Homeಮುಖಪುಟಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಕೇರಳ | ನವ ವಿವಾಹಿತೆ ಸಾವು ಪ್ರಕರಣ : ಪತಿ ಬಂಧನ

ಮದುವೆಯಾಗಿ ತಿಂಗಳು ಕಳೆಯುವುದೊರಳಗೆ 'ಮೈ ಬಣ್ಣ' ಮುಂದಿಟ್ಟು ಕಿರುಕುಳ ಆರೋಪ

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೋಟ್ಟಿಯಲ್ಲಿ ನವ ವಿವಾಹಿತೆ ಶಹಾನಾ ಮುಮ್ತಾಝ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಕೆಯ ಪತಿ ಅಬ್ದುಲ್ ವಾಹಿದ್‌ನನ್ನು ಪೊಲೀಸರು ಸೋಮವಾರ (ಜ.20) ಬಂಧಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ಮಧ್ಯಪ್ರಾಚ್ಯದಿಂದ ಊರಿಗೆ ವಾಪಾಸಾಗುತ್ತಿದ್ದ ಅಬ್ದುಲ್ ವಾಹಿದ್‌ನನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ.

ಬಿಎಸ್ಸಿ ಮ್ಯಾಥ್‌ಮ್ಯಾಟಿಕ್ಸ್ ವಿದ್ಯಾರ್ಥಿನಿಯಾಗಿದ್ದ 19 ವರ್ಷದ ಶಹಾನಾ ಮತ್ತು ಯುಎಇಯಲ್ಲಿ ಉದ್ಯೋಗದಲ್ಲಿದ್ದ 25 ವರ್ಷದ ಅಬ್ದುಲ್ ವಾಹಿದ್ ವಿವಾಹ ಮೇ 27, 2024ರಲ್ಲಿ ನಡೆದಿತ್ತು. ಮದುವೆಯಾಗಿ 22 ದಿನದಲ್ಲಿ ವಾಹಿದ್ ಯುಎಇಗೆ ತೆರಳಿದ್ದ.

“ಯುಎಇಗೆ ಹೋದ ಬಳಿಕ ವಾಹಿದ್ ಪತ್ನಿ ಶಹಾನಾಳನ್ನು ನಿರ್ಲಕ್ಷ್ಯ ಮಾಡುತ್ತಿದ್ದ. ಆಕೆ ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಆತನೂ ಕರೆ ಮಾಡುತ್ತಿರಲಿಲ್ಲ. “ನೀನು ಕಪ್ಪಗಿದ್ದೀಯ, ಇಂಗ್ಲಿಷ್ ಮಾತನಾಡೋಕೆ ಬರಲ್ಲ” ಎಂದು ಅವಮಾನಿಸುತ್ತಿದ್ದ. ಈ ವಿಚಾರವನ್ನು ಶಹಾನಾ ತನ್ನ ಅತ್ತೆಯ ಬಳಿ ಹೇಳಿದಾಗ, ಅವರೂ ಜಾಸ್ತಿ ತಲೆ ಕೆಡಿಸಿಕೊಂಡಿಲ್ಲ. ಬದಲಾಗಿ, “ಮಗ ವಾಹಿದ್‌ಗೆ ನಿನಗಿಂತ ಬುದ್ದಿವಂತೆ ಮತ್ತು ಸುಂದರವಾದ ಸಂಗಾತಿ ಸಿಗಬೇಕಿತ್ತು” ಎಂದು ನಿಂದಿಸಿದ್ದಾರೆ. ಈ ಕಾರಣಕ್ಕೆ ಮನೊಂದು ಶಹಾನಾ ಸಾವಿಗೆ ಶರಣಾಗಿದ್ದಾಳೆ” ಎಂದು ಆಕೆಯ ಚಿಕ್ಕಪ್ಪ ಅಬ್ದುಲ್ ಸಲಾಂ ಆರೋಪಿಸಿದ್ದಾರೆ.

ಜನವರಿ 14, 2025ರಂದು ಕೊಂಡೋಟ್ಟಿಯ ಪತಿ ವಾಹಿದ್ ಮನೆಯಲ್ಲಿ ಶಹಾನಾ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಮತ್ತು ಆತನ ಕುಟುಂಬಸ್ಥರ ಕಿರುಕುಳ ಶಹಾನಾ ಸಾವಿಗೆ ಕಾರಣ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಹಾನಾ ಸಾವನ್ನಪ್ಪಿದ ದಿನದಂದೇ ಕೊಂಡೋಟ್ಟಿ ಪೊಲೀಸರು ಪತಿ ಅಬ್ದುಲ್ ವಾಹಿದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪತ್ನಿಯ ಮೇಲಿನ ದೌರ್ಜನ್ಯದ ಆರೋಪ ಹೊರಿಸಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ಇದಕ್ಕೂ ಮೊದಲು, ಕೇರಳ ಮಹಿಳಾ ಆಯೋಗವು ಶಹಾನಾ ಸಾವಿನ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಆಯೋಗದ ಅಧ್ಯಕ್ಷೆ ಅಡ್ವೊಕೇಟ್ ಪಿ ಸತೀದೇವಿ ಅವರು ಪ್ರಕರಣ ದಾಖಲಿಸಿಕೊಂಡು ವರದಿ ಸಲ್ಲಿಸುವಂತೆ ಆಯೋಗದ ನಿರ್ದೇಶಕರು ಮತ್ತು ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಶಹಾನಾ ಅವರ ಅಂತ್ಯಕ್ರಿಯೆ ಜನವರಿ 15, 2025ರಂದು ನಡೆದಿದೆ. ತನಿಖೆ ಮುಂದುವರೆದಿದ್ದು, ಆಕೆಯ ಕುಟುಂಬಸ್ಥರು ಮಾಡಿರುವ ಆರೋಪಗಳ ಬಗ್ಗೆ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಶಹಾನ ಸಾವು ಆತ್ಮಹತ್ಯೆಯಿಂದ ಆಗಿದೆ ಎಂದು ವರದಿಗಳು ಹೇಳಿವೆ. ಅದು ಆತ್ಮಹತ್ಯೆಯೂ.. ಕೊಲೆಯೂ? ಅಥವಾ ಇನ್ಯಾವುದೇ ಕಾರಣಕ್ಕೆ ಸಾವಾಗಿದೆಯೂ ಇನ್ನೂ ಖಚಿತವಾಗಿಲ್ಲ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ನಾವು ಇತ್ಯರ್ಥಕ್ಕೆ ಬರಲು ಸಾಧ್ಯವಿಲ್ಲ. ಹಾಗಾಗಿ, ‘ಆತ್ಮಹತ್ಯೆ’ ಬದಲಾಗಿ ಸುದ್ದಿಯಲ್ಲಿ ‘ಸಾವು’ ಎಂದಷ್ಟೇ ಉಲ್ಲೇಖಿಸಲಾಗಿದೆ. 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...