Homeಮುಖಪುಟಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್...

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಂಗಾಳ ಸರ್ಕಾರ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗೆ ಮರದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ (ಜ.21) ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.

ಸೋಮವಾರ (ಜ.20) ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ (ಮರಣದವರೆಗೆ) ವಿಧಿಸಿ ಕೋಲ್ಕತ್ತಾದ ಸಿಯಾಲದಹ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದರು.

ಸಿಯಾಲದಹ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯದ ಅನುಮತಿ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ಮಂಗಳವಾರ (ಜ. 21) ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಬ್ಬರ್ ರಶೀದಿ ಅವರ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೆಷನ್ಸ್ ನ್ಯಾಯಾಲಯದ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಬೆನ್ನಲ್ಲೇ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿದೆ. “ಜೀವಾವಧಿ ಶಿಕ್ಷೆಯ ಅರ್ಥವೇನು? ಅನೇಕ ಪ್ರಕರಣಗಳಲ್ಲಿ, ಘೋರ ಅಪರಾಧಗಳನ್ನು ಮಾಡಿದ ನಂತರವೂ ಅಪರಾಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗುತ್ತದೆ. ಆರ್‌ಜಿ ಕರ್ ಪ್ರಕರಣದ ತೀರ್ಪಿನಿಂದ ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ” ಎಂದು ಮುಖ್ಯಮಂತ್ರಿ ಮಂಗಳವಾರ (ಜ. 21) ಹೇಳಿದ್ದರು.

“ನಾವೂ ಕಾನೂನು ಅಧ್ಯಯನ ಮಾಡಿದ್ದೇವೆ ಮತ್ತು ಅದನ್ನು ಅರ್ಥಮಾಡಿಕೊಂಡಿದ್ದೇವೆ. ಮರಣದಂಡನೆ ವಿಧಿಸಲು ಇದು ‘ಅಪರೂಪದಲ್ಲಿ ಅಪರೂಪದ ಪ್ರಕರಣವಲ್ಲ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ನಾವು ನ್ಯಾಯಾಧೀಶರ ಹೇಳಿಕೆಯನ್ನು ವಿರೋಧಿಸುತ್ತಿಲ್ಲ. ಆದರೆ, ಇದು ನಿಜಕ್ಕೂ ಅಪರೂಪದ, ಸೂಕ್ಷ್ಮ ಮತ್ತು ಘೋರ ಅಪರಾಧ ಎಂದು ನಾನು ಭಾವಿಸುತ್ತೇನೆ. ಒಬ್ಬ ಅಪರಾಧಿಯನ್ನು ಬಿಡುಗಡೆ ಮಾಡಿದರೆ ಅಥವಾ ಶಿಕ್ಷೆಗೆ ಒಳಪಡಿಸದಿದ್ದರೆ, ಆತ ಇನ್ನಷ್ಟು ದುಷ್ಕೃತ್ಯ ಎಸಗಬಹುದು” ಎಂದಿದ್ದರು.

ಅಪರಾಧಿಗೆ ಮರಣದಂಡನೆ ವಿಧಿಸಲು ನಿರಾಕರಿಸುವ ವೇಳೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, “ಜೀವಕ್ಕೆ ಮತ್ತೊಂದು ಜೀವ” ಎಂಬ ಹಳೆಯ ಪದ್ದತಿಯನ್ನು ಮೀರಿ ನಾವು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದರು.

“ಆಧುನಿಕ ನ್ಯಾಯ ಕ್ಷೇತ್ರದಲ್ಲಿ, ನಾವು ‘ಕಣ್ಣಿಗೆ ಕಣ್ಣು’, ‘ಹಲ್ಲಿಗೆ ಹಲ್ಲು’, ‘ಉಗುರಿಗೆ ಉಗುರು’ ಮತ್ತು ‘ಜೀವಕ್ಕೆ ಜೀವ’ ಎಂಬ ಪ್ರಾಚೀನ ಪ್ರವೃತ್ತಿಯನ್ನು ಮೀರಿ ಮುಂದುವರಿಯಬೇಕು. ಕ್ರೌರ್ಯವನ್ನು ಕ್ರೌರ್ಯದೊಂದಿಗೆ ಹೋಲಿಸುವುದು ನಮ್ಮ ಕರ್ತವ್ಯವಲ್ಲ, ಬದಲಿಗೆ ಬುದ್ಧಿವಂತಿಕೆ, ಕರುಣೆ ಮತ್ತು ನ್ಯಾಯದ ಆಳವಾದ ತಿಳುವಳಿಕೆಯ ಮೂಲಕ ಮಾನವೀಯತೆಯನ್ನು ಎತ್ತಿ ಹಿಡಿಯುವುದು ನಮ್ಮ ಕೆಲಸ” ಎಂದು ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದರು.

“ಈ ಪ್ರಕರಣವು “ಅಪರೂಪದಲ್ಲಿ ಅಪರೂಪ” ಎಂದು ವರ್ಗೀಕರಿಸಲು ಇರುವ ಕಠಿಣ ಮಾನದಂಡಗಳನ್ನು ಪೂರೈಸುವುದಿಲ್ಲ. ಹಾಗಾಗಿ, ಮರಣದಂಡನೆಗಾಗಿ ಪ್ರಾಸಿಕ್ಯೂಷನ್ ಮಾಡಿರುವ ಮನವಿಯನ್ನು ಪರಿಗಣಿಸುವುದು ಸೂಕ್ತವಲ್ಲ” ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದರು.

ಅದಾಗ್ಯೂ, ಮಮತಾ ಬ್ಯಾನರ್ಜಿ ನ್ಯಾಯಾಲಯದ ಆದೇಶಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ಯಾರಾದರೊಬ್ಬ ರಾಕ್ಷಸನಾಗಿದ್ದರೆ ನಮ್ಮ ಸಮಾಜ ಮಾನವೀಯತೆ ತೋರಿಸುತ್ತಿತ್ತಾ? ನಮ್ಮ ತಾಯಂದಿರು ಮತ್ತು ಸಹೋದರಿಯರ ಕಡೆಗೆ ಸಮಾಜವನ್ನು ಮಾನವೀಯಗೊಳಿಸಬೇಕು. ಇಂತಹ ಪ್ರಕರಣಗಳಲ್ಲಿ ಮರಣದಂಡನೆ ವಿಧಿಸುವ ‘ಪಶ್ಚಿಮ ಬಂಗಾಳ ಅಪರಾಧ ಕಾನೂನು ತಿದ್ದುಪಡಿ ಮಸೂದೆ-2024 ಅನ್ನು ನಮ್ಮ ಸರ್ಕಾರ ಅಂಗೀಕರಿಸಿದೆ” ಎಂದು ಹೇಳಿದ್ದಾರೆ.

“ಆಸಿಡ್ ದಾಳಿ ಮತ್ತು ಇತರ ಘೋರ ಅಪರಾಧಗಳ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ನಾವು ಮಸೂದೆ ತಂದಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ಬಗ್ಗೆ ಗಮನಹರಿಸದ ಕಾರಣ ಮಸೂದೆ ಇನ್ನೂ ಬಾಕಿ ಇದೆ. ಈ ಮಸೂದೆಯು ಮಾದರಿಯಾಗಬೇಕೆಂದು ಮತ್ತು ದೇಶದಾದ್ಯಂತ ಜಾರಿಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಹೈದರಾಬಾದ್| ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ಹಂಚಿಕೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...