Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...