Homeಮುಖಪುಟತೆಲಂಗಾಣ | ರಿಯಲ್ ಎಸ್ಟೇಲ್‌ ಬೆಂಬಲಿಗನಿಗೆ ಥಳಿಸಿದ ಬಿಜೆಪಿ ಸಂಸದ ಈಟೆಲಾ ರಾಜೇಂದರ್

ತೆಲಂಗಾಣ | ರಿಯಲ್ ಎಸ್ಟೇಲ್‌ ಬೆಂಬಲಿಗನಿಗೆ ಥಳಿಸಿದ ಬಿಜೆಪಿ ಸಂಸದ ಈಟೆಲಾ ರಾಜೇಂದರ್

- Advertisement -
- Advertisement -

ಜನರ ಆಸ್ತಿಯನ್ನು ಆಕ್ರಮಿಸಿಕೊಂಡು ಭೂ ದಲ್ಲಾಳಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ಈಟೆಲಾ ರಾಜೇಂದರ್ ಅವರು ಜನರ ಮುಂದೆಯೆ ವ್ಯಕ್ತಿಯೊಬ್ಬರಿಗೆ ಥಳಿಸಿರುವ ಘಟನೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೋಚಾರಂನಲ್ಲಿ ನಡೆದಿದೆ. ಘಟನೆಯನ್ನು ಸಮರ್ಥಿಸಿಕೊಂಡಿರುವ ಸಂಸದ, ತಾನು ಸಂತ್ರಸ್ತ ಜನರ ಪರವಾಗಿ ನಿಂತಿದ್ದಾಗಿ ಹೇಳಿಕೊಂಡಿದ್ದಾರೆ. ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭೂ ಒತ್ತುವರಿ ಕುರಿತು ದೂರುಗಳ ಹಿನ್ನಲೆ ಬಿಜೆಪಿ ಸಂಸದ ರಾಜೇಂದರ್ ಮೇಡ್ಚಲ್ ಜಿಲ್ಲೆಯ ಪೋಚಾರಂ ಪುರಸಭೆಯ ಏಕಶಿಲಾ ನಗರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು ವಿವರಿಸಿದ್ದು, ಈ ವೇಳೆ ಸಂಸದ ವ್ಯಕ್ತಿಯ ಕಪಾಳಕ್ಕೆ ಥಳಿಸಿದ್ದಾರೆ. ತೆಲಂಗಾಣ

ಬಡವರ ಜಮೀನನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳು ಒತ್ತುವರಿ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯು ಭೂ ಸಮಸ್ಯೆಯಲ್ಲಿ ಜನರನ್ನು “ಕಿರುಕುಳ” ಮಾಡುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯ ಸಹಾಯಕರಲ್ಲಿ ಒಬ್ಬರು ಎಂದು ಸಂಸದ ರಾಜೇಂದರ್ ಆರೋಪಿಸಿದ್ದಾರೆ.

ಇದೇ ವೇಳೆ, ಪೊಲೀಸರು ಮತ್ತು ಕಂದಾಯ ಅಧಿಕಾರಿಗಳ ನಿಷ್ಕ್ರಿಯತೆಯನ್ನು ಆರೋಪಿಸಿದ ರಾಜೇಂದರ್, ಮುಖ್ಯಮಂತ್ರಿ ರೇವಂತ್ ರೆಡ್ಡಿ ಭೂ ಸಮಸ್ಯೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು ಅಸಹಾಯಕ ಭೂ ಮಾಲೀಕರಿಗೆ ಅವರ ನಿವೇಶನಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸದ ಈಟಲ ರಾಜೇಂದರ್ ವ್ಯಕ್ತಿಯ ಕಪಾಳಕ್ಕೆ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಪ್ರದೇಶದಲ್ಲಿ ಬಡವರ ಜಮೀನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಂಸದ ವ್ಯಕ್ತಿಗೆ ಥಳಿಸಿದ ನಂತರ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಕೂಡ ವ್ಯಕ್ತಿಗೆ ಥಳಿಸಿದ್ದಾರೆ.

ಇದನ್ನೂಓದಿ:  ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...