Homeಕರ್ನಾಟಕಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

ಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಹೊತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಅವರು ಬಾಬಾ ಸಾಹೇಬರ ಪ್ರತಿಮೆ ಮುಂದೆ ಮಂಡಿಯೂರಿ ಕ್ಷಮೆಯಾಚಿಸಬೇಕು ಎಂಬುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿ ಒಕ್ಕೂಟ ನಡೆಸಿದ ಬೃಹತ್ ಪ್ರತಿಭಟನಾ ರ್‍ಯಾಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಿತು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಸಂವಿಧಾನ ಮತ್ತು ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ” ಎಂದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ಹೇಳಿಕೆ ವಿರೋಧಿಸಿ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವಷ್ಟು ಬಂದ್ ಮತ್ತು ಪ್ರತಿಭಟನೆಗಳು ಬಹುಷಃ ಹಿಂದೆದೂ ನಡೆದಿಲ್ಲ; ಇದು ದಲಿತ ಚಳವಳಿಯ ತಾಕತ್ತು. ವಿವಿಧ ಜಿಲ್ಲೆಗಳಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ್ದಾರೆ. ಅವು ಯಶಸ್ವಿಯಾಗಲೇಬೇಕು ಎನ್ನುವ ಕಾರಣಕ್ಕೆ ಹಲವು ಸಮುದಾಯಗಳು ಶ್ರಮಿಸಿವೆ. ಆದ್ದರಿಂದ, ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕಾಯಿತು” ಎಂದರು.

“ಬೇರೆಬೇರೆ ಜಿಲ್ಲೆಗಳಿಂದ ಜನರು ಬಸ್ಸು, ರೈಲು ಮತ್ತು ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ವಿವಿಧ ಗ್ರಾಮ, ಕುಗ್ರಾಮ ಮತ್ತು ಹಾಡಿಗಳಿಂದ ಕಾರ್ಯಕರ್ತರು ಇಲ್ಲಿಗೆ ಬಂದಿದ್ದಾರೆ. ನೀವು ಬಂದಿರುವ ಉದ್ದೇಶ ಈಡೇರಬೇಕಾದರೆ, ನಾವೇನು ಮಾಡಬೇಕು ಎಂಬ ಸ್ಪಷ್ಟತೆ ಇರಬೇಕು. ರಾಜಕೀಯ ಪಕ್ಷಗಳು ಬಸ್‌ಗಳಲ್ಲಿ ಜನರನ್ನು ತುಂಬಿಕೊಂಡು ಬಂದು ಮೈದಾನಗಳಲ್ಲಿ ಬಿಟ್ಟು, ಬಿರಿಯಾನಿ ಹಾಗೂ ಐದು ನೂರು ರೂಪಾಯಿ ಕೈಗೆ ಕೊಟ್ಟರೆ ಅದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಬಾಬಾ ಸಾಹೇಬರ ಹೋರಾಟದ ರಕ್ತ ಮತ್ತು ಬೆವರಿನ ಪ್ರತಿಫಲ ಉಣ್ಣುತ್ತಿರುವ ಪ್ರತಿಯೊಂದು ಸಮುದಾಯ ಕೂಡ ಈ ವಿಚಾರವನ್ನು ಉಗ್ರವಾಗಿ ಖಂಡಿಸಬೇಕಾಗಿತ್ತು. ಆದರೆ, ಇವತ್ತು ದಲಿತ ಸಮುದಾಯ ಒಡಕಿನತ್ತ ಹೋಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

ಚಿಂತಕ ಶಿವಸುಂದರ್ ಅವರ ‘ಸಂವಿಧಾನ v/s ಸಂಘಿಗಳ ಸುಳ್ಳು ಅಭಿಯಾನ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

“ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಸೇವಾಲಾಲ್ ಸ್ವಾಮೀಜಿ ಇಂದು ಎಲ್ಲಿದ್ದಾರೆ. ಇವರೆಲ್ಲಾ ಬಾಬಾ ಸಾಹೇಬರ ಋಣ ಉಂಡವರಲ್ಲವೇ? ದಲಿತ ರಾಜಕಾರಣಿಗಳ ಬಾಯಿಗೆ ಏನಾಗಿದೆ..? ಇವರ ಬಾಯಿಗೆ ಯಾರಾದರೂ ಬೀಗ ಹಾಕಿದ್ದಾರೆಯೇ? ಬಾಬಾ ಸಾಹೇಬರಿಗೆ ಅವಮಾನ ಆದಾಗ ಪ್ರತಿಭಟಿಸಲಾರದವರಿಗೆ ಮಂತ್ರಿಗಿರಿ ಮತ್ತು ರಾಜಕೀಯ ಅಧಿಕಾರ ಯಾಕೆ ಬೇಕು, ಇವರೆಲ್ಲಾ ಅವಕಾಶ ಸಿಗದೇ ಇದ್ದಾಗ ಅಳುತ್ತಾರೆ. ಯಾವ ಸಮಾಜಕ್ಕೆ ಹುಕುಂದಾರಿಕೆ ಬರುವುದಿಲ್ಲವೋ.. ಆ ಸಮಾಜ ನರಸತ್ತ ಸಮಾಜ ಆಗಿರುತ್ತದೆ, ಅದರ ರಾಜಕಾರಣಿಗಳು ನರಸತ್ತವರಾಗಿರುತ್ತಾರೆ” ಎಂದು ಆಕ್ರೋಶ ಹೊರಹಾಕಿದರು.

“ನಾವು ಒಟ್ಟಿಗೆ ಸೇರುತ್ತೇವೆ.. ಮಾತನಾಡುತ್ತೇವೆ ಎಂದಾಗ ರಾಜಕೀಯ ಪಕ್ಷಗಳು ಹಾಗೆ ಮಾಡಬೇಡಿ ಎನ್ನುತ್ತಾರೆ. ನಾವು ಮಾತನಾಡಿದರೆ ನಿಮಗೇನು ಸಮಸ್ಯೆ? ನಮಗೆ ನಾವೇ ಹೈಕಮಾಂಡ್, ಸಂವಿಧಾನ ನಮ್ಮ ಹೈಕಮಾಂಡ್” ಎಂದರು.

“ನಮ್ಮ ವಿದ್ಯಾರ್ಥಿಗಳು ಹಾಗೂ ಯುವಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಂವಿಧಾನ ಮತ್ತು ಮನುವಾದದ ನಡುವಿನ ತಾರ್ಕಿಕ ಸಂಘರ್ಷಕ್ಕೆ ಬಂದು ನಿಂತಿದ್ದೇವೆ. ಮನುಸ್ಮೃತಿ ಸಾವಿರಾರು ವರ್ಷಗಳಿಂದ ಈ ದೇಶದ ದುಡಿಯುವ ಜನರನ್ನು ಹಾಗೂ ಶೂದ್ರಾತಿ ಶೂದ್ರರನ್ನು ಕಾಲಡಿಯಲ್ಲಿ ಹಾಕಿ ತುಳಿಯುತ್ತಿತ್ತು. ಅಂತ ಮನುಸ್ಮೃತಿಯ ಕಾಲನ್ನು ಮುರಿದಿದ್ದು ಬಾಬಾ ಸಾಹೇಬರ ಸಂವಿಧಾನ; ಅಂತ ಸಂವಿಧಾನದ ಮೂಲ ಆಶಯಕ್ಕೆ ಇಂದು ದಕ್ಕೆಯಾಗುತ್ತಿದೆ. ನಮ್ಮನ್ನೂ ಗೌರವಿಸುವ ಸಂವಿಧಾನ ಜಾರಿಗೆ ಬರಲಿ ಎಂದು ಉಡುಪಿ ಸ್ವಾಮಿ ಹೇಳುತ್ತಾರೆ.. ಉಡುಪಿ ಸ್ವಾಮಿಯನ್ನು ಗೌರವಿಸುವ ಸಂವಿಧಾನ ಯಾವುದು.. ಮನುಸ್ಮೃತಿನಾ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಕುಲಸ್ತರು ಹಾಗೂ ಅಂಬೇಡ್ಕರ್ ವಿಚಾರಧಾರೆ ಎಂದರೆ ಜೇನುಗೂಡು ಇದ್ದಂತೆ, ಅಂತಹ ಜೇನುಗೂಡಿಗೆ ಕೈ ಹಾಕಿದರೆ ನಿಮ್ಮನ್ನು ಸರ್ವನಾಶ ಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಜೇನು ಸಿಹಿಯಾಗಿದ್ದರೂ ಅದರ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ. ನಮ್ಮ ಪೂರ್ವಿಕರು ನಮಗೆ ಅಹಿಂಸೆ ಬೋಧಿಸಿದ್ದಾರೆ. ಬುದ್ಧ, ಬಸವಣ್ಣ, ಫುಲೆ ದಂಪತಿಗಳು, ನಾಲ್ವಡಿ ಕೃಷ್ಣರಾಜ ಒಡೆಯರು ನಮಗೆ ಶಾಂತಿಮಂತ್ರ ಬೋಧಿಸಿದ್ದಾರೆ. ಆ ಶಾಂತಿಮಂತ್ರದಿಂದ ದೇಶವನ್ನು ಮುನ್ನಡೆಸುತ್ತಿದ್ದೇವೆ. ನಾವು ಅಹಿಂಸಾ ಮಾರ್ಗ ಹಿಡಿದಿದ್ದರೆ ನೀವು ಏನಾಗುತ್ತಿದ್ರಿ ಎಂಬುದನ್ನು ಕಲ್ಪನೆ ಮಾಡಿಕೊಳ್ಳಿ. ಆದ್ದರಿಂದ, ತುಂಬಾ ಎಚ್ಚರಿಕೆಯಿಂದ ನೀವು ಮಾತನಾಡಬೇಕು. ಈ ದೇಶ ಇಂದು ಸೌಖ್ಯವಾಗಿದ್ದರೆ ಅದಕ್ಕೆ ಕಾರಣ ಅಸ್ಪೃಶ್ಯ ಸಮುದಾಯಗಳು ಎಂಬುದನ್ನು ನೀವು ಮರೆಯಬಾರದು” ಎಂದು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

“ಒಂದು ಕಡೆ ಗಾಂಧಿ ಕೊಂದವರನ್ನು ಆರಾಧಿಸುತ್ತಾರೆ; ಮತ್ತೊಂದು ಕಡೆ ಗಾಂಧಿಯನ್ನು ಪೂಜಿಸುತ್ತಾರೆ. ಇಂತ ಅವಿವೇಕಿಗಳ ಬಗ್ಗೆ ನಾವು ಎಚ್ಚರದಿಂದ ಇರಬೇಕು. ಇಂತವಗೆ ದಲಿತ ಸಮುದಾದಲ್ಲಿ ಗುಲಾಮರು ಹುಟ್ಟಿಕೊಳ್ಳುತ್ತಿದ್ದಾರೆ; ಆ ಗುಲಾಮರ ಬಗ್ಗೆ ಸಮುದಾಯ ಎಚ್ಚರವಾಗಿರಬೇಕು” ಎಂದು ಕಿವಿಮಾತು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ನಾವು ಕಾರಣ

“ಸರ್ಕಾರ ಕೂಡ ನಮ್ಮ ಬಗ್ಗೆ, ನಮ್ಮ ಬದುಕು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು. ಕೇವಲ ಭರವಸೆ ನೀಡಬಾರದು. ರಾಜ್ಯದಲ್ಲಿ ಜಾತ್ಯತೀತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮೂಲ ಕಾರಣ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ನಮಗೂ ಅಧಿಕಾರದಲ್ಲಿ ಪಾಲು ಕೊಡಬೇಕು; ಪಾಲು ಕೊಟ್ಟರೆ ಮಾತ್ರ ದಲಿತ ಸಮುದಾಯ ನಿಮ್ಮನ್ನು ಸಹಿಸಿಕೊಳ್ಳುತ್ತದೆ.. ಕೇವಲ ಓಟ್ ಹಾಕುವುದಕ್ಕೆ ಮಾತ್ರ ನಾವು ಸೀಮಿತವಾಗಿಲ್ಲ” ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಅಂಬೇಡ್ಕರ್ ಭಾರತ ರತ್ನ ಅಲ್ಲ.. ಅವರು ವಿಶ್ವ ರತ್ನವಾಗಿ ಜಗತ್ತಿನಲ್ಲಿ ರಾರಾಜಿಸುತ್ತಿದೆ. ನಾವು ಅವರ ಕುಡಿಗಳಾಗಿ ಸರಿಯಾದ ರೀತಿಯಲ್ಲಿ ಬಾಬಾ ಸಾಹೇಬರ ಚಿಂತನೆ ಮುಂದುವರಿಸಬೇಕು” ಎಂದರು.

ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಪತ್ರಕರ್ತ ಹಾಗೂ ಹೋರಾಟಗಾರ ಇಂದೂಧರ ಹೊನ್ನಾಪುರ, ದಸಂಸ ರಾಜ್ಯ ಸಂಯೋಜಕರಾದ ವಿ.ನಾಗರಾಜ್, ಇಂದಿರಾ ಕೃಷ್ಣಪ್ಪ ಸೇರಿದಂತೆ ಹಲವಾರು ದಸಂಸ ಮುಖಂಡರು ಇದ್ದರು.

ಇದನ್ನೂ ಓದಿ; ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...