Homeಮುಖಪುಟಚುನಾವಣಾ ಬಾಂಡ್ ನಿಧಿಗಳ ಮುಟ್ಟುಗೋಲು ತಿರಸ್ಕಾರದ ಆದೇಶ ಪರಿಶೀಲಿಸಲು ಅರ್ಜಿ

ಚುನಾವಣಾ ಬಾಂಡ್ ನಿಧಿಗಳ ಮುಟ್ಟುಗೋಲು ತಿರಸ್ಕಾರದ ಆದೇಶ ಪರಿಶೀಲಿಸಲು ಅರ್ಜಿ

- Advertisement -
- Advertisement -

ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಹಣವನ್ನು ಮರುಪಡೆಯಲು ಅಧಿಕಾರಿಗಳಿಗೆ ನಿರ್ದೇಶಿಸಲು ನಿರಾಕರಿಸಿದ ಆಗಸ್ಟ್ 2 ರ ಆದೇಶದ ವಿರುದ್ಧ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ. ಚುನಾವಣಾ ಬಾಂಡ್

ಚುನಾವಣಾ ಬಾಂಡ್ ವಹಿವಾಟುಗಳು ಕ್ವಿಡ್ ಪ್ರೊ ಕೋ ವ್ಯವಸ್ಥೆಯ ಭಾಗವಾಗಿದೆ ಎಂದು ವಾದಿಸಿ ಖೇಮ್ ಸಿಂಗ್ ಭಾಟಿ ಎಂಬ ವಕೀಲರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಕ್ವಿಡ್ ಪ್ರೊ ಕ್ವೋ ವ್ಯವಸ್ಥೆ ಎಂದರೆ ಇಬ್ಬರ ನಡುವೆ ಪರಸ್ಪತ ಸರಕು, ಸೇವೆಗಳು ಅಥವಾ ಇತರ ಅನುಕೂಲಗಳ ವಿನಿಮಯ ಮಾಡಿಕೊಳ್ಳುವ ವ್ಯವಸ್ಥೆಯಾಗಿದೆ.

ಈ ಯೋಜನೆಯ ಮೂಲಕ ರಾಜಕೀಯ ಪಕ್ಷಗಳು ಮತ್ತು ಕಾರ್ಪೊರೇಟ್ ದಾನಿಗಳ ನಡುವೆ ಪ್ರಯೋಜನಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ವಕೀಲ ಭಾಟಿ ಆರೋಪಿಸಿದ್ದಾರೆ. ಹಾಗಾಗಿ, ಯೋಜನೆಯ ಮೂಲಕ ರಾಜಕೀಯ ಪಕ್ಷಗಳು ಪಡೆದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಕೇಂದ್ರ ವಿಜಿಲೆನ್ಸ್ ಸಮಿತಿಗೆ ನಿರ್ದೇಶನ ನೀಡಬೇಕೆಂದು ಅವರು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ.

ರಾಜಕೀಯ ಪಕ್ಷಗಳು ದಾನಿಗಳಿಗೆ ಒದಗಿಸಲಾಗಿದೆ ಎಂದು ಹೇಳಲಾದ ಅಕ್ರಮ ಪ್ರಯೋಜನಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆಯೂ ವಕೀಲರು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗಸ್ಟ್‌ನಲ್ಲಿ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಬಾಂಡ್‌ಗಳ ಮೂಲಕ ಕ್ವಿಡ್ ಪ್ರೊ ಕೋ ವ್ಯವಸ್ಥೆಗಳ ಆರೋಪದ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ನಿರಾಕರಿಸಿತ್ತು. ಚುನಾವಣಾ ಬಾಂಡ್

ಚುನಾವಣಾ ಬಾಂಡ್‌ಗಳು ಎಂದರೆ, ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಖರೀದಿಸಿ ರಾಜಕೀಯ ಪಕ್ಷಕ್ಕೆ ನೀಡಬಹುದಾದ ವಿತ್ತೀಯ ಬಾಂಡ್‌ಗಳಾಗಿದ್ದು, ನಂತರ ಅವುಗಳನ್ನು ಪುನಃ ಪಡೆದುಕೊಳ್ಳುತ್ತವೆ. ಈ ಯೋಜನೆಯನ್ನು ಜನವರಿ 2018 ರಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಪರಿಚಯಿಸಿತು.

ಖರೀದಿದಾರರು ಈ ಬಡ್ಡಿರಹಿತ ಬಾಂಡ್‌ಗಳ ಖರೀದಿಯನ್ನು ಘೋಷಿಸಬೇಕಾಗಿಲ್ಲ ಮತ್ತು ರಾಜಕೀಯ ಪಕ್ಷಗಳು ಹಣದ ಮೂಲವನ್ನು ತೋರಿಸಬೇಕಾಗಿಲ್ಲದ ಕಾರಣ ಸಂಪೂರ್ಣ ಪ್ರಕ್ರಿಯೆಯು ಅನಾಮಧೇಯವಾಗಿತ್ತು. ಆದಾಗ್ಯೂ, ಕೇಂದ್ರ ಸರ್ಕಾರವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ನಿಯಂತ್ರಿಸುವುದರಿಂದ ದಾನಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಅವಕಾಶವನ್ನು ಹೊಂದಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 29 ಅಧಿಕೃತ ಶಾಖೆಗಳ ಮೂಲಕ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಮತ್ತು ನಗದೀಕರಿಸಲು ಅಧಿಕಾರವನ್ನು ಹೊಂದಿತ್ತು. ಅದಾಗ್ಯೂ, ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿತ್ತು.

ಈ ಯೋಜನೆಯು ಮಾಹಿತಿ ಹಕ್ಕು, ವಾಕ್ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಮತ್ತು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವೆ ಕ್ವಿಡ್ ಪ್ರೊ ಕ್ವೋ ವ್ಯವಸ್ಥೆಗಳಿಗೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟಿತ್ತು. ನಂತರ ಬಿಡುಗಡೆಯಾದ ಮಾಹಿತಿಯ ಪ್ರಕಾರ, ಚುನಾವಣಾ ಬಾಂಡ್‌ಗಳ ಮೂಲಕ ಆಡಳಿತಾರೂಢ ಬಿಜೆಪಿ ಬೇರೆ ಎಲ್ಲಾ ಪಕ್ಷಗಳಿಗಿಂತ ಹೆಚ್ಚು ಲಾಭವನ್ನು ಪಡೆದಿದೆ ಎಂದು ಬಹಿರಂಗವಾಗಿತ್ತು.

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...