Homeಮುಖಪುಟಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

- Advertisement -
- Advertisement -

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ 

ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರದಂದು ಅಧಿಕಾರಿಗಳು ಬಾಧಾಲ್ ಅನ್ನು ಮೂರು ಕಂಟೈನ್ಮೆಂಟ್ ವಲಯಗಳಾಗಿ ವಿಂಗಡಿಸಿದ್ದು, ಮೊದಲನೆ ವಲಯದಲ್ಲಿ ಸಾವುಗಳು ಸಂಭವಿಸಿದ ಎಲ್ಲಾ ಕುಟುಂಬಗಳನ್ನು ಒಳಗೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ನರಮಂಡಲದ ಮೇಲೆ ಕಾರ್ಯನಿರ್ವಹಿಸುವ ವಿಷದಿಂದಾಗಿ (Neurotoxin) ಸಾವುಗಳು ಸಂಭವಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಆದರೂ, ವ್ಯಾಪಕ ಪರೀಕ್ಷೆಯ ಹೊರತಾಗಿಯೂ ಇದಕ್ಕೆ ಸ್ಪಷ್ಟ ಕಾರಣವನ್ನು ತಜ್ಞರು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೀಡಿತ ಕುಟುಂಬಗಳ ಮನೆಗಳನ್ನು ಮುಚ್ಚಲಾಗುತ್ತದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯದ ಹೊರತು, ಅವರ ಕುಟುಂಬ ಸದಸ್ಯರು ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ರಾಜೌರಿ) ರಾಜೀವ್ ಕುಮಾರ್ ಖಜುರಿಯಾ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಎರಡನೇ ವಲಯವನ್ನು ಸತ್ತವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ನಿವಾಸಿಗಳ ಮನೆಗಳನ್ನು ಒಳಗೊಂಡಿದೆ. ಅವರ ಮೇಲ್ವಿಚಾರಣೆಗಾಗಿ ರಾಜೌರಿಯಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ವರದಿ ಹೇಳಿದೆ. ಮೂರನೇ ವಲಯವು ಇತರ ಎಲ್ಲಾ ಮನೆಗಳನ್ನು ಒಳಗೊಂಡಿದೆ.

 

ಕಂಟೈನ್ಮೆಂಟ್ ವಲಯಗಳೊಳಗಿನ ಕುಟುಂಬಗಳಿಗೆ ನೀಡಲಾಗುವ ಎಲ್ಲಾ ಊಟಗಳನ್ನು ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ. ಪ್ರೋಟೋಕಾಲ್‌ಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುತ್ತದೆ. “ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ಕಂಟೈನ್ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಕೂಟಗಳನ್ನು ಇಲ್ಲಿ ನಿಷೇಧಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಪೀಡಿತ ಕುಟುಂಬಗಳು ಮತ್ತು ಅವರ ನಿಕಟ ಸಂಪರ್ಕದಲ್ಲಿರುವವರು ಜಿಲ್ಲಾಡಳಿತ ಒದಗಿಸಿದ ಆಹಾರ ಮತ್ತು ನೀರನ್ನು ಮಾತ್ರ ಸೇವಿಸುವುದು ಕಡ್ಡಾಯವಾಗಿದೆ. ಮನೆಗಳಲ್ಲಿ ಲಭ್ಯವಿರುವ ಯಾವುದೇ ಇತರ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.” ಎಂದು ಆದೇಶಿಸಲಾಗಿದೆ. ಜಮ್ಮು ಕಾಶ್ಮೀರ 

ಜಿಲ್ಲಾ ಅಧಿಕಾರಿಗಳು ಎಲ್ಲಾ ಆಹಾರ ಮತ್ತು ನೀರಿನ ಸರಬರಾಜುಗಳನ್ನು ತಕ್ಷಣ ಬದಲಾಯಿಸಲು ಆದೇಶಿಸಿದ್ದಾರೆ. ಸಾವುಗಳು ನಡೆದ ಮನೆಗಳಲ್ಲಿರುವ ಎಲ್ಲಾ ಖಾದ್ಯ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳವಾರದಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗ್ರಾಮಕ್ಕೆ ಭೇಟಿ ನೀಡಿ ತನಿಖೆ ನಡೆಯುತ್ತಿದೆ ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. “ಕೇಂದ್ರವು ಮಾದರಿಗಳನ್ನು ಸಂಗ್ರಹಿಸಿದ್ದು, ತನಿಖೆಗಾಗಿ ತಂಡವನ್ನು ಸಹ ನಿಯೋಜಿಸಿದೆ” ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ನಾಗರಿಕ ಆಡಳಿತ, ಪೊಲೀಸ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಯತ್ನಗಳು ಏನಾಯಿತು ಎಂಬುದರ ಕುರಿತು ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುತ್ತವೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ.” ಎಂದು ಸಿಎಂ ಹೇಳಿದ್ದಾರೆ.

ಘಟನೆಯು ಮೊದಲ ಬಾರಿಗೆ ಡಿಸೆಂಬರ್ 7 ರಂದು ಸಮುದಾಯಿಕ ಭೋಜನದ ನಂತರ ಒಂದೇ ಕುಟುಂಬದ ಏಳು ಸದಸ್ಯರು ಅಸ್ವಸ್ಥರಾಗಿದ್ದರು. ಇದರ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಈ ವೇಳೆ ಅವರಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.

ಡಿಸೆಂಬರ್ 2 ರಂದು ಫಜಲ್ ಹುಸೇನ್ ಎಂಬ ನಿವಾಸಿಯ ಮನೆಯಲ್ಲಿ ಮದುವೆಯ ಹಬ್ಬದ ಭಾಗವಾಗಿ ಸಮುದಾಯಿಕ ಭೋಜನವನ್ನು ಸಹ ನೀಡಲಾಗಿತ್ತು. ಫಜಲ್ ಮತ್ತು ಅವರ ಮೂವರು ಮಕ್ಕಳು ದಿನಗಳ ನಂತರ ನಿಧನರಾಗಿದ್ದರು. ಜಮ್ಮು ಕಾಶ್ಮೀರ

ಜನವರಿ 9 ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಜಲ್ ಅವರ ಮನೆಯಲ್ಲಿ ಮತ್ತೊಂದು ಸಮುದಾಯಿಕ ಭೋಜನವನ್ನು ನೀಡಲಾಗಿತ್ತು. ಈ ವೇಳೆ ಹಲವಾರು ಗ್ರಾಮಸ್ಥರು ಈ ಕೂಟಗಳಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ.

ಜನವರಿ 15 ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದನ್ನೂಓದಿ:  ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...