Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...