Homeಮುಖಪುಟಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

- Advertisement -
- Advertisement -

ಪೋಕ್ಸೋ ಪ್ರಕರಣದ ಆರೋಪಿಗಳಾದ ಪ್ರಮುಖ ಮಲಯಾಳಂ ಸುದ್ದಿವಾಹಿನಿಯ ಮೂವರು ಪತ್ರಕರ್ತರಿಗೆ ಕೇರಳ ಹೈಕೋರ್ಟ್ ಸೋಮವಾರ (ಜ.20) ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

‘ರಿಪೋರ್ಟರ್ ಲೈವ್‌’ ಸುದ್ದಿ ವಾಹಿನಿಯ ಸಲಹಾ ಸಂಪಾದಕ ಅರುಣ್ ಕುಮಾರ್ ಕೆ, ವರದಿಗಾರ ಶಹಬಾಝ್ ಅಹ್ಮದ್ ಮತ್ತು ಇನ್ನೋರ್ವ ಪತ್ರಕರ್ತನಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.

ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರು ಪ್ರಕರಣದ ಆಧಾರವನ್ನು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ. ಲೈವ್‌ಲಾ ವರದಿಯ ಪ್ರಕಾರ, “ಅವರು ಪತ್ರಕರ್ತರು..ಪ್ರಕರಣದ ಸಂತ್ರಸ್ತೆಯೇ ದೂರು ನೀಡದಿರುವಾಗ, ನೀವು ಏಕೆ ದೂರು ದಾಖಲಿಸಿದ್ದೀರಿ?” ಎಂದು ನ್ಯಾಯಾಧೀಶರು ರಾಜ್ಯ ಸರ್ಕಾರವನ್ನು ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಮೂವರು ಪತ್ರಕರ್ತರ ವಿರುದ್ದ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಮನೋಭಾವದೊಂದಿಗೆ ಸನ್ನೆಗಳನ್ನು ಮಾಡಿದ ಅಪರಾಧಕ್ಕೆ ದಾಖಲಿಸುವ ಪೋಕ್ಸೋ ಕಾಯ್ದೆಯ ಸೆಕ್ಷನ್ 11(1) ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಜನವರಿ 4 ರಿಂದ 8ವರೆಗೆ ತಿರುವನಂತಪುರದಲ್ಲಿ ನಡೆದ ಕೇರಳ ರಾಜ್ಯ ಶಾಲಾ ಮಕ್ಕಳ ಕಲಾ ಸ್ಪರ್ಧೆಯ (ಕಲೋತ್ಸವಂ) ಸುದ್ದಿ ಪ್ರಸಾರದ ವೇಳೆ ರಿಪೋರ್ಟರ್ ಲೈವ್ ವಾಹಿನಿಯ ಪತ್ರಕರ್ತರು ಸ್ವರ್ಧಿಯೊಬ್ಬರ ಕುರಿತು ದ್ವಂದ್ವಾರ್ಥ ನೀಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಲೋತ್ಸವದಲ್ಲಿ ಸಾಂಪ್ರಾದಾಯಿಕ ‘ಒಪ್ಪನ ಪಾಟ್’ ಕಾರ್ಯಕ್ರಮದ ಸ್ಪರ್ಧಿಯಾಗಿದ್ದ ಬಾಲಕಿಯೊಬ್ಬರ ಕುರಿತು ಪತ್ರಕರ್ತರಾದ ಅರುಣ್ ಮತ್ತು ಶಹಬಾಸ್ 2012ರ ‘ಉಸ್ತಾದ್ ಹೋಟೆಲ್’ ಸಿನಿಮಾ ಉಲ್ಲೇಖಿಸಿ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ವಿ. ಮನೋಜ್ ಕುಮಾರ್ ಅವರು ದೂರು ದಾಖಲಿಸಿದ್ದರು. ಇದಕ್ಕೂ ಮೊದಲು, ಜನವರಿ 10ರಂದು, ಆಯೋಗವು ವಿಡಿಯೋಗೆ ಸಂಬಂಧಿಸಿದಂತೆ ಚಾನೆಲ್‌ನಿಂದ ವಿವರಣೆಯನ್ನು ಕೇಳಿತ್ತು.

ಆರೋಪಿ ಪತ್ರಕರ್ತರು ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ, ವಿವಾದಕ್ಕೆ ಕಾರಣವಾದ ವಿಡಿಯೋವನ್ನು ಬಾಲಕಿಯ ಪೋಷಕರು ಮತ್ತು ಆಕೆಯ ಶಿಕ್ಷಕರ ಒಪ್ಪಿಗೆಯೊಂದಿಗೆ ರೆಕಾರ್ಡ್ ಮಾಡಿದ ಟೆಲಿ-ಸ್ಕಿಟ್ ಎಂದು ವಾದಿಸಿದ್ದಾಗಿ ವರದಿಗಳು ಹೇಳಿವೆ.

‘ರಿಪೋರ್ಟರ್ ಲೈವ್’ ಇತ್ತೀಚೆಗೆ ರಾಜಕೀಯ ಪಕ್ಷಗಳನ್ನು ಟೀಕಿಸುವ ವರದಿಗಳನ್ನು ಪ್ರಕಟಿಸಿದೆ ಎಂದು ಗಮನಸೆಳೆದ ಪತ್ರಕರ್ತರು, ತಮ್ಮ ವಿರುದ್ದದ ಪ್ರಕರಣವು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...