Homeಮುಖಪುಟಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ 

ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರದಂದು ಅಧಿಕಾರಿಗಳು ಬಾಧಾಲ್ ಅನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಿದ್ದು, ಮೊದಲನೆ ವಲಯದಲ್ಲಿ ಸಾವುಗಳು ಸಂಭವಿಸಿದ ಎಲ್ಲಾ ಕುಟುಂಬಗಳನ್ನು ಒಳಗೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನರಮಂಡಲದ ಮೇಲೆ ಕಾರ್ಯನಿರ್ವಹಿಸುವ ವಿಷದಿಂದಾಗಿ (Neurotoxin) ಸಾವುಗಳು ಸಂಭವಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಆದರೂ, ವ್ಯಾಪಕ ಪರೀಕ್ಷೆಯ ಹೊರತಾಗಿಯೂ ಇದಕ್ಕೆ ಸ್ಪಷ್ಟ ಕಾರಣವನ್ನು ತಜ್ಞರು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೀಡಿತ ಕುಟುಂಬಗಳ ಮನೆಗಳನ್ನು ಮುಚ್ಚಲಾಗುತ್ತದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯದ ಹೊರತು, ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ರಾಜೌರಿ) ರಾಜೀವ್ ಕುಮಾರ್ ಖಜುರಿಯಾ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಎರಡನೇ ವಲಯವನ್ನು ಸತ್ತವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನಿವಾಸಿಗಳ ಮನೆಗಳನ್ನು ಒಳಗೊಂಡಿದೆ. ಅವರ ಮೇಲ್ವಿಚಾರಣೆಗಾಗಿ ರಾಜೌರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ವರದಿ ಹೇಳಿದೆ. ಮೂರನೇ ವಲಯವು ಇತರ ಎಲ್ಲಾ ಮನೆಗಳನ್ನು ಒಳಗೊಂಡಿದೆ.

 

ಕಂಟೈನ್ಮೆಂಟ್ ವಲಯಗಳೊಳಗಿನ ಕುಟುಂಬಗಳಿಗೆ ನೀಡಲಾಗುವ ಎಲ್ಲಾ ಊಟಗಳನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪ್ರೋಟೋಕಾಲ್‌ಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುತ್ತದೆ. “ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕಂಟೈನ್ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಕೂಟಗಳನ್ನು ಇಲ್ಲಿ ನಿಷೇಧಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಪೀಡಿತ ಕುಟುಂಬಗಳು ಮತ್ತು ಅವರ ನಿಕಟ ಸಂಪರ್ಕದಲ್ಲಿರುವವರು ಜಿಲ್ಲಾಡಳಿತ ಒದಗಿಸಿದ ಆಹಾರ ಮತ್ತು ನೀರನ್ನು ಮಾತ್ರ ಸೇವಿಸುವುದು ಕಡ್ಡಾಯವಾಗಿದೆ. ಮನೆಗಳಲ್ಲಿ ಲಭ್ಯವಿರುವ ಯಾವುದೇ ಇತರ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.” ಎಂದು ಆದೇಶಿಸಲಾಗಿದೆ. ಜಮ್ಮು ಕಾಶ್ಮೀರ 

ಜಿಲ್ಲಾ ಅಧಿಕಾರಿಗಳು ಎಲ್ಲಾ ಆಹಾರ ಮತ್ತು ನೀರಿನ ಸರಬರಾಜುಗಳನ್ನು ತಕ್ಷಣ ಬದಲಾಯಿಸಲು ಆದೇಶಿಸಿದ್ದಾರೆ. ಸಾವುಗಳು ನಡೆದ ಮನೆಗಳಲ್ಲಿರುವ ಎಲ್ಲಾ ಖಾದ್ಯ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳವಾರದಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಯುತ್ತಿದೆ ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. “ಕೇಂದ್ರವು ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗಾಗಿ ತಂಡವನ್ನು ಸಹ ನಿಯೋಜಿಸಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ನಾಗರಿಕ ಆಡಳಿತ, ಪೊಲೀಸ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಯತ್ನಗಳು ಏನಾಯಿತು ಎಂಬುದರ ಕುರಿತು ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುತ್ತವೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ.” ಎಂದು ಸಿಎಂ ಹೇಳಿದ್ದಾರೆ.

ಘಟನೆಯು ಮೊದಲ ಬಾರಿಗೆ ಡಿಸೆಂಬರ್ 7 ರಂದು ಸಮುದಾಯಿಕ ಭೋಜನದ ನಂತರ ಒಂದೇ ಕುಟುಂಬದ ಏಳು ಸದಸ್ಯರು ಅಸ್ವಸ್ಥರಾಗಿದ್ದರು. ಇದರ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಈ ವೇಳೆ ಅವರಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.

ಡಿಸೆಂಬರ್ 2 ರಂದು ಫಜಲ್ ಹುಸೇನ್ ಎಂಬ ನಿವಾಸಿಯ ಮನೆಯಲ್ಲಿ ಮದುವೆಯ ಹಬ್ಬದ ಭಾಗವಾಗಿ ಸಮುದಾಯಿಕ ಭೋಜನವನ್ನು ಸಹ ನೀಡಲಾಗಿತ್ತು. ಫಜಲ್ ಮತ್ತು ಅವರ ಮೂವರು ಮಕ್ಕಳು ದಿನಗಳ ನಂತರ ನಿಧನರಾಗಿದ್ದರು. ಜಮ್ಮು ಕಾಶ್ಮೀರ

ಜನವರಿ 9 ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಜಲ್ ಅವರ ಮನೆಯಲ್ಲಿ ಮತ್ತೊಂದು ಸಮುದಾಯಿಕ ಭೋಜನವನ್ನು ನೀಡಲಾಗಿತ್ತು. ಈ ವೇಳೆ ಹಲವಾರು ಗ್ರಾಮಸ್ಥರು ಈ ಕೂಟಗಳಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.

ಜನವರಿ 15 ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂಓದಿ:  ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...