Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...