Homeಕರ್ನಾಟಕನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

ನಾಳೆ (ಜ.23) ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ:  ಬೃಂದಾ ಕಾರಟ್ ಭಾಗಿ

- Advertisement -
- Advertisement -

ಮಂಗಳೂರು: ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾಗಿರುವ ಕೊರಗ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆದಿವಾಸಿ ಆಕ್ರೋಶ ರ‍್ಯಾಲಿಯನ್ನು ಜ. 23ರಂದು ಮಂಗಳೂರು ನಗರದಲ್ಲಿ ಸಂಘಟಿಸಲಾಗುತ್ತಿದ್ದು ಇದರ ಅಂಗವಾಗಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಇದರ ಅಖಿಲ ಭಾರತ ಉಪಾಧ್ಯಕ್ಷೆ ಮತ್ತು ಮಾಜಿ ಸಂಸತ್ ಸದಸ್ಯೆ ಬೃಂದಾ ಕಾರಟ್ ರವರು ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಮೀಡಿಯಾ ವರದಿ ಮಾಡಿದೆ.

ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿರುವ ಬೃಂದಾ ಕಾರಟ್‌ರವರು ಅರಣ್ಯ ಹಕ್ಕು ಕಾಯಿದೆಯನ್ನು ರೂಪಿಸುವ ಸಂದರ್ಭದಲ್ಲಿ ಸಂಸತ್ ಸದಸ್ಯರಾಗಿ ನಿರ್ಣಾಯಕ ಪಾತ್ರ ವಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆದಿವಾಸಿ ಆಕ್ರೋಶ ರ‍್ಯಾಲಿಯ ಮೂಲಕ ಅವಿಭಜಿತ ಜಿಲ್ಲೆಯ ಆದಿವಾಸಿ ಕೊರಗ ಸಮುದಾಯದ ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಯನ್ನು ಗುರಿಯಾಗಿಸಿ ನಡೆಯುವ ಹೋರಾಟದ ಉದ್ಘಾಟನೆಯು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರ‍್ಯಾಲಿ ಸಮಿತಿ ಸದಸ್ಯರಾದ ಶೇಖರ್ ವಾಮಂಜೂರು ಮತ್ತು ಕೃಷ್ಣ ಇನ್ನಾ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಅಂಬೇಡ್ಕರ್ ಸರ್ಕಲ್‌ನಿಂದ (ಜ್ಯೋತಿ ವೃತ್ತ) ಪ್ರಾರಂಭವಾಗುವ ಆದಿವಾಸಿ ಆಕ್ರೋಶ್ ರ‍್ಯಾಲಿಯು ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯ ಪ್ರತಿನಿಧಿಸುವ ಪರಿಕರಗಳು, ಪೋಟೋಗಳೊಂದಿಗೆ ನಡೆಯಲಿದೆ.

ಕ್ಲಾಕ್ ಟವರ್‌ನ ಮುಂಭಾಗದಲ್ಲಿ ನಡೆಯುವ ಬಹಿರಂಗ ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಕರಿಯ ಕೆ. ಮಂಗಳ ಜ್ಯೋತಿ ಇವರು ವಹಿಸಲಿದ್ದರೆ. ಮುಖ್ಯ ಅತಿಥಿಗಳಾಗಿ ಕೊರಗ ಸಮುದಾಯದ ಮುಂದಾಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಹ ಸಂಚಾಲಕರಾದ ಶ್ರೀಧರ್ ನಾಡಾ, ಡಾ.ಎಸ್.ವೈ.ಗುರುಶಾಂತ್, ಡಾ.ಕೃಷ್ಣಪ್ಪ ಕೊಂಚಾಡಿ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಇವರು ವಹಿಸಿಲಿದ್ದಾರೆ.

ಮಹಮ್ಮದ್ ಫೀರ್ ವರದಿ ಅಂಗೀಕರಿಸಿ ೩೦ ವರ್ಷ ಕಳೆದರೂ ಅದರಂತೆ ಕೃಷಿ ಯೋಗ್ಯ ಭೂಮಿ ವಿತರಣೆ, ಉದ್ಯೋಗಾವಕಾಶ, ಶಿಕ್ಷಣ ಮತ್ತು ಆರೋಗ್ಯದ ಸಲಹೆಗಳು ಜ್ಯಾರಿಯಾಗಿಲ್ಲ. ಕೊರಗ ಸಮುದಾಯದ ಜನಸಂಖ್ಯೆ ಇಳಿಮುಖವಾಗುತ್ತಿದ್ದು, ವ್ಯಾಪಕ ನಿರುದ್ಯೋಗ, ಬಡತನ, ಹಸಿವು ಮತ್ತು ವಸತಿಯ ಪ್ರಶ್ನೆ ಗಂಭೀರವಾಗಿ ಕಾಡುತ್ತಿದೆ. ಆದುದರಿಂದ ಕೊರಗ ಸಮುದಾಯದ ನಿರುದ್ಯೋಗಿ ಯುವಕರಿಗೆ ವಿಶೇಷ ನೇಮಕಾತಿ ಆಂದೋಲನ, ಕಂದಾಯ ಅದಾಲತ್, ಜಿಲ್ಲೆಯ ಕೈಗಾರಿಕೆ ಮತ್ತು ಸಹಕಾರಿ ರಂಗದಲ್ಲಿ ಕೊರಗ ಯುವಕರ ಉದ್ಯೋಗದ ಬಗ್ಗೆ ಶ್ವೇತಪತ್ರ ಇವೇ ಮೊದಲಾದ ಬೇಡಿಕೆಗಳಿಗೆ ಸಂಬಂಧಿಸಿ ಹೋರಾಟದ ಕಹಳೆ ಮೊಳಗಿಸಲಾಗುವುದು ಎಂದು ಶೇಖರ್ ವಾಮಂಜೂರು ತಿಳಿಸಿದ್ದಾರೆ.

“ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕ ಬಿಡುಗಡೆ

ಇದೇ ಸಂದರ್ಭ, ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ “ಕೊರಗರು – ತುಳುನಾಡಿನ ಮಾತೃ ಸಮುದಾಯ” ಪುಸ್ತಕವು ಆದಿವಾಸಿ ಆಕ್ರೋಶ ರ‌್ಯಾಲಿಯ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಕೊರಗ ಸಮುದಾಯ ಅನುಭವಿಸಿರುವ ದೌರ್ಜನ್ಯ, ತಾರತಮ್ಯ, ಶೋಷಣೆಗಳ ಚಾರಿತ್ರಿಕ ವಿಶ್ಲೇಷಣೆಯನ್ನು ಈ ಪುಸ್ತಕ ಹೊಂದಿದೆ. ಆಧುನಿಕ ಸಂದರ್ಭದಲ್ಲಿ ಸರಕಾರ ಕೊರಗರನ್ನು ನಡೆಸಿಕೊಂಡಿರುವ ರೀತಿ, ವಿಧಾನ ಸಭೆಯಲ್ಲಿ ನಡೆದಿರುವ ಚರ್ಚೆಗಳ ಸಹಿತ ಮಹತ್ವದ ವಿವರಗಳನ್ನು ಆಧಾರ ಸಹಿತವಾಗಿ ಈ ಕೃತಿಯಲ್ಲಿ ಲೇಖಕ ವಿವರಿಸಿದ್ದಾರೆ.

ಯಲ್ಲಾಪುರ | ತರಕಾರಿ ಸಾಗಾಟದ ಲಾರಿ ಪಲ್ಟಿ : 9 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...