Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...