Homeಮುಖಪುಟ45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ "ಅಸ್ಪೃಶ್ಯತಾ ಗೋಡೆ"

45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”

- Advertisement -
- Advertisement -

ವಿರುಧುನಗರ: ಚೆಯ್ಯಕೋಡಿ ಎಂಬ ಮಹಿಳೆ ಶೌಚಾಲಯಕ್ಕಾಗಿ ಪ್ರತಿದಿನ ಬೆಳಿಗ್ಗೆ 10 ನಿಮಿಷಗಳಿಗೂ ಹೆಚ್ಚು ಕಾಲ ಬಂಜರು ಭೂಮಿಗೆ ನಡೆದುಕೊಂಡು ಹೋಗುತ್ತಾಳೆ. ಒಂದು ಕಲ್ಲು ಎಸೆಯುವಷ್ಟು ದೂರದಲ್ಲಿರುವ ಶೌಚಾಲಯಕ್ಕೆ ಹೋಗುವುದಕ್ಕಾಗಿ ಇಷ್ಟು ಸಮಯ ಬೇಕಾಗಿರುವುದಕ್ಕೆ “ಅಸ್ಪೃಶ್ಯತಾ ಗೋಡೆ”  ಕಾರಣವಾಗಿದೆ.

ಇಷ್ಟು ಮಾತ್ರವಲ್ಲ ಹತ್ತಿರದ ಕೊಳಕ್ಕೆ ಹೋಗಿ ಒಂದು ಚೊಂಬು ನೀರು ತರಬೇಕಿದೆ. ಈ ಸಾರ್ವಜನಿಕ ಶೌಚಾಲಯವು ಅವಳ ಮನೆಯಿಂದ ಸ್ವಲ್ಪ ದೂರದಲ್ಲಿದೆ, ಆದರೆ ಅದು ಸುಮಾರು ಐದು ಮೀಟರ್ ಉದ್ದದ 10 ಅಡಿ ಎತ್ತರದ ಗೋಡೆಯ ಹಿಂದೆ ಇದೆ. ಈ ಗೋಡೆ ಇಡೀ ಹಳ್ಳಿಯನ್ನೇ ಮರೆಮಾಡುತ್ತದೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಡಬ್ಲ್ಯೂ ಪುದುಪಟ್ಟಿ ಗ್ರಾಮದ ಗ್ರಾಮಸ್ಥರು ಇದನ್ನು ಕರೆಯುವಂತೆ ಇದು “ಅಸ್ಪೃಶ್ಯತಾ ಗೋಡೆ” ಯಾಗಿದೆ ಮತ್ತು ದೇಶದಲ್ಲಿ ಜಾತಿ ತಾರತಮ್ಯದ ನಿಷೇಧದ ಹೊರತಾಗಿಯೂ ಮುಂದುವರಿದಿರುವ ಆಳವಾಗಿ ಬೇರೂರಿರುವ ಜಾತಿ ಪ್ರತ್ಯೇಕತೆಯ ಸಂಕೇತವು ಆಗಿದೆ.

2010ರಲ್ಲಿ ಗ್ರಾಮದ ಮೇಲ್ಜಾತಿಯ ಸಾಲಿಯಾರ್ ಸಮುದಾಯದಿಂದ ನಿರ್ಮಿಸಲ್ಪಟ್ಟ ಈ ಗೋಡೆಯು, ಹಳ್ಳಿಯ ಸಾಲಿಯಾರ್ ಬದಿಯಲ್ಲಿರುವ ಸುಮಾರು 45 ದಲಿತ ಕ್ರಿಶ್ಚಿಯನ್ ಕುಟುಂಬಗಳು ಈ ಸಾರ್ವಜನಿಕ ಶೌಚಾಲಯ ಬಳಕೆ ಮಾಡಿದಾಗ ಸ್ಥಳೀಯ ಅನುದಾನಿತ ಶಾಲೆ ಅಥವಾ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಬಳಸುವುದನ್ನು ತಡೆಯುತ್ತದೆ.

“ಇದು ನಿಜವಾಗಿಯೂ ನೋವಿನ ಸಂಗತಿ, ಆದರೆ ನಮಗೆ ಏನು ಮಾಡಲು ಸಾಧ್ಯ? ನಮ್ಮ ನೆರೆಹೊರೆಯಲ್ಲಿ ನಡೆಯುವುದನ್ನು ನಾನು ಹೇಳಲು ಇಷ್ಟಪಡುವುದಿಲ್ಲ” ಎಂದು ಚೆಯ್ಯಕೋಡಿ ಎಂಬ ಮಹಿಳೆ ತನ್ನ ಹೆಂಚಿನ ಹುಲ್ಲಿನ ಮನೆಯ ಹೊರಗಿನ ಡಾಂಬರು ಹಾಕದ ಬೀದಿಯಲ್ಲಿ ಕುಳಿತು, ತನ್ನ ಇಬ್ಬರು ನೆರೆಹೊರೆಯವರೊಂದಿಗೆ  ಕಾಗದದಲ್ಲಿ ಬತ್ತಿಗಳನ್ನು ಉರುಳಿಸುತ್ತಾ ತನ್ನ ಅಳಲನ್ನು ತೋಡಿಕೊಂಡರು.

ಈ ಸಂಬಂಧ ದಲಿತ ಕುಟುಂಬಗಳು ಹಲವಾರು ದೂರುಗಳನ್ನು ದಾಖಲಿಸಿವೆ ಮತ್ತು ಸಾರ್ವಜನಿಕ ಆಸ್ತಿಯ ಮೇಲೆ ನಿರ್ಮಿಸಿರುವ ಈ “ಅಸ್ಪೃಶ್ಯತಾ ಗೋಡೆ”ಯನ್ನು ಕೆಡವಲು ಅಧಿಕಾರಿಗಳನ್ನು ಒತ್ತಾಯಿಸಲು ಪ್ರತಿಭಟನೆಗಳನ್ನು ನಡೆಸಿವೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಜೂನ್ 2023ರಲ್ಲಿ ಈ ಗ್ರಾಮದ ವ್ಯಾಪ್ತಿಗೆ ಬರುವ ವಾಟ್ರಾಪ್ ತಾಲ್ಲೂಕಿನ ಅಂದಿನ ತಹಶೀಲ್ದಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗೆ (VAO) ನಿರ್ದೇಶನ ನೀಡಿದ್ದರು. ಆದಾಗ್ಯೂ ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ದಲಿತರು ಇಲ್ಲಿಯವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳುತ್ತಾರೆ.

ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ಆಡಳಿತ ಅಧಿಕಾರಿ ಆರ್.ನಾರಾಯಣಕುಮಾರ್, ಈ ವಿಷಯವು ನ್ಯಾಯಾಲಯದಲ್ಲಿದೆ ಎಂದು ಹೇಳಿ ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ, ಆದ್ದರಿಂದ ನಾನು ಅದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾರಾಯಣಕುಮಾರ್ ಉಲ್ಲೇಖಿಸುತ್ತಿರುವ ನ್ಯಾಯಾಲಯದ ಪ್ರಕರಣವು ಮದ್ರಾಸ್ ಹೈಕೋರ್ಟ್‌ನಲ್ಲಿ ಗ್ರಾಮದ ನಿವಾಸಿ ಮತ್ತು ಸರ್ಕಾರಿ ಸ್ವಾಮ್ಯದ ಭಾರತಿಯಾರ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಎ. ಪ್ರಕಾಶ್ ಸಲ್ಲಿಸಿದ ಅರ್ಜಿಯಾಗಿದೆ.

32 ವರ್ಷದ ಇವರನ್ನು ಜೂನ್ 2023ರಲ್ಲಿ ಗೋಡೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಯಿತು ಮತ್ತು ಜುಲೈ 2023ರಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ತಮಗೆ ತಿಳಿದಿಲ್ಲ, ಕಾನೂನಿನ ಅಡಿಯಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಲಾಗಿದೆ. ಈ ವಿಷಯದ ಬಗ್ಗೆ ನನಗೆ ಇನ್ನೂ ದೂರು ಬಂದಿಲ್ಲ ಅಥವಾ ನನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ವಿರುಧುನಗರ ಜಿಲ್ಲಾಧಿಕಾರಿ ಡಾ. ವಿ.ಪಿ.ಜಯಶೀಲನ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಗೋಡೆಯ ಇನ್ನೊಂದು ಬದಿಯಲ್ಲಿರುವ ಸಾಲಿಯಾರ್ ಸಮುದಾಯವು  ಹೆಚ್ಚಾಗಿ ನೇಯ್ಗೆ ಚಟುವಟಿಕೆಗಳಲ್ಲಿ ತೊಡಗಿದೆ. ಸರ್ಕಾರಿ ಅನುದಾನಿತ ಬಾಲಸುಬ್ರಮಣಿಯರ್ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮದೇ ಆದ ಆಸ್ತಿಯ ಮೇಲೆ ಗೋಡೆಯನ್ನು ನಿರ್ಮಿಸಲಾಗಿರುವುದರಿಂದ ಅದರ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.

ಯಾರಾದರೂ ಅಥವಾ ಯಾವುದಾದರೂ ಪ್ರಾಣಿ ಇನ್ನೊಂದು ಕಡೆಯಿಂದ ಬಂದರೆ ಏನು ಮಾಡುವುದು. ಸಮುದಾಯವು ತಮ್ಮ ಶಾಲೆ ಮತ್ತು ಜಮೀನಿನಲ್ಲಿ ಗೋಡೆಯನ್ನು ನಿರ್ಮಿಸಿದೆ. ಸರ್ಕಾರವು ಶಿಕ್ಷಕರಿಗೆ ಸಂಬಳವನ್ನು ಮಾತ್ರ ಪಾವತಿಸುತ್ತಿದೆ ಎಂದು ಸಾಲಿಯಾರ್ ಸಮುದಾಯದ 55 ವರ್ಷದ ಸುಂದರಾನಂದಮ್ ಹೇಳುತ್ತಾರೆ.

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...