬಲಿಪಶುಗಳ ಕುಟುಂಬಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರ ಮುಂದೆ ತಪ್ಪೊಪ್ಪಿಕೊಂಡನು ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ.

ವಿಚ್ಛೇದನದ ನಂತರ ಆಸ್ತಿ ವಿಭಜನೆಯ ಬಗ್ಗೆ ವೈಯಕ್ತಿಕ ಹತಾಶೆ ಮತ್ತು ಅತೃಪ್ತಿಯ ಕೋಪವನ್ನು ಹೊರಹಾಕಲು ನಿರ್ಧರಿಸಿ ಈ ಕೃತ್ಯವೆಸಗಿದ್ದಾನೆ ಎಂದು ನ್ಯಾಯಾಲಯವು ಕಂಡುಕೊಂಡಿತ್ತು. ಅವನು  ಆಯ್ಕೆಮಾಡಿಕೊಂಡಿದ್ದ ಅಪರಾಧ ಕೃತ್ಯವು ವಿಶೇಷವಾಗಿ ಕ್ರೂರವಾಗಿತ್ತು ಮತ್ತು ಇದರ ಪರಿಣಾಮಗಳು ವಿಶೇಷವಾಗಿ ತೀವ್ರವಾಗಿದ್ದವು, ಸಮಾಜಕ್ಕೆ ಗಮನಾರ್ಹ ಹಾನಿಯನ್ನುಂಟುಮಾಡಿತ್ತು ಎಂದು ಅದು ತೀರ್ಪು ನೀಡಿದೆ.

ಚೀನಾದಲ್ಲಿ ಸಾಮಾನ್ಯವಾಗಿ ಅನೇಕ ಪಾಶ್ಚಿಮಾತ್ಯ ದೇಶಗಳಿಗಿಂತ ಹಿಂಸಾತ್ಮಕ ಅಪರಾಧಗಳು ಅಪರೂಪ, ಆದರೆ ಕಳೆದ ವರ್ಷ ದೇಶವು ಈ ಸಾಮೂಹಿಕ ಸಾವುನೋವುಗಳ ಸರಣಿಯನ್ನು ಕಂಡಿತು. ಈ ಕಾರು ದಾಳಿಯು ಆಡಳಿತ ಕಮ್ಯುನಿಸ್ಟ್ ಪಕ್ಷದ ಕಟ್ಟುನಿಟ್ಟಾದ ಸಾರ್ವಜನಿಕ ಭದ್ರತೆ ಮತ್ತು ಅಪರಾಧ ತಡೆಗಟ್ಟುವಿಕೆಯ ಖ್ಯಾತಿಯನ್ನು ಪ್ರಶ್ನಿಸಿತ್ತು.

ಇನ್ನೊಂದು ಪ್ರಕರಣದಲ್ಲಿ ನವೆಂಬರ್‌ನಲ್ಲಿ ನಡೆದ ಸಾಮೂಹಿಕ ಇರಿತದಲ್ಲಿ ಎಂಟು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ವ್ಯಕ್ತಿಗೆ ಪೂರ್ವ ಜಿಯಾಂಗ್ಸು ಪ್ರಾಂತ್ಯದ ಪ್ರತ್ಯೇಕ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು ಎಂದು ಸಿಸಿಟಿವಿ ಸೋಮವಾರ ವರದಿ ಮಾಡಿದೆ.

ವುಕ್ಸಿ ನಗರದ ವೃತ್ತಿಪರ ಶಾಲೆಯ ಮೇಲೆ ದಾಳಿ ಮಾಡಿದ 21 ವರ್ಷದ ಮಾಜಿ ವಿದ್ಯಾರ್ಥಿ ಕ್ಸು ಜಿಯಾಜಿನ್‌ನನ್ನು “ಕಾನೂನಿನ ಪ್ರಕಾರ” ಗಲ್ಲಿಗೇರಿಸಲಾಗಿದೆ ಎಂದು ಸಿಸಿಟಿವಿ ವರದಿ ಮಾಡಿದೆ.

ಈತನಿಗೂ ಡಿಸೆಂಬರ್‌ನಲ್ಲಿ ಮರಣದಂಡನೆ ವಿಧಿಸಲಾಗಿತ್ತು, ಆತನ ಅಪರಾಧವು “ಅಸಾಧಾರಣ ಗಂಭೀರವಾಗಿದೆ” ಎಂದು ನ್ಯಾಯಾಲಯ ತೀರ್ಮಾನಿಸಿದೆ ಎಂದು ಸಿಸಿಟಿವಿ ತಿಳಿಸಿದೆ.

ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...