Homeಕರ್ನಾಟಕನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

- Advertisement -
- Advertisement -

“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ (ಜ.20) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಪಕ್ಷ, ಹೈಕಮಾಂಡ್ ಇದೆ. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ, ಆಂತರಿಕ ಬೇಗುದಿ ಇಲ್ಲವೇ ಎಂಬ ಪ್ರಶ್ನೆಗೆ, “ಯಾವ ಬಂಡಾಯವೂ ಇಲ್ಲ. ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ. ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ” ಎಂದು ಹೇಳಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೇ ಬದಲಾವಣೆ ಮಾಡಬೇಕು ಎಂದು ಕೆಲವು ಸಚಿವರು ರಾಹುಲ್ ಗಾಂಧಿ ಅವರಿಗೆ ದೂರು ನೀಡುತ್ತಿದ್ದಾರಂತೆ ಎಂಬ ಬಗ್ಗೆ ಕೇಳಿದಾಗ, “ಯಾರೋ ಸುಳ್ಳು ಮಾಹಿತಿ ನೀಡಿ ಮಾಧ್ಯಮಗಳ ಘನತೆಯನ್ನೇ ಹಾಳು ಮಾಡುತ್ತಿದ್ದಾರೆ. ನಾನು ಭಾನುವಾರ ಹಿರಿಯ ಶಾಸಕರ ಮನೆಗೆ ಭೇಟಿ ನೀಡಿದ್ದೆ. ಅವರಿಗೆ ಯಾರ ಜೊತೆಯೋ ಜಗಳ ಇತ್ತಂತೆ ಎಂದು ಒಂದಷ್ಟು ಟಿವಿ ಮಾಧ್ಯಮಗಳು ನೂತನ ಕಥೆಯನ್ನು ಸೃಷ್ಟಿಸಿದ್ದವು. ಫಿರೋಜ್ ಸೇಠ್ ಅವರು ಪಕ್ಷದ ಹಿರಿಯ ನಾಯಕರು. ನನ್ನ ಜೊತೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಮಾವೇಶ ನಡೆಯುತ್ತಿದೆ. ಅವರನ್ನು ಈ ಸಮಾವೇಶದ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ. ಸಂಘಟನೆ ದೃಷ್ಟಿಯಿಂದ ಜಿಲ್ಲಾಧ್ಯಕ್ಷರ ಜೊತೆ ಹೋಗಿ ಭೇಟಿ ಮಾಡಿದ್ದೆ. ಆದರೆ, ಮಾಧ್ಯಮಗಳು ಏನೇನೋ ವರದಿ ಬಿತ್ತರ ಮಾಡಿದವು. ಯಾರೋ ಸ್ಟೋರಿ ಪ್ಲಾಂಟ್ ಮಾಡಿದ್ದನ್ನು ನಂಬಿ ಮಾಧ್ಯಮಗಳು ತಮ್ಮ ಘನತೆಯನ್ನು ಹಾಳು ಮಾಡಿಕೊಳ್ಳಬಾರದು” ಎಂದರು.

ಕಾಂಗ್ರೆಸ್ ನ 60 ಜನ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ನೀಚ ರಾಜಕಾರಣದ ಬಗ್ಗೆ ನೀವು ಪ್ರಶ್ನೆ ಮಾಡಿದರೆ ಹೇಗೆ? ಇಂತಹ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಬಗ್ಗೆ ಗಮನಹರಿಸಿ. ನಿಮಗೆ ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ. ಕಾಂಗ್ರೆಸ್‌ಗೆ ಶಕ್ತಿ ತುಂಬಲು ಅನೇಕ ಹೋರಾಟ, ತ್ಯಾಗ ಮಾಡಲಾಗಿದೆ. ಈ ಬೆಳಗಾವಿ ಭೂಮಿಯಿಂದಲೇ ಗಾಂಧಿ ಬಾವಿಯಿಂದ ನೀರು ತೆಗೆದು ಸ್ವಚ್ಚಗೊಳಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಾಗಿದೆ” ಎಂದು ಹೇಳಿದರು.

2023ರ ಚುನಾವಣೆಯಲ್ಲಿ ಫಿರೋಜ್ ಸೇಠ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಸತೀಶ್ ಜಾರಕಿಹೊಳಿ ಅವರು ಕಾರಣ ಎನ್ನುವ ಮಾತಿನ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ನನಗೆ ಎಲ್ಲರೂ ಒಂದೇ. ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ. ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ. ನನಗೆ ಪಕ್ಷವೇ ಮುಖ್ಯ. ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ” ಎಂದರು.

“ಪಕ್ಷಕ್ಕಾಗಿ ಮೊದಲಿನಿಂದಲೂ ಹಲವಾರು ತ್ಯಾಗಗಳನ್ನು ಮಾಡಿದ್ದೇನೆ. ಧರಂಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿಯೂ ಉಸಿರು ಬಿಗಿ ಹಿಡಿದುಕೊಂಡು ತ್ಯಾಗ ಮಾಡಿದ್ದೇನೆ. ನನಗೆ ಪಕ್ಷವೇ ಮುಖ್ಯ. ನಾನು ಪಕ್ಷದಿಂದ ಬೆಳೆದವನು. ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಮಾಧ್ಯಮದವರು ಯಾರ ಮಾತನ್ನೋ ಕೇಳಬೇಡಿ” ಎಂದರು.

ಎಷ್ಟು ದಿನ ಶಿವಕುಮಾರ್ ತ್ಯಾಗ ಮಾಡುತ್ತಾರೆ, ತ್ಯಾಗಕ್ಕೆ ಫಲ ಯಾವಾಗ ಸಿಗುತ್ತದೆ ಎಂದು ಕೇಳಿದಾಗ, “ನಾನು ತ್ಯಾಗ ಮಾಡಿಕೊಂಡೆ ಬರುತ್ತೇನೆ. ನನಗೆ ಫಲದ ಅವಶ್ಯಕತೆಯೇ ಇಲ್ಲ. ಜನಕ್ಕೆ ಒಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ನನಗೆ” ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಸಂವಿಧಾನ ಉಳಿಸುವುದು ನಮ್ಮ ಮೂಲ ಮಂತ್ರ

“ಮಹಾತ್ಮ ಗಾಂಧಿ ಅವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ, ಸಂವಿಧಾನ ರಕ್ಷಣೆಯೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಉದ್ಧೇಶ. ಸಾಮಾಜಿಕ ನ್ಯಾಯವನ್ನು ಉಳಿಸುವುದೇ ನಮ್ಮ ಮೂಲ ಮಂತ್ರ. ಕಳೆದ ಬಾರಿ ರೂಪಿಸಿದ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದಿವರೆಸಲಾಗುವುದು” ಎಂದು ಹೇಳಿದರು.

“ಸುಮಾರು 60ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ನಾಯಕರು, ಅತಿಥಿಗಳು, ಸಂಸದರು, ಕಾರ್ಯಕಾರಿ ಸಮಿತಿ ಸದಸ್ಯರು ಬೆಳಗಾವಿ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಸಚಿವರು, ಶಾಸಕರು, ಹಿರಿಯ ನಾಯಕರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದು, ಒಂದಷ್ಟು ನಾಯಕರಿಗೆ ಮುಖ್ಯ ವೇದಿಕೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

ದೆಹಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಕೇಳಿದಾಗ, “ನಾನೇ ಖುದ್ದಾಗಿ ದೆಹಲಿಗೆ ಹೋಗಿ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ನೀಡುವ ಪ್ಯಾರಿ ದೀದಿ ಯೋಜನೆ ಪ್ರಕಟಣೆ ಮಾಡಿದ್ದೆ” ಎಂದರು.

ಎಲ್ಲಾ ರಾಜ್ಯಗಳ ಸಿಎಂಗಳಿದ್ದು ಸಿದ್ದರಾಮಯ್ಯ ಅವರನ್ನು ಕೈ ಬಿಟ್ಟಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿದ್ದಾರೆ. ಎಲ್ಲಾ ಮಂತ್ರಿಗಳು, ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಎಐಸಿಸಿ ಸಮಯ ನೀಡಿದೆ” ಎಂದರು.

ಸುವರ್ಣಸೌಧದ ಗಾಂಧಿ ಪ್ರತಿಮೆಯನ್ನು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ಕೇಳಿದಾಗ, “ಇದನ್ನು ನಿರ್ವಹಿಸಿದ್ದು ಲೋಕೋಪಯೋಗಿ ಇಲಾಖೆ, ಶಿಲ್ಪಿ ಯಾರು ಎಂದು ನಾನು ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮುಡಾ ಕುರಿತ ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...