Homeಫ್ಯಾಕ್ಟ್‌ಚೆಕ್FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಹಿಂದೂಗಳಿಗೆ ಮಕ್ಕಳಾಗದಂತೆ ಖರ್ಜೂರದಲ್ಲಿ ಮಾತ್ರೆ ಬೆರೆಸಿದ್ರಾ ಮುಸ್ಲಿಮರು..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲು ಮತ್ತು ಮಾರಕ ರೋಗಕ್ಕೆ ತುತ್ತಾಗುವಂತೆ ಮಾಡಲು ಮುಸ್ಲಿಮರು ಖರ್ಜೂರದಲ್ಲಿ ಮಾತ್ರೆಗಳ ಇಟ್ಟು ಮಾರಾಟ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವ್ಯಕ್ತಿಯೊಬ್ಬರು ಮಾತ್ರೆಗೆ ನೀರು ಹಾಕಿ ಕಲಸಿ, ಅದನ್ನು ಖರ್ಚೂರದ ಒಳಗೆ ಸೇರಿಸುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಈ ಮುಸ್ಲಿಂ ಹಲ್ಕಾ ಭೇವಾರ್ಷಿಗಳು ಮಾರಕ ರೋಗ ಬರಲು ಮತ್ತು ಮಕ್ಕಳಾಗದಂತೆ ಖರ್ಜುರದಲ್ಲಿ ಮಾತ್ರೆ ಗಳನ್ನು ಇಟ್ಟು ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸ್ ರವರು ಬಂಧಿಸಿದ್ದಾರೆ..ಇನ್ನಾದರೂ ಎಚೆತ್ತುಕೊಳ್ಳಿ ಈ ರಕ್ಕಸ ಸಮಾಜ ಇಡೀ ಹಿಂದೂ ಮನುಕುಲಕ್ಕೆ ಮಾರಕ ವೆಂಬುದನ್ನು ತಿಳಿಯಿರಿ” ಎಂಬ ಬರಹದೊಂದಿಗೆ ವಾಟ್ಸಾಪ್‌ನಲ್ಲಿ ವಿಡಿಯೋವನ್ನು ಜೊತೆಗೆ ಹಂಚಿಕೊಳ್ಳಲಾಗುತ್ತಿದೆ.

ಕೆಲ ಫೇಸ್‌ಬುಕ್‌ ಪೇಜ್‌ಗಳಲ್ಲಿಯೂ ಮೇಲಿನ ಬರಹೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ಅವುಗಳ ಸ್ಕ್ರೀನ್‌ ಶಾಟ್ ಕೆಳಗೆ ನೋಡಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ‘ತಾಝಾ ಟಿವಿ ಚಾನೆಲ್‘ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 13, 2025ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಅದರಲ್ಲಿ “ಡ್ರಗ್ ಗ್ಯಾಂಗ್‌ ರೈಲಿನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಖರ್ಜೂರದಲ್ಲಿ ಡ್ರಗ್ ಸೇರಿಸುವ ಮೂಲಕ ವಿಶಿಷ್ಟ ದಾರಿ ಕಂಡುಕೊಂಡಿದೆ. ಆರ್‌ಪಿಎಫ್‌ ತಂಡ ಇವರನ್ನು ಹೌರಾ ನಿಲ್ದಾಣದಲ್ಲಿ ಸೆರೆ ಹಿಡಿದಿದೆ” ಎಂದು ಬರೆದುಕೊಳ್ಳಲಾಗಿದೆ.

Screenshot

ಈ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘ಫ್ಯಾಕ್ಟ್‌ಲೀ‘ ಜನವರಿ 20,2025ರಂದು ಈ ಕುರಿತು ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ.

ವರದಿಯಲ್ಲಿ” ವಿಡಿಯೋ ಸಂಬಂಧ ನಾವು ಕೋಲ್ಕತ್ತಾದಲ್ಲಿ ‘ದಿ ಲೋಕಲ್ ಜರ್ನಲಿಸ್ಟ್’ ಎಂಬ ಸುದ್ದಿ ವೆಬ್‌ಸೈಟ್‌, ಫೇಸ್‌ಬುಕ್ ಪೇಜ್ ಮತ್ತು ಇನ್‌ಸ್ಟಾಗ್ರಾಂ ಪೇಜ್ ನಡೆಸುತ್ತಿರುವ ಸ್ಥಳೀಯ ಪತ್ರಿಕಾ ವರದಿಗಾರನನ್ನು ಸಂಪರ್ಕಿಸಿದ್ದೇವೆ. ಅವರು “ವೈರಲ್ ವಿಡಿಯೋ ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯದ್ದು. ಖರ್ಜೂರದಲ್ಲಿ ಮತ್ತು ಬರುವ ಮಾತ್ರೆಗಳನ್ನು ಬೆರೆಸಿ ಪ್ರಯಾಣಿಕರಿಗೆ ಕೊಟ್ಟ ಬಳಿಕ ಹೇಗೆ ದರೋಡೆ ಮಾಡಲಾಗುತ್ತಿದ್ದು ಎಂಬುವುದನ್ನು ದರೋಡೆ ತಂಡ ಪೊಲೀಸರ ಮುಂದೆ ಮಾಡಿ ತೋರಿಸಿದೆ” ಎಂಬುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮುಂದುವರಿದು..”ಈ ಘಟನೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನಾವು ಹೌರಾ ಜಿಆರ್‌ಪಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದೇವೆ. ನಮ್ಮೊಂದಿಗೆ ಮಾತನಾಡಿದ ಹೌರಾ ಜಿಆರ್‌ಪಿ ಪೊಲೀಸ್ ಅಧಿಕಾರಿಗಳು, ಈ ದರೋಡೆಕೋರರು ಪ್ರಯಾಣಿಕರಿಗೆ ಮತ್ತು ಬರುವ ಆಹಾರವನ್ನು ನೀಡುವ ಮೂಲಕ ರೈಲುಗಳಲ್ಲಿ ದರೋಡೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದರೋಡೆಕೋರರು ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸಿಕೊಂಡು ಕೃತ್ಯವೆಸಗುತ್ತಿರಲಿಲ್ಲ. ಅಲ್ಲದೆ, ಮತ್ತು ಬರುವ ಮಾತ್ರೆಗಳು ದುರ್ಬಲತೆಯನ್ನು ಉಂಟುಮಾಡುವ ಔಷಧಿಗಳಲ್ಲ ಎಂದು ತಿಳಿಸಿದ್ದಾರೆ” ಎಂದು ಫ್ಯಾಕ್ಟ್‌ಲೀ ವರದಿ ವಿವರಿಸಿದೆ.

ಪ್ರಕರಣ ಸಂಬಂಧ ನಾವು ಪಶ್ಚಿಮ ಬಂಗಾಳ ಪೊಲೀಸ್ ವೆಬ್‌ಸೈಟ್‌ ಪರಿಶೀಲಿಸಿದಾಗ ಎಫ್‌ಐಆರ್ ಪ್ರತಿಯೂ ಲಭ್ಯವಾಗಿದೆ. ಎಫ್‌ಐಆರ್ ಪ್ರಕಾರ, ಜನವರಿ 11,2025 ರಂದು, ಹೌರಾ ರೈಲು ನಿಲ್ದಾಣದ ಹಳೆಯ ಸಂಕೀರ್ಣದ ಪ್ಲಾಟ್‌ಫಾರ್ಮ್ ಸಂಖ್ಯೆ 7 ರಿಂದ ಮೂವರು ದರೋಡೆಕೋರರ ಗುಂಪನ್ನು ಬಂಧಿಸಲಾಗಿದೆ. ಅವರು ರೈಲುಗಳಲ್ಲಿ ಪ್ರಯಾಣಿಕರಿಗೆ ಖರ್ಜೂರಲ್ಲಿ ಅಮಲು ಮಾತ್ರೆಗಳನ್ನು (ಅಟಿವಾನ್ 2 ಎಂಜಿ) ಬೆರೆಸಿ ಕೊಟ್ಟ ಬಳಿಕ ದರೋಡೆ ಮಾಡುತ್ತಿದ್ದರು.

ಎಫ್‌ಐಆರ್‌ನಲ್ಲಿ ಶಂಬ್ರು ಪಾಸ್ವಾನ್, ಗೋವಿಂದ್ ಕುಮಾರ್ ಮತ್ತು ಮೊಹಮ್ಮದ್ ಇರ್ಫಾನ್ ಎಂದು ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಎಫ್‌ಐಆರ್ ಪ್ರತಿಯನ್ನು ಇಲ್ಲಿ ನೋಡಬಹುದು.

ಎಫ್‌ಐಆರ್ ಪ್ರತಿ

ಒಟ್ಟಾರೆಯಾಗಿ ಹೇಳುವುದಾದರೆ, ಮೂವರು ದರೋಡೆಕೋರರ ತಂಡ ಖರ್ಜೂರದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ರೈಲು ಪ್ರಯಾಣಿಕರಿಗೆ ಕೊಟ್ಟ ಬಳಿಕ ದರೋಡೆ ಮಾಡುತ್ತಿತ್ತು. ಈ ತಂಡವನ್ನು ಜನವರಿ 11,2025 ರಂದು ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಬಳಿಕ, ಅವರಲ್ಲಿ ಒಬ್ಬ ಹೇಗೆ ದರೋಡೆ ಮಾಡುತ್ತಿದ್ದೆವು ಎಂದು ಪೊಲೀಸರಿಗೆ ತೋರಿಸಿದ್ದಾರೆ. ಆ ವಿಡಿಯೋ ಆಗಿದೆ ವೈರಲ್ ಆಗಿರುವುದು.

ಅದಲ್ಲದೆ, ಹಿಂದೂಗಳಿಗೆ ಮಕ್ಕಳಾಗದಂತೆ ತಡೆಯಲೋ, ಮಾರಕ ರೋಗ ಬರುವಂತೆ ಮಾಡಲೋ ಮುಸ್ಲಿಮರು ಮಾತ್ರೆ ಬೆರೆಸಿ ಕೊಟ್ಟದಲ್ಲ.

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...