Homeಕರ್ನಾಟಕ19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ...

19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ.

- Advertisement -
- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವಜೋಡಿಗಳ ಪ್ರಕರಣ ಸಿನಿಮಿಯ ರೀತಿಯಲ್ಲಿ ಕೊನೆಗೊಂಡಿದೆ. ಕೊನೆಗೂ ಆ ಪ್ರಕರಣದಲ್ಲಿ ಊರ ಹಿರಿಯರು ಎನಿಸಿಕೊಳ್ಳುವ ನೈತಿಕತೆಯ ವಾರಸುದಾರರು ಹುಡುಗ ಹುಡುಗಿಯನ್ನು ಬೇರ್ಪಡಿಸಿ ದುರಂತ ಅಂತ್ಯದ ಷರಾ ಬರೆದಿದ್ದಾರೆ.

ಹುಡುಗ ಗಾಣಿಗ ಸಮುದಾಯದವ. ಹುಡುಗಿ ಮಾದರ ಜಾತಿಗೆ ಸೇರಿದವಳು. ಈ ಯುವಪ್ರೇಮಿಗಳು ಕಳೆದ ಅಕ್ಟೋಬರ್ 24ರಂದು ಕಾನೂನುಬದ್ಧವಾಗಿಯೇ ರಜಿಸ್ಟರ್ ಮದುವೆಯಾಗಿದ್ದರು. ಕೇವಲ ಮದುವೆಯಾಗಿ 19 ದಿನಗಳಲ್ಲೆ ಮುರಿದು ಬಿದ್ದಿದೆ. ಮತ್ತು ಈ ಪ್ರಕರಣ ಗೊತ್ತಿದ್ದರೂ ಏನು ಮಾಡಲಿಕ್ಕಾಗದೇ  ಹಲವಾರು ಜೀವಪರ ಮನಸ್ಸುಗಳು ದಲಿತಪರ ಸಂಘಟನೆಗಳು ಏನೂ ಮಡಲಾಗದೇ ಕೈ ಚೆಲ್ಲಿ ಕುಳಿತಿವೆ.

ನಿಮ್ಮ ಮದುವೆಯನ್ನು ಮಾನ್ಯ ಮಾಡುತ್ತೇವೆ ಬನ್ನಿ ಎಂದು ಊರಿಂದ ತಪ್ಪಿಸಿಕೊಂಡು ದೂರ ಹೋಗಿದ್ದ ಯುವಪ್ರೇಮಿಗಳನ್ನು ಊರಿನ ನೈತಿಕತೆಯ ವಾರಸುದಾರರು ವಾಪಸ್ ಕರೆಸಿಕೊಂಡಿದ್ದರು. ಆದರೆ, ಆದದ್ದೇ ಬೇರೆ. ಹುಡುಗಿಯದ್ದು ಕೀಳುಜಾತಿಯಾದ್ದರಿಂದ ಹುಡುಗಿಯನ್ನು ಮರೆತುಬಿಡಬೇಕೆಂದು ಹುಡುಗನಿಗೆ ವಾರ್ನಿಂಗ್ ಮಾಡಿದ್ದಾರೆ. ಹುಡುಗ ಒಪ್ಪದಿದ್ದುದ್ದಕ್ಕೆ ಅವನನ್ನು ಮೈ ಬಾಯುವ ಹಾಗೆ ಮುಖ ಮೋತಿಯನ್ನದೇ ಬಡಿದು ಹೆದರಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಕೆಲವು ದಲಿತಪರ ಹೋರಾಟಗಾರರಾದ ನಾಗಮ್ಮ, ರಮೇಶ ಕೋಳೂರು ಮತ್ತಿತರರು ಧಾವಿಸಿ ಬಂದು ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ ಎರಡು ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣಕ್ಕೆ ಸುಖಾಂತ್ಯ ಹಾಡಲು ನೋಡಿದ್ದಾರೆ.

ಆದರೆ, ಅಷ್ಟೊತ್ತಿಗೆಗಾಗಲೇ ನೈತಿಕ ವಾರಸುದಾರರು ಹೆದರಿಸುವಿಕೆ ಮತ್ತು ಪುಸಲಾಯಿಸುವಿಕೆ ಎಷ್ಟರಮಟ್ಟಿಗೆ ಇತ್ತೆಂದರೆ ಸಂಜೆ ಅಷ್ಟೊತ್ತಿಗೆ ನಾನು ಆ ಹುಡುಗನೊಂದಿಗೆ ಬಾಳ್ವೆ ಮಾಡಲು ಸುತಾರಂ ಇಷ್ಟವಿಲ್ಲ. ನನಗೆ ಡೈವೋರ್ಸ್ ಕೊಡಿಸಿ  ಎಂದು ಪೊಲೀಸರ ಮುಂದೆಯೇ ಹುಡುಗಿ ಉಲ್ಟಾ ಹೊಡೆದಿದ್ದಾಳೆ. “ನೀನು ಅವನನ್ನು ಬಿಟ್ಟರೆ ನಿನ್ನನ್ನು ಇವನೊಂದಿಗೆ ಮದುವೆಯ ಮಾಡುತ್ತೇವೆ ಬಿಡು” ಎಂದು ನೈತಿಕತೆಯ ವಾರಸುದಾರರು ಮೊದಲೇ ರೆಡಿ ಇಟ್ಟುಕೊಂಡಿದ್ದ ಸಜಾತಿಯ ವರನನ್ನು ಹುಡುಗಿ ಮುಂದೆ ನಿಲ್ಲಿಸಿದ್ದಾರೆ.  “ಇವನೊಂದಿಗೆ ಮದವೆ ಮಾಡುವ ಜವಾಬ್ಧಾರಿ ನಮ್ಮದು” ಎಂದು ಹುಡುಗಿಗೆ ಧೈರ್ಯ ತುಂಬಿದ್ದಾರೆ. ಕೋಲೆ ಬಸವನಂತ ಆ ಹುಡುಗ ಕೂಡ ತಲೆಯಾಡಿಸಿದ್ದಾನೆ.

ಹೀಗೆ ಸಂಜೆಯ ಹೊತ್ತಿಗೆ ಪೊಲೀಸ್ ಠಾಣೆಯಲ್ಲೆ ಸಿನಿಮಿಯ ರೀತಿಯಲ್ಲಿ ಉಲ್ಟಾ ಹೊಡೆದ ಪ್ರಕರಣ ನೋಡಿದ ಪೊಲೀಸ್ ಇನ್ಸಪೆಕ್ಟರ್ ಸಹ “ಆ ಹುಡುಗ ಹುಡುಗಿಯ ಬದುಕನ್ನು ಬಲಿಪಶು ತೊಗೊತ್ತಿದ್ದಿರಲ್ಲ ನೀವು, ನಾಚಿಕೆಯಾಗಲ್ವಾ, ಈ ಹೊಸ ಹುಡುಗ ಈ ಹುಡುಗಿಯನ್ನು ಮುಂದೆ ಚನ್ನಾಗಿ ಬಾಳಿಸದಿದ್ದರೆ, ಅನುಮಾನಪಡತೊಡಗಿದರೆ ಏನ್ ಮಾಡ್ತಿರಿ ಎಂದು ಎರಡೂ ಕಡೆಯವರನ್ನು ಹತಾಶೆಯಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತೂ ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ. ನನ್ನ ಹುಡುಗಿಯನ್ನು ನನಗೆ ಕೊಡಿಸಿದರೆ ಸಾಕು ಎಂದು ಆತ ಅಳತೊಡಗಿದ್ದಾನೆ.

ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಅಷ್ಟೆ ಅಂತರ್ಜಾತಿ ವಿವಾಹವಾಗಿದ್ದ ಯುವ ದಂಪತಿಗಳ ಜೋಡಿ ಕೊಲೆ ನಡೆದಿತ್ತು. ಅದು ನಡೆದ ಒಂದೇ ವಾರದಲ್ಲಿ ಈಗ ಈ ಪ್ರಕರಣ ನಡೆದಿದೆ. ಹಾಗೆ ನೋಡಿದರೆ ಜಾತಿ ಗೋಡೆಯನ್ನು ಕಿತ್ತೆಸೆದು, ಧರ್ಮದ ಬೇಲಿಗೆ ಕಿವಿಗೊಡದೇ ಹಲವಾರು ಯುವ ಜೋಡಿಗಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ, ಆ ಜೋಡಿಗಳು ನೆಮ್ಮದಿಯಿಂದ ಬಾಳುವೆ ಮಾಡುವ ವಾತಾವರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡು ಬರುವುದಿಲ್ಲ. ಈ ಭಾಗದಲ್ಲಿ ದಲಿತ ಸಂಘರ್ಷ ಸಮಿತಿಗಳು ಸಹ ಅಷ್ಟೊಂದು ಸಕ್ರಿಯವಾಗಿಲ್ಲ.

ಮಾಡದ ತಪ್ಪಿಗೆ ಆತ ತನ್ನ ಹುಡುಗಿಯನ್ನು ಇನ್ನೊಂದು ಹುಡುಗನೊಂದಿಗ ಮದುವೆ ಮಾಡಿಸಲು ಖರ್ಚಿನ ಬಾಬ್ತು ಎಂದು ಮೂರು ಲಕ್ಷ ರೂಪಾಯಿ ತಪ್ಪುದಂಡ ಕೊಡಬೇಕು. ಈ ಹಣದಲ್ಲಿ ಒಂದಿಷ್ಟು ಪಾಲು ಎರಡು ಕಡೆಯ ನೈತಿಕ ವಾರಸುದಾರರಿಗೂ ಹಂಚಿಕೆಯಾಗುತ್ತದೆ ಎಂಬ ಆರೋಪವೂ ಸ್ಥಳಿಯರಿಂದ ಕೇಳಿ ಬಂದಿದೆ.

ಈ ಎರಡು ಪ್ರಕರಣಗಳ ಹಿಂದೆ ನಾವು ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ, ಕರೆತಂದು ಮದುವೆ ಮಾಡಿಸುವ, ಇಂಥ ಯುವಜೋಡಿಗಳ ಮೇಲೆ ಹಲ್ಲೆಗಳು ನಡೆದಾಗ ಬೀದಿಗಿಳಿದು ಪ್ರತಿಭಟನೆ ಮಾಡುವ ಸಂಘಟನೆಗಳ, ಜೀವಪರ ಮನಸ್ಸುಗಳ ಕೊರತೆ ಇದೆ. ಹೀಗಾಗಿ ಇಲ್ಲಿನ ಅಂತರ್ಜಾತಿ ವಿವಾಹಗಳು ದುರಂತ ಅಂತ್ಯ ಕಾಣುತ್ತವೆ ಎಂದು ಗದಗದ ದಲಿತಪರ ಹೋರಾಟಗಾರ ರಮೇಶ ಕೋಳೂರು ನೋವಿನಿಂದ ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತೀಯತೆ ಎನ್ನುವುದು ಮೇಲ್ಜಾತಿಯ ಜನರಲ್ಲಿ ಮಾತ್ರವಲ್ಲ, ಬಹುತೇಕ ಜಾತಿಗಳಲ್ಲಿ ತುಂಬಿ ತುಳುಕುತ್ತಿದೆ. ಇದೇ ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...