Homeಮುಖಪುಟಚುನಾವಣಾ ಬಾಂಡ್ ನಿಧಿಗಳ ಮುಟ್ಟುಗೋಲು ತಿರಸ್ಕಾರದ ಆದೇಶ ಪರಿಶೀಲಿಸಲು ಅರ್ಜಿ

ಚುನಾವಣಾ ಬಾಂಡ್ ನಿಧಿಗಳ ಮುಟ್ಟುಗೋಲು ತಿರಸ್ಕಾರದ ಆದೇಶ ಪರಿಶೀಲಿಸಲು ಅರ್ಜಿ

- Advertisement -
- Advertisement -

ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಹಣವನ್ನು ಮರುಪಡೆಯಲು ಅಧಿಕಾರಿಗಳಿಗೆ ನಿರ್ದೇಶಿಸಲು ನಿರಾಕರಿಸಿದ ಆಗಸ್ಟ್ 2 ರ ಆದೇಶದ ವಿರುದ್ಧ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ. ಚುನಾವಣಾ ಬಾಂಡ್

ಚುನಾವಣಾ ಬಾಂಡ್ ವಹಿವಾಟುಗಳು ಕ್ವಿಡ್ ಪ್ರೊ ಕೋ ವ್ಯವಸ್ಥೆಯ ಭಾಗವಾಗಿದೆ ಎಂದು ವಾದಿಸಿ ಖೇಮ್ ಸಿಂಗ್ ಭಾಟಿ ಎಂಬ ವಕೀಲರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಕ್ವಿಡ್ ಪ್ರೊ ಕ್ವೋ ವ್ಯವಸ್ಥೆ ಎಂದರೆ ಇಬ್ಬರ ನಡುವೆ ಪರಸ್ಪತ ಸರಕು, ಸೇವೆಗಳು ಅಥವಾ ಇತರ ಅನುಕೂಲಗಳ ವಿನಿಮಯ ಮಾಡಿಕೊಳ್ಳುವ ವ್ಯವಸ್ಥೆಯಾಗಿದೆ.

ಈ ಯೋಜನೆಯ ಮೂಲಕ ರಾಜಕೀಯ ಪಕ್ಷಗಳು ಮತ್ತು ಕಾರ್ಪೊರೇಟ್ ದಾನಿಗಳ ನಡುವೆ ಪ್ರಯೋಜನಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ವಕೀಲ ಭಾಟಿ ಆರೋಪಿಸಿದ್ದಾರೆ. ಹಾಗಾಗಿ, ಯೋಜನೆಯ ಮೂಲಕ ರಾಜಕೀಯ ಪಕ್ಷಗಳು ಪಡೆದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಕೇಂದ್ರ ವಿಜಿಲೆನ್ಸ್ ಸಮಿತಿಗೆ ನಿರ್ದೇಶನ ನೀಡಬೇಕೆಂದು ಅವರು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ.

ರಾಜಕೀಯ ಪಕ್ಷಗಳು ದಾನಿಗಳಿಗೆ ಒದಗಿಸಲಾಗಿದೆ ಎಂದು ಹೇಳಲಾದ ಅಕ್ರಮ ಪ್ರಯೋಜನಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆಯೂ ವಕೀಲರು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗಸ್ಟ್‌ನಲ್ಲಿ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಬಾಂಡ್‌ಗಳ ಮೂಲಕ ಕ್ವಿಡ್ ಪ್ರೊ ಕೋ ವ್ಯವಸ್ಥೆಗಳ ಆರೋಪದ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ನಿರಾಕರಿಸಿತ್ತು. ಚುನಾವಣಾ ಬಾಂಡ್

ಚುನಾವಣಾ ಬಾಂಡ್‌ಗಳು ಎಂದರೆ, ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಖರೀದಿಸಿ ರಾಜಕೀಯ ಪಕ್ಷಕ್ಕೆ ನೀಡಬಹುದಾದ ವಿತ್ತೀಯ ಬಾಂಡ್‌ಗಳಾಗಿದ್ದು, ನಂತರ ಅವುಗಳನ್ನು ಪುನಃ ಪಡೆದುಕೊಳ್ಳುತ್ತವೆ. ಈ ಯೋಜನೆಯನ್ನು ಜನವರಿ 2018 ರಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಪರಿಚಯಿಸಿತು.

ಖರೀದಿದಾರರು ಈ ಬಡ್ಡಿರಹಿತ ಬಾಂಡ್‌ಗಳ ಖರೀದಿಯನ್ನು ಘೋಷಿಸಬೇಕಾಗಿಲ್ಲ ಮತ್ತು ರಾಜಕೀಯ ಪಕ್ಷಗಳು ಹಣದ ಮೂಲವನ್ನು ತೋರಿಸಬೇಕಾಗಿಲ್ಲದ ಕಾರಣ ಸಂಪೂರ್ಣ ಪ್ರಕ್ರಿಯೆಯು ಅನಾಮಧೇಯವಾಗಿತ್ತು. ಆದಾಗ್ಯೂ, ಕೇಂದ್ರ ಸರ್ಕಾರವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ನಿಯಂತ್ರಿಸುವುದರಿಂದ ದಾನಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಅವಕಾಶವನ್ನು ಹೊಂದಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 29 ಅಧಿಕೃತ ಶಾಖೆಗಳ ಮೂಲಕ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಮತ್ತು ನಗದೀಕರಿಸಲು ಅಧಿಕಾರವನ್ನು ಹೊಂದಿತ್ತು. ಅದಾಗ್ಯೂ, ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿತ್ತು.

ಈ ಯೋಜನೆಯು ಮಾಹಿತಿ ಹಕ್ಕು, ವಾಕ್ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಮತ್ತು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವೆ ಕ್ವಿಡ್ ಪ್ರೊ ಕ್ವೋ ವ್ಯವಸ್ಥೆಗಳಿಗೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟಿತ್ತು. ನಂತರ ಬಿಡುಗಡೆಯಾದ ಮಾಹಿತಿಯ ಪ್ರಕಾರ, ಚುನಾವಣಾ ಬಾಂಡ್‌ಗಳ ಮೂಲಕ ಆಡಳಿತಾರೂಢ ಬಿಜೆಪಿ ಬೇರೆ ಎಲ್ಲಾ ಪಕ್ಷಗಳಿಗಿಂತ ಹೆಚ್ಚು ಲಾಭವನ್ನು ಪಡೆದಿದೆ ಎಂದು ಬಹಿರಂಗವಾಗಿತ್ತು.

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...