Homeಕರ್ನಾಟಕಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಗುವಿನ ಮಲತಂದೆ ಸುಲ್ತಾನಪುರದ ಸದಾಶಿವ ಶಿವಬಸಪ್ಪ ಮಗದುಮ್ಮ (32), ಪ್ರಸ್ತುತ ಸುಲ್ತಾನಪುರದಲ್ಲಿರುವ ಭಡ್ಗಾಂವ್ ಮೂಲದ ಲಕ್ಷ್ಮಿ ಬಾಬು ಗೋಲಬಾವಿ (38), ಅಂಬೇಡ್ಕರ್ ನಗರದಲ್ಲಿ ವಾಸವಿರುವ ಮಹಾರಾಷ್ಟ್ರದ ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್ (40) ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಲಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ (50) ಎಂದು ಗುರುತಿಸಲಾಗಿದೆ.

ಪ್ರಕರಣದ ಕುರಿತು ಮಾತನಾಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್, ಶಿವಬಸಪ್ಪ ಮಗದುಮ್ಮ ಮತ್ತು ಕೊಲ್ಲಾಪುರ ಹಾಗೂ ಕಾರವಾರದ ಕೆಲವು ಮಧ್ಯವರ್ತಿಗಳು ಬಾಲಕನನ್ನು ಬೆಳಗಾವಿ ನಗರದ ದಿಲ್ಶಾದ್ ಸಿಕಂದರ್ ತಹಶೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರು ಗಂಡು ಮಗುವನ್ನು ಬಯಸಿದ್ದರು ಎಂದು ತಿಳಿಸಿದ್ದಾರೆ.

ಶಿವಬಸಪ್ಪ ಮಗದುಮ್ಮ ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಹಾವೇರಿ ಜಿಲ್ಲೆಯ ಬ್ಯಾತನಾಳದ ಸಂಗೀತಾ ಗುಡಪ್ಪ ಕಮ್ಮಾರ (30) ಅವರನ್ನು ವಿವಾಹವಾಗಿದ್ದರು. ಮಗದುಮ್ಮಗೆ ಅವರ ಈ ಹಿಂದಿನ ಪತ್ನಿಯಿಂದ ಮಕ್ಕಳಿದ್ದರು. ಅವರು ಆಗಾಗ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಮಗದುಮ್ಮ ಬಾಲಕನನ್ನು ಮಾರಿದ್ದರು ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ತಿಂಗಳ ಹಿಂದೆ ಶಿವಬಸಪ್ಪ ಮಗದುಮ್ಮ ಅವರು ಸಂಗೀತಾರನ್ನು ಮದುವೆಯಾಗಲು ಲಕ್ಷ್ಮಿ ಬಾಬು ಗೋಲಬಾವಿ ಸಹಾಯ ಮಾಡಿದ್ದರು. ಇದೇ ಲಕ್ಷ್ಮಿ ಬಾಬು ಸಂಗೀತಾ ಅವರ ಮನವೊಲಿಸಿ ಮಗುವನ್ನು ಕಾರವಾರದ ಕೆಸ್ರೋಲಿಯಲ್ಲಿರುವ ಅನಸೂಯಾ ದೊಡ್ಮನಿ ಅವರಿಗೆ ಹಸ್ತಾಂತರಿಸುವಂತೆ ಮಾಡಿದ್ದರು. ನಂತರ ಅನಸೂಯಾ ಆ ಮಗುವನ್ನು ದಿಲ್ಶಾದ್ ಅವರಿಗೆ ಮಾರಿದ್ದರು. ಬಾಲಕ ಅನಾಥನೆಂದು ದಿಲ್ಶಾದ್ ಅವರಿಗೆ ಸುಳ್ಳು ಹೇಳಿದ್ದರು.

ಈ ನಡುವೆ ಮಗುವಿನ ತಾಯಿ ಸಂಗೀತಾ ಕಮ್ಮಾರ್ ತನ್ನ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ಪೊಲೀಸ್ ತಂಡವು ಬೈಲಹೊಂಗಲ ಬಳಿಯ ಹಳ್ಳಿಯೊಂದರಲ್ಲಿ ಮಗುವನ್ನು ಪತ್ತೆ ಮಾಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಇತರ ಆರೋಪಿಗಳಾದ ಖಾನಾಪುರ ತಾಲೂಕಿನ ಲೊಂಡಾದ ಭರತ ಪೂಜಾರಿ, ಹಣ ಕೊಟ್ಟು ಮಗುವನ್ನು ಪಡೆದಿದ್ದ ಬೆಳಗಾವಿಯ ದಿಲ್ಶಾದ್ ತಹಶೀಲ್ದಾರ್‌ ಅವರ ಪತ್ತೆಗೆ ಜಾಲ ಬೀಸಲಾಗಿದೆ. ರಕ್ಷಣೆ ಮಾಡಲಾದ ಮಗುವನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ. ಹುಕ್ಕೇರಿ ಠಾಣೆ ಇನ್‌ಸ್ಪೆಕ್ಟರ್‌ ಎಂ.ಕೆ.ಬಸಾಪುರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮಗು ಮಾರಾಟದ ಮೂರನೇ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು | ಕೆ.ಆರ್ ಮಾರುಕಟ್ಟೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...