Homeಕರ್ನಾಟಕಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ -...

ಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ – ಡಿವೈಎಫ್‌ಐ

- Advertisement -
- Advertisement -

ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ದುಷ್ಕರ್ಮಿಗಳು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನೇರ ಹೊಣೆ ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಗುರುವಾರ ಆರೋಪಿಸಿದೆ. ಅನೈತಿಕ ಚಟುವಟಿಕೆಗಳಿಗೆ ಮುಕ್ತ ಅವಕಾಶಕೊಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಕಾರಣಕ್ಕೆ ಮತ್ತೆ ನೈತಿಕ ಪೊಲೀಸ್ ಗಿರಿ ತಲೆಎತ್ತಿ ಮಂಗಳೂರಿನ ಮಾನವನ್ನು ಹರಾಜಿಗಿಟ್ಟಿದೆ ಎಂದು ಸಂಘಟನೆ ಆರೋಪಿಸಿದೆ. ಸೆಲೂನ್ ಮೇಲೆ ರಾಮ ಸೇನಾ

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮತ್ತು ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, “ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ವೇಶ್ಯಾವಾಟಿಕೆ, ಜುಗಾರಿ ಅಡ್ಡೆ, ಮಡ್ಕ ಸೇರಿದಂತೆ ಹಲವು ಬಗೆಯ ಗ್ಯಾಂಬ್ಲಿಂಗ್ ಗಳು ರಾಜಾರೋಷವಾಗಿ ನಡೆಯುತ್ತಲೆ ಇದೆ. ಈ ಬಗ್ಗೆ ಡಿವೈಎಫ್ಐ ಸಂಘಟನೆ ಪ್ರಾರಂಭದಿಂದಲೇ ಆರೋಪಿಸುತ್ತಾ ಬಂದಿದ್ದರೂ, ಈಗಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅವುಗಳಿಗೆ ಮುಕ್ತವಾಗಿ ಅವಕಾಶಕೊಟ್ಟು ನಗರದಲ್ಲಿಂದು ಹರಾಜಕತೆಯನ್ನು ಸೃಷ್ಟಿಸಿದ್ದಾರೆ.” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಗತಿಪರರು ನಡೆಸುವ ಜನಪರ ಹೋರಾಟಗಳಿಗೆ ಅವಕಾಶಕೊಡದೆ ವಿನಾಕಾರಣ ಕೇಸು ದಾಖಲಿಸುವ ಕಮೀಷನರ್ ಅನುಪಮ್ ಅದೇ ಸಂಘಪರಿವಾರದ ಕಾರ್ಯಕ್ರಮಕ್ಕೆ ಎಲ್ಲೆಂದರಲ್ಲಿ (ಕಾನೂನು ನಿಯಮ ಮೀರಿ) ಅವಕಾಶ ಕಲ್ಪಿಸಿ ನೇರ ಬೆಂಬಲಿಸುತ್ತಾ ಬಂದ ಕಾರಣಕ್ಕೆ ಇಂದು ರಾಮ ಸೇನೆ ಕಾರ್ಯಕರ್ತರು ಮತ್ತೆ ನಗರದಲ್ಲಿ ನೈತಿಕ ಗೂಂಡಾಗಿರಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈಗಾಗಲೇ ಒಂದಷ್ಟು ನಿಯಂತ್ರಿಸಲಾಗಿದ್ದ ಸಂಘಪಾರಿವಾರದ ನೈತಿಕ ಪೊಲೀಸ್ ಗಿರಿ ಮತ್ತೆ ಪುನರಾವರ್ತಿಸುವಲ್ಲಿ ಕಮೀಷನರ್ ಅಗ್ರವಾಲ್ ನೇರ ಹೊಣೆಯಾಗಿದ್ದು ಮಂಗಳೂರು ನಗರದ ಮಾನವನ್ನು ಮತ್ತೆ ಹರಾಜು ಹಾಕಿ ತಲೆ ತಗ್ಗಿಸುವಂತೆ ಮಾಡಿದೆ” ಎಂದು ಡಿವೈಎಫ್‌ಐ ಹೇಳಿದೆ. ಸೆಲೂನ್ ಮೇಲೆ ರಾಮ ಸೇನಾ

“ನಗರದ ಪೊಲೀಸ್ ಇಲಾಖೆಯ ವೈಫಲ್ಯತೆ ಬಗ್ಗೆ ಮತ್ತು ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಅಮಾನತುಗೊಳಿಸಿ ವರ್ಗಾಹಿಸಲು ಮುಖ್ಯಮಂತ್ರಿ, ಗೃಹ ಮಂತ್ರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಬೇಜವಾಬ್ದಾರಿಯನ್ನು ವಹಿಸಿದ್ದಾರೆ. ನಗರದ ಪೊಲೀಸ್ ಅವ್ಯವಸ್ಥೆಯನ್ನು ಸರಿಪಡಿಸದ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೂಲಕ ನಗರದಲ್ಲಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ” ಎಂದು ಸಂಘಟನೆ ಹೇಳಿದೆ.

ಈ ಎಲ್ಲಾ ಬೆಳವಣೆಗೆ ಮಂಗಳೂರು ನಗರದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಿ ಸಾಮಾರಸ್ಯ ಕದಡಲು ಅವಕಾಶ ಮಾಡಿಕೊಡುವಂತಹ ಬೆಳವಣೆಗೆಗೂ ಕಾಂಗ್ರೇಸ್ ಸರಕಾರವೂ ನೇರ ಹೊಣೆ ಹೊರಬೇಕಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಕರ್ನಾಟಕ ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತು ರಾಮ ಸೇನೆ ನಡೆಸಿದ ದಾಂಧಲೆ ನೈತಿಕಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಡಿವೈಎಫ್‌ಐ,  ಮಂಗಳೂರು ನಗರದಲ್ಲಿ ಹದಗೆಟ್ಟಿರುವ ಪೊಲೀಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕ್ರಮ ಚಟುವಟಿಕೆ ನಿಯಂತ್ರಿಸಲಾಗದ ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾಹಿಸಬೇಕು” ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...