Homeಮುಖಪುಟಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

ಅಹಿಂಸೆಗಾಗಿ ಹಿಂಸೆ ಅನಿವಾರ್ಯ: ಆರೆಸ್ಸೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಅಹಿಂಸೆ ತತ್ವವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಹಿಂಸೆ ಅನಿವಾರ್ಯವಾಗುತ್ತದೆ ಎಂದು ಹೇಳಿರುವ ಆರೆಸ್ಸೆಸ್‌ ಹಿರಿಯ ನಾಯಕ ಭಯ್ಯಾಜಿ ಜೋಶಿ, ಅದಾಗ್ಯೂ, ಭಾರತವೂ ಎಲ್ಲರನ್ನು ಶಾಂತಿಯ ಪಥದಲ್ಲಿ ಕೊಂಡೊಯ್ಯಬೇಕೆಂದು ಎಂದು ಹೇಳಿದ್ದಾರೆ. ಈ ಹಿಂದೆಯೂ ಅವರು ಹಲವು ಬಾರಿ ವಿವಾದಾದತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ಗುಜರಾತ್ ವಿಶ್ವವಿದ್ಯಾನಿಲಯದ ಆವರಣದ ಮೈದಾನದಲ್ಲಿ ನಡೆದ ಹಿಂದೂ ಸ್ಪಿರಿಚ್ಯುವಲ್ & ಸರ್ವಿಸ್ ಫೇರ್ ಅಥವಾ ಹಿಂದೂ ಆಧ್ಯಾತ್ಮಿಕ ಸೇವಾ ಮೇಳವನ್ನು ಉದ್ದೇಶಿಸಿ ಮಾತನಾಡುತ್ತಾ ಭಯ್ಯಾಜಿ ಜೋಶಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಹಿಂಸೆಗಾಗಿ ಹಿಂಸೆ ಅನಿವಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಹಿಂದೂಗಳು ಎಂದಿಗೂ ತಮ್ಮ ಧರ್ಮವನ್ನು ರಕ್ಷಿಸಲು ಬದ್ಧರಾಗಿರಬೇಕು. ನಾವು ನಮ್ಮ ಧರ್ಮವನ್ನು ಕಾಪಾಡಬೇಕಾದರೆ ಕೆಲವೊಮ್ಮೆ ಇತರರು ಯಾವುದನ್ನು ‘ಅಧರ್ಮ’ ಎಂದು ಕರೆಯುತ್ತಾರೋ ಅದನ್ನೇ ಮಾಡಬೇಕಾಗುತ್ತದೆ. ನಮ್ಮ ಪೂರ್ವಜರು ಕೂಡಾ ಹಾಗೆಯೇ ಮಾಡಿರುವುದು” ಎಂದು ಅವರು ಹೇಳಿದ್ದಾರೆ.

ಮಹಾಭಾರತವನ್ನು ಉಲ್ಲೇಖಿಸಿದ ಅವರು, “ಪಾಂಡವರು ಅಧರ್ಮವನ್ನು ನಾಶ ಮಾಡಲು ಯುದ್ಧದ ನೀತಿಯನ್ನು ಕೈಗೊಂಡರು. ಹಿಂದೂ ಧರ್ಮ ಅಹಿಂಸೆ ಸಾರುತ್ತದೆ ಎಂಬುದನ್ನು ನಾವು ಅಲ್ಲಗಳೆಯಲಾಗದು. ಆದರೆ ಕೆಲವೊಮ್ಮೆ ಅಹಿಂಸೆಯ ರಕ್ಷಣೆಗಾಗಿ ಹಿಂಸೆಯ ಹಾದಿ ತುಳಿಯಬೇಕಾಗುತ್ತದೆ. ಇಲ್ಲವಾದರೆ ಅಹಿಂಸೆ ತತ್ವವು ಸುರಕ್ಷಿತವಾಗಿರದು. ನಮ್ಮ ಪೂರ್ವಜರು ಈ ಸಂದೇಶವನ್ನು ನಮಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಭಾರತವನ್ನು ಹೊರತುಪಡಿಸಿ ಇತರೆ ದೇಶಗಳ ಜೊತೆಯಲ್ಲೇ ಸಾಗುವಂತಹ ಯಾವುದೇ ದೇಶವಿಲ್ಲ. ವಸುದೈವ ಕುಟುಂಬಂ ಎಂಬುದು ನಮ್ಮ ಆಧ್ಯಾತ್ಮದ ತತ್ವವಾಗಿದೆ. ನಾವು ಇಡೀ ವಿಶ್ವವನ್ನೇ ಒಂದು ಕುಟುಂಬವಾಗಿ ಪರಿಗಣಿಸಿದರೆ ಯಾವುದೇ ಸಂಘರ್ಷ ಇರುವುದಿಲ್ಲ” ಎಂದು ಭಯ್ಯಾಜಿ ಜೋಶಿ ಹೇಳಿದ್ದಾರೆ.

“ನಾವು ಭಾರತ ಬಲಿಷ್ಠವಾಗಬೇಕು ಎನ್ನುತ್ತೇವೆ. ಅಂದರೆ ಬಲಿಷ್ಠ ಭಾರತ ಮತ್ತು ಬಲಿಷ್ಠ ಹಿಂದೂ ಸಮುದಾಯ ಮಾತ್ರ ಎಲ್ಲರಿಗೂ ಉಪಯೋಗಕರ ಎಂಬ ಭರವಸೆಯನ್ನು ಜಗತ್ತಿಗೆ ನೀಡುವುದಾಗಿದೆ. ನಾವು ಬಲಿಷ್ಠರಾದರೆ ದುರ್ಬಲರು ಮತ್ತು ಧಮನಿತರನ್ನು ರಕ್ಷಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ. ಭಯ್ಯಾಜಿ ಜೋಶಿ ಈ ಹಿಂದೆ ಕೂಡಾ ಹಲವು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿಂದೆ, ಹಿಂದೂ ಮತ್ತು ಹಿಂದುತ್ವ ಎರಡೂ ಕೂಡಾ ಒಂದೇ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಇದನ್ನೂಓದಿ:  ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...