Homeಮುಖಪುಟಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಮದುವೆಯಾಗಿ ತಿಂಗಳು ಕಳೆಯುವುದೊರಳಗೆ 'ಮೈ ಬಣ್ಣ' ಮುಂದಿಟ್ಟು ಕಿರುಕುಳ ಆರೋಪ

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೋಟ್ಟಿಯಲ್ಲಿ ನವ ವಿವಾಹಿತೆ ಶಹಾನಾ ಮುಮ್ತಾಝ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಕೆಯ ಪತಿ ಅಬ್ದುಲ್ ವಾಹಿದ್‌ನನ್ನು ಪೊಲೀಸರು ಸೋಮವಾರ (ಜ.20) ಬಂಧಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ಮಧ್ಯಪ್ರಾಚ್ಯದಿಂದ ಊರಿಗೆ ವಾಪಾಸಾಗುತ್ತಿದ್ದ ಅಬ್ದುಲ್ ವಾಹಿದ್‌ನನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ.

ಬಿಎಸ್ಸಿ ಮ್ಯಾಥ್‌ಮ್ಯಾಟಿಕ್ಸ್ ವಿದ್ಯಾರ್ಥಿನಿಯಾಗಿದ್ದ 19 ವರ್ಷದ ಶಹಾನಾ ಮತ್ತು ಯುಎಇಯಲ್ಲಿ ಉದ್ಯೋಗದಲ್ಲಿದ್ದ 25 ವರ್ಷದ ಅಬ್ದುಲ್ ವಾಹಿದ್ ವಿವಾಹ ಮೇ 27, 2024ರಲ್ಲಿ ನಡೆದಿತ್ತು. ಮದುವೆಯಾಗಿ 22 ದಿನದಲ್ಲಿ ವಾಹಿದ್ ಯುಎಇಗೆ ತೆರಳಿದ್ದ.

“ಯುಎಇಗೆ ಹೋದ ಬಳಿಕ ವಾಹಿದ್ ಪತ್ನಿ ಶಹಾನಾಳನ್ನು ನಿರ್ಲಕ್ಷ್ಯ ಮಾಡುತ್ತಿದ್ದ. ಆಕೆ ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಆತನೂ ಕರೆ ಮಾಡುತ್ತಿರಲಿಲ್ಲ. “ನೀನು ಕಪ್ಪಗಿದ್ದೀಯ, ಇಂಗ್ಲಿಷ್ ಮಾತನಾಡೋಕೆ ಬರಲ್ಲ” ಎಂದು ಅವಮಾನಿಸುತ್ತಿದ್ದ. ಈ ವಿಚಾರವನ್ನು ಶಹಾನಾ ತನ್ನ ಅತ್ತೆಯ ಬಳಿ ಹೇಳಿದಾಗ, ಅವರೂ ಜಾಸ್ತಿ ತಲೆ ಕೆಡಿಸಿಕೊಂಡಿಲ್ಲ. ಬದಲಾಗಿ, “ಮಗ ವಾಹಿದ್‌ಗೆ ನಿನಗಿಂತ ಬುದ್ದಿವಂತೆ ಮತ್ತು ಸುಂದರವಾದ ಸಂಗಾತಿ ಸಿಗಬೇಕಿತ್ತು” ಎಂದು ನಿಂದಿಸಿದ್ದಾರೆ. ಈ ಕಾರಣಕ್ಕೆ ಮನೊಂದು ಶಹಾನಾ ಸಾವಿಗೆ ಶರಣಾಗಿದ್ದಾಳೆ” ಎಂದು ಆಕೆಯ ಚಿಕ್ಕಪ್ಪ ಅಬ್ದುಲ್ ಸಲಾಂ ಆರೋಪಿಸಿದ್ದಾರೆ.

ಜನವರಿ 14, 2025ರಂದು ಕೊಂಡೋಟ್ಟಿಯ ಪತಿ ವಾಹಿದ್ ಮನೆಯಲ್ಲಿ ಶಹಾನಾ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಮತ್ತು ಆತನ ಕುಟುಂಬಸ್ಥರ ಕಿರುಕುಳ ಶಹಾನಾ ಸಾವಿಗೆ ಕಾರಣ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಹಾನಾ ಸಾವನ್ನಪ್ಪಿದ ದಿನದಂದೇ ಕೊಂಡೋಟ್ಟಿ ಪೊಲೀಸರು ಪತಿ ಅಬ್ದುಲ್ ವಾಹಿದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪತ್ನಿಯ ಮೇಲಿನ ದೌರ್ಜನ್ಯದ ಆರೋಪ ಹೊರಿಸಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ಇದಕ್ಕೂ ಮೊದಲು, ಕೇರಳ ಮಹಿಳಾ ಆಯೋಗವು ಶಹಾನಾ ಸಾವಿನ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಆಯೋಗದ ಅಧ್ಯಕ್ಷೆ ಅಡ್ವೊಕೇಟ್ ಪಿ ಸತೀದೇವಿ ಅವರು ಪ್ರಕರಣ ದಾಖಲಿಸಿಕೊಂಡು ವರದಿ ಸಲ್ಲಿಸುವಂತೆ ಆಯೋಗದ ನಿರ್ದೇಶಕರು ಮತ್ತು ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಶಹಾನಾ ಅವರ ಅಂತ್ಯಕ್ರಿಯೆ ಜನವರಿ 15, 2025ರಂದು ನಡೆದಿದೆ. ತನಿಖೆ ಮುಂದುವರೆದಿದ್ದು, ಆಕೆಯ ಕುಟುಂಬಸ್ಥರು ಮಾಡಿರುವ ಆರೋಪಗಳ ಬಗ್ಗೆ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಶಹಾನ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ. 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...