Homeಮುಖಪುಟ'ಜನ್ಮಸಿದ್ದ ಪೌರತ್ವ' ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್‌ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿಂದೆ ಹೆಚ್‌ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ ಪೌರತ್ವ’ ಪಡೆಯುತ್ತಿತ್ತು. ಆದರೆ, ಟ್ರಂಪ್ ಆದೇಶದಿಂದ ಮಗು ಪೌರತ್ವ ಪಡೆಯಬೇಕಾದರೆ ತಂದೆ ಅಥವಾ ತಾಯಿಯಲ್ಲಿ ಒಬ್ಬರಾದರೂ ಅಮೆರಿಕದ ಪ್ರಜೆಯಾಗಿರುವುದು ಅಥವಾ ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಇನ್ನುಮುಂದೆ ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ವಿದೇಶಿಗರ ಮಕ್ಕಳಿಗೆ ಪೌರತ್ವ ಸಿಗುವುದಿಲ್ಲ.

ಟ್ರಂಪ್ ಆದೇಶದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಮ್ಮ ಕುಟುಂಬವನ್ನು ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದವರಿಗೆ ಮತ್ತು ಮಕ್ಕಳು ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ಪೌರತ್ವ ಪಡೆಯುತ್ತಿದ್ದವರಿಗೆ ಹಿನ್ನಡೆಯಾಗಿದೆ.

ಏನಿದು ಯುಎಸ್ ‘ಜನ್ಮಸಿದ್ದ ಪೌರತ್ವ’

ಪ್ರಸ್ತುತ ಕಾನೂನಿನ ಪ್ರಕಾರ, 1868ರಲ್ಲಿ ಅಂತರ್ಯುದ್ಧದ ನಂತರ ಹಿಂದೆ ಗುಲಾಮರಾಗಿದ್ದ ಜನರ ಸ್ಥಿತಿಯನ್ನು ಸ್ಪಷ್ಟಪಡಿಸಲು ಅಂಗೀಕರಿಸಲಾದ ಯುಎಸ್ ಸಂವಿಧಾನದ 14ನೇ ತಿದ್ದುಪಡಿಯು ಯುಎಸ್‌ ನೆಲದಲ್ಲಿ ಜನಿಸಿದ ಬಹುತೇಕ ಎಲ್ಲಾ ಶಿಶುಗಳಿಗೆ ಪೌರತ್ವವನ್ನು ನೀಡುತ್ತದೆ. ಜನ್ಮಸಿದ್ಧ ಪೌರತ್ವ ಅಥವಾ ‘ಮಣ್ಣಿನ ಹಕ್ಕು’ ತತ್ವ ಅಳವಡಿಸಿಕೊಂಡಿರುವ ಜಗತ್ತಿನ ಸುಮಾರು 30 ದೇಶಗಳಲ್ಲಿ ಯುಎಸ್‌ ಕೂಡ ಒಂದು.

ಟ್ರಂಪ್ ಹೊಸ ಆದೇಶದಿಂದ ಏನಾಗಲಿದೆ?

ಸೋಮವಾರ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಆದೇಶದಿಂದ, ಯುಎಸ್‌ ನಾಗರಿಕ ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿರುವ ಕನಿಷ್ಠ ಒಬ್ಬ ಪೋಷಕರಿಲ್ಲದೆ ಅಮೆರಿಕದಲ್ಲಿ ಜನಿಸಿದ ಮಕ್ಕಳು ಇನ್ನು ಮುಂದೆ ಸ್ವಯಂಚಾಲಿತ ಅಮೆರಿಕ ಪೌರತ್ವವನ್ನು ಪಡೆಯಲು ಸಾಧ್ಯವಿಲ್ಲ. ಫೆಡರಲ್ ಏಜೆನ್ಸಿಗಳು ಅಂತಹ ಮಕ್ಕಳಿಗೆ ಅಮೆರಿಕದ ಪೌರತ್ವವನ್ನು ಸಾಬೀತುಪಡಿಸುವ ಸಂಬಂಧಿತ ದಾಖಲೆಗಳನ್ನು ನೀಡುವುದನ್ನು ಅಥವಾ ಗುರುತಿಸುವುದನ್ನು ತಡೆಯುತ್ತದೆ. ಈ ಆದೇಶವು ಅನಧಿಕೃತ ವಲಸಿಗರಿಗೆ ಮತ್ತು ತಾತ್ಕಾಲಿಕ ವೀಸಾಗಳಲ್ಲಿ ಅಮೆರಿಕದಲ್ಲಿ ಕಾನೂನುಬದ್ಧವಾಗಿ ಇರುವ ಜನರಿಗೆ ಜನಿಸಿದ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ.

ಟ್ರಂಪ್ ಆದೇಶ ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್‌1-ಬಿ ವೀಸಾ ಹೊಂದಿರುವವರ ಮಕ್ಕಳ ಪರಿಸ್ಥಿತಿಯೇನು?

ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ತಾತ್ಕಾಲಿಕ ಕೆಲಸದ ವೀಸಾಗಳಲ್ಲಿ (ಹೆಚ್‌-1ಬಿ) ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಜನರ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಗ್ರೀನ್ ಕಾರ್ಡ್‌ಗಳಿಗಾಗಿ ಪ್ರಸ್ತುತ ಕಾಯುತ್ತಿರುವ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರ ಮೇಲೂ ಈ ಕಾನೂನು ಪರಿಣಾಮ ಬೀರುವ ಸಾಧ್ಯತೆಯಿದೆ.

ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳನ್ನು ಉಲ್ಲೇಖಿಸಿದ 2024ರ ವರದಿಗಳ ಪ್ರಕಾರ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರು ಗ್ರೀನ್ ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ.

ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ‘ಜನ್ಮಸಿದ್ಧ ಪೌರತ್ವ’ವನ್ನು ಕೊನೆಗೊಳಿಸುವ ಟ್ರಂಪ್ ಅವರ ಕಾರ್ಯಕಾರಿ ಆದೇಶವು ಹೆಚ್‌ 1ಬಿ ವೀಸಾ ಹೊಂದಿರುವವರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನ್ಮಸಿದ್ದ ಪೌರತ್ವವಿಲ್ಲದೆ, ಈ ಮಕ್ಕಳು ದೇಶದಲ್ಲಿ ಶಿಕ್ಷಣ, ವಿದ್ಯಾರ್ಥಿ ವೇತನಗಳು ಮತ್ತು ಫೆಡರಲ್ ನೆರವಿನ ಅವಕಾಶಗಳನ್ನು ಕಳೆದುಕೊಳ್ಳಬಹುದು. ಅಲ್ಲದೆ, ಇದು ಭಾರತೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ಅಡ್ಡಿಯಾಗಬಹುದು.

ಜನ್ಮಸಿದ್ದ ಪೌರತ್ವ ಹಕ್ಕು ಕೊನೆಗೊಳಿಸುವ ಟ್ರಂಪ್ ಆದೇಶವನ್ನು ಸುಲಭವಾಗಿ ವಿವರಿಸುವುದಾದರೆ, ವಲಸಿಗರ ಮಕ್ಕಳು ತಾವು ಯುಎಸ್‌ನಲ್ಲಿ ಜನಿಸಿದ್ದೇವೆ ಎಂಬ ಪ್ರಮಾಣ ಪತ್ರವನ್ನು ಈ ಮೊದಲು ತೋರಿಸಬೇಕಿತ್ತು. ಆದರೆ, ಇನ್ನುಮುಂದೆ ತಮ್ಮ ಪೂರ್ವಜರು ಮತ್ತು ಪೋಷಕರ ಪೌರತ್ವದ ದಾಖಲೆಗಳನ್ನು ತೋರಿಸಬೇಕಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...