Homeಮುಖಪುಟ45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ "ಅಸ್ಪೃಶ್ಯತಾ ಗೋಡೆ"

45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”

- Advertisement -
- Advertisement -

ವಿರುಧುನಗರ: ಚೆಯ್ಯಕೋಡಿ ಎಂಬ ಮಹಿಳೆ ಶೌಚಾಲಯಕ್ಕಾಗಿ ಪ್ರತಿದಿನ ಬೆಳಿಗ್ಗೆ 10 ನಿಮಿಷಗಳಿಗೂ ಹೆಚ್ಚು ಕಾಲ ಬಂಜರು ಭೂಮಿಗೆ ನಡೆದುಕೊಂಡು ಹೋಗುತ್ತಾಳೆ. ಒಂದು ಕಲ್ಲು ಎಸೆಯುವಷ್ಟು ದೂರದಲ್ಲಿರುವ ಶೌಚಾಲಯಕ್ಕೆ ಹೋಗುವುದಕ್ಕಾಗಿ ಇಷ್ಟು ಸಮಯ ಬೇಕಾಗಿರುವುದಕ್ಕೆ “ಅಸ್ಪೃಶ್ಯತಾ ಗೋಡೆ”  ಕಾರಣವಾಗಿದೆ.

ಇಷ್ಟು ಮಾತ್ರವಲ್ಲ ಹತ್ತಿರದ ಕೊಳಕ್ಕೆ ಹೋಗಿ ಒಂದು ಚೊಂಬು ನೀರು ತರಬೇಕಿದೆ. ಈ ಸಾರ್ವಜನಿಕ ಶೌಚಾಲಯವು ಅವಳ ಮನೆಯಿಂದ ಸ್ವಲ್ಪ ದೂರದಲ್ಲಿದೆ, ಆದರೆ ಅದು ಸುಮಾರು ಐದು ಮೀಟರ್ ಉದ್ದದ 10 ಅಡಿ ಎತ್ತರದ ಗೋಡೆಯ ಹಿಂದೆ ಇದೆ. ಈ ಗೋಡೆ ಇಡೀ ಹಳ್ಳಿಯನ್ನೇ ಮರೆಮಾಡುತ್ತದೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಡಬ್ಲ್ಯೂ ಪುದುಪಟ್ಟಿ ಗ್ರಾಮದ ಗ್ರಾಮಸ್ಥರು ಇದನ್ನು ಕರೆಯುವಂತೆ ಇದು “ಅಸ್ಪೃಶ್ಯತಾ ಗೋಡೆ” ಯಾಗಿದೆ ಮತ್ತು ದೇಶದಲ್ಲಿ ಜಾತಿ ತಾರತಮ್ಯದ ನಿಷೇಧದ ಹೊರತಾಗಿಯೂ ಮುಂದುವರಿದಿರುವ ಆಳವಾಗಿ ಬೇರೂರಿರುವ ಜಾತಿ ಪ್ರತ್ಯೇಕತೆಯ ಸಂಕೇತವು ಆಗಿದೆ.

2010ರಲ್ಲಿ ಗ್ರಾಮದ ಮೇಲ್ಜಾತಿಯ ಸಾಲಿಯಾರ್ ಸಮುದಾಯದಿಂದ ನಿರ್ಮಿಸಲ್ಪಟ್ಟ ಈ ಗೋಡೆಯು, ಹಳ್ಳಿಯ ಸಾಲಿಯಾರ್ ಬದಿಯಲ್ಲಿರುವ ಸುಮಾರು 45 ದಲಿತ ಕ್ರಿಶ್ಚಿಯನ್ ಕುಟುಂಬಗಳು ಈ ಸಾರ್ವಜನಿಕ ಶೌಚಾಲಯ ಬಳಕೆ ಮಾಡಿದಾಗ ಸ್ಥಳೀಯ ಅನುದಾನಿತ ಶಾಲೆ ಅಥವಾ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಬಳಸುವುದನ್ನು ತಡೆಯುತ್ತದೆ.

“ಇದು ನಿಜವಾಗಿಯೂ ನೋವಿನ ಸಂಗತಿ, ಆದರೆ ನಮಗೆ ಏನು ಮಾಡಲು ಸಾಧ್ಯ? ನಮ್ಮ ನೆರೆಹೊರೆಯಲ್ಲಿ ನಡೆಯುವುದನ್ನು ನಾನು ಹೇಳಲು ಇಷ್ಟಪಡುವುದಿಲ್ಲ” ಎಂದು ಚೆಯ್ಯಕೋಡಿ ಎಂಬ ಮಹಿಳೆ ತನ್ನ ಹೆಂಚಿನ ಹುಲ್ಲಿನ ಮನೆಯ ಹೊರಗಿನ ಡಾಂಬರು ಹಾಕದ ಬೀದಿಯಲ್ಲಿ ಕುಳಿತು, ತನ್ನ ಇಬ್ಬರು ನೆರೆಹೊರೆಯವರೊಂದಿಗೆ  ಕಾಗದದಲ್ಲಿ ಬತ್ತಿಗಳನ್ನು ಉರುಳಿಸುತ್ತಾ ತನ್ನ ಅಳಲನ್ನು ತೋಡಿಕೊಂಡರು.

ಈ ಸಂಬಂಧ ದಲಿತ ಕುಟುಂಬಗಳು ಹಲವಾರು ದೂರುಗಳನ್ನು ದಾಖಲಿಸಿವೆ ಮತ್ತು ಸಾರ್ವಜನಿಕ ಆಸ್ತಿಯ ಮೇಲೆ ನಿರ್ಮಿಸಿರುವ ಈ “ಅಸ್ಪೃಶ್ಯತಾ ಗೋಡೆ”ಯನ್ನು ಕೆಡವಲು ಅಧಿಕಾರಿಗಳನ್ನು ಒತ್ತಾಯಿಸಲು ಪ್ರತಿಭಟನೆಗಳನ್ನು ನಡೆಸಿವೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಜೂನ್ 2023ರಲ್ಲಿ ಈ ಗ್ರಾಮದ ವ್ಯಾಪ್ತಿಗೆ ಬರುವ ವಾಟ್ರಾಪ್ ತಾಲ್ಲೂಕಿನ ಅಂದಿನ ತಹಶೀಲ್ದಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗೆ (VAO) ನಿರ್ದೇಶನ ನೀಡಿದ್ದರು. ಆದಾಗ್ಯೂ ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ದಲಿತರು ಇಲ್ಲಿಯವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳುತ್ತಾರೆ.

ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ಆಡಳಿತ ಅಧಿಕಾರಿ ಆರ್.ನಾರಾಯಣಕುಮಾರ್, ಈ ವಿಷಯವು ನ್ಯಾಯಾಲಯದಲ್ಲಿದೆ ಎಂದು ಹೇಳಿ ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ, ಆದ್ದರಿಂದ ನಾನು ಅದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾರಾಯಣಕುಮಾರ್ ಉಲ್ಲೇಖಿಸುತ್ತಿರುವ ನ್ಯಾಯಾಲಯದ ಪ್ರಕರಣವು ಮದ್ರಾಸ್ ಹೈಕೋರ್ಟ್‌ನಲ್ಲಿ ಗ್ರಾಮದ ನಿವಾಸಿ ಮತ್ತು ಸರ್ಕಾರಿ ಸ್ವಾಮ್ಯದ ಭಾರತಿಯಾರ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಎ. ಪ್ರಕಾಶ್ ಸಲ್ಲಿಸಿದ ಅರ್ಜಿಯಾಗಿದೆ.

32 ವರ್ಷದ ಇವರನ್ನು ಜೂನ್ 2023ರಲ್ಲಿ ಗೋಡೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಯಿತು ಮತ್ತು ಜುಲೈ 2023ರಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ತಮಗೆ ತಿಳಿದಿಲ್ಲ, ಕಾನೂನಿನ ಅಡಿಯಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಲಾಗಿದೆ. ಈ ವಿಷಯದ ಬಗ್ಗೆ ನನಗೆ ಇನ್ನೂ ದೂರು ಬಂದಿಲ್ಲ ಅಥವಾ ನನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ವಿರುಧುನಗರ ಜಿಲ್ಲಾಧಿಕಾರಿ ಡಾ. ವಿ.ಪಿ.ಜಯಶೀಲನ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಗೋಡೆಯ ಇನ್ನೊಂದು ಬದಿಯಲ್ಲಿರುವ ಸಾಲಿಯಾರ್ ಸಮುದಾಯವು  ಹೆಚ್ಚಾಗಿ ನೇಯ್ಗೆ ಚಟುವಟಿಕೆಗಳಲ್ಲಿ ತೊಡಗಿದೆ. ಸರ್ಕಾರಿ ಅನುದಾನಿತ ಬಾಲಸುಬ್ರಮಣಿಯರ್ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮದೇ ಆದ ಆಸ್ತಿಯ ಮೇಲೆ ಗೋಡೆಯನ್ನು ನಿರ್ಮಿಸಲಾಗಿರುವುದರಿಂದ ಅದರ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.

ಯಾರಾದರೂ ಅಥವಾ ಯಾವುದಾದರೂ ಪ್ರಾಣಿ ಇನ್ನೊಂದು ಕಡೆಯಿಂದ ಬಂದರೆ ಏನು ಮಾಡುವುದು. ಸಮುದಾಯವು ತಮ್ಮ ಶಾಲೆ ಮತ್ತು ಜಮೀನಿನಲ್ಲಿ ಗೋಡೆಯನ್ನು ನಿರ್ಮಿಸಿದೆ. ಸರ್ಕಾರವು ಶಿಕ್ಷಕರಿಗೆ ಸಂಬಳವನ್ನು ಮಾತ್ರ ಪಾವತಿಸುತ್ತಿದೆ ಎಂದು ಸಾಲಿಯಾರ್ ಸಮುದಾಯದ 55 ವರ್ಷದ ಸುಂದರಾನಂದಮ್ ಹೇಳುತ್ತಾರೆ.

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...