Homeಮುಖಪುಟ'ಇದು ಕೊನೆಗೊಳ್ಳಬೇಕು!' | ಉಮರ್ ಖಾಲಿದ್ ಜಾಮೀನು ಅರ್ಜಿಯ ಬಗ್ಗೆ ಹೈಕೋರ್ಟ್

‘ಇದು ಕೊನೆಗೊಳ್ಳಬೇಕು!’ | ಉಮರ್ ಖಾಲಿದ್ ಜಾಮೀನು ಅರ್ಜಿಯ ಬಗ್ಗೆ ಹೈಕೋರ್ಟ್

- Advertisement -
- Advertisement -

ದೆಹಲಿಯ 2020 ರ ಗಲಭೆ ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಆರು ಜನರ ಜಾಮೀನು ಅರ್ಜಿಗಳ ವಿರುದ್ಧದ ಅರ್ಜಿಗಳನ್ನು ಕೊನೆಯಿಲ್ಲದೆ ಕೇಳುತ್ತಲೆ ಇರಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಪ್ರಾಸಿಕ್ಯೂಷನ್‌ಗೆ ತಿಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಇದು ಕೊನೆಗೊಳ್ಳಬೇಕು

ಈ ವಿಷಯಕ್ಕೆ ಸಂಬಂಧಿಸಿದಂತೆ ಇಮಾಮ್ ಮಾಡಿದ್ದಾರೆ ಎನ್ನಲಾದ ಭಾಷಣಗಳ ಆಯ್ದ ಭಾಗಗಳನ್ನು ವಿಶೇಷ ಸಾರ್ವಜನಿಕ ಅಭಿಯೋಜಕ ಅಮಿತ್ ಪ್ರಸಾದ್ ಓದುತ್ತಿದ್ದಾಗ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ಪೀಠವು ಮಧ್ಯಪ್ರವೇಶಿಸಿತು. ಪ್ರಸಾದ್ ಅವರ ವಾದಗಳು ಎಷ್ಟು ಕಾಲ ಮುಂದುವರಿಯುತ್ತವೆ ಎಂದು ಈ ವೇಳೆ ಪೀಠ ಕೇಳಿತು.

“ಇದು ಕೊನೆಗೊಳ್ಳಬೇಕು! ಇದು ಈಗ ಕೊನೆಗೊಳ್ಳಬೇಕು. ಇದು ಕೊನೆಯಿಲ್ಲದೆ ಮುಂದುವರಿಯಲು ಸಾಧ್ಯವಿಲ್ಲ. ನಾವು ನಿಮಗೆ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ.” ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ನ್ಯಾಯಾಲಯ ಉಲ್ಲೇಖಿಸಿದೆ. ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಕೂಡ ಪ್ರಕರಣದಲ್ಲಿ ವಾದಗಳನ್ನು ಸಲ್ಲಿಕೆ ಮಾಡಲು ಸಮಯ ಕೋರಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈಗ ಮುಗಿಸಬೇಕು. ಇದು ಕೊನೆಯಿಲ್ಲದೆ ಮುಂದುವರಿಯಲು ಸಾಧ್ಯವಿಲ್ಲ.” ಎಂದು ಚಾವ್ಲಾ ಹೇಳಿದ್ದಾರೆ. ಪ್ರಕರಣಗಳ ಮುಂದಿನ ವಿಚಾರಣೆಯನ್ನು ಫೆಬ್ರವರಿ 12 ರಂದು ನಡೆಸುವುದಾಗಿ ಪೀಠ ನಿಗದಿಪಡಿಸಿದೆ.

ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿರುವ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್, ಮೊಹಮ್ಮದ್ ಸಲೀಮ್ ಖಾನ್, ಶಿಫಾ ಉರ್ ರೆಹಮಾನ್, ಶಾದಾಬ್ ಅಹ್ಮದ್, ಅಥರ್ ಖಾನ್, ಖಾಲಿದ್ ಸೈಫಿ ಮತ್ತು ಗುಲ್ಫಿಶಾ ಫಾತಿಮಾ ಸಲ್ಲಿಸಿದ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

2020ರ ಫೆಬ್ರವರಿ ವೇಳೆ ಈಶಾನ್ಯ ದೆಹಲಿಯಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಸಾರ್ವಜನಿಕ ಆಸ್ತಿಗೆ ಹಾನಿ ತಡೆಗಟ್ಟುವಿಕೆ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅವರ ಮೇಲೆ ಪ್ರಕಣಗಳನ್ನು ದಾಖಲಿಸಲಾಗಿದೆ.

ಈ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಅಸ್ಥಿರಗೊಳಿಸಲು ದೊಡ್ಡ ಪಿತೂರಿಯ ಭಾಗವಾಗಿ ಹಿಂಸಾಚಾರ ನಡೆದಿದ್ದು, ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರು ಇದನ್ನು ಯೋಜಿಸಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂಓದಿ:  ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...