Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ...

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿರುವುದು ಭಾರತೀಯರು ಸೇರಿದಂತೆ ಲಕ್ಷಾಂತರ ವಲಸಿಗರ ಆತಂಕಕ್ಕೆ ಕಾರಣವಾಗಿದೆ.

ವಿಶೇಷವಾಗಿ ಹೆಚ್‌-1ಬಿ ಅಧಿಕೃತ ವಲಸಿಗರ ವೀಸಾ ಹೊಂದಿರುವ ಭಾರತದ ಲಕ್ಷಾಂತರ ದಂಪತಿಗಳು ಚಿಂತೆಗೆ ಈಡಾಗಿದ್ದಾರೆ. ವಲಸಿಗ ಗರ್ಭಿಣಿಯರು ತಮಗೆ ಹುಟ್ಟುವ ಮಕ್ಕಳಿಗೆ ಜನ್ಮದತ್ತ ಅಮೆರಿಕದ ಪೌರತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಟ್ರಂಪ್ ಆದೇಶ ಅವರ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದೆ.

ವರದಿಗಳ ಪ್ರಕಾರ, ಟ್ರಂಪ್ ಆದೇಶಕ್ಕೆ ಅಮೆರಿಕದ ಫೆಡರಲ್ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಅದು ಒಂದು ವೇಳೆ ತೆರವಾದರೆ, ಫೆಬ್ರವರಿ 20 ರಿಂದ ಟ್ರಂಪ್ ಕಾರ್ಯಕಾರಿ ಆದೇಶಗಳು ಜಾರಿಗೆ ಬರಲಿವೆ. ಅದಕ್ಕೂ ಮುನ್ನ ಸಿಸೇರಿಯನ್ (ಸಿ-ಸೆಕ್ಷನ್ಸ್) ಮೂಲಕ ಹೆರಿಗೆ ಮಾಡಿಸಿಕೊಂಡು ಮಕ್ಕಳಿಗೆ ಪೌರತ್ವ ಪಡೆಯಲು ಮಹಿಳೆಯರು ಮುಂದಾಗಿದ್ದಾರೆ.

ವಿಶೇಷವಾಗಿ ಭಾರತೀಯ ವಲಸಿಗ ಗರ್ಭಿಣಿಯರು ಸಿಸೇರಿಯನ್ ಹೆರಿಗೆ ಸಂಬಂಧ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಕ್ಲೀನಿಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಒಬ್ಬರು ಭಾರತೀಯ ಮೂಲದ ಸ್ತ್ರೀರೋಗತಜ್ಞ ಸಿಸೇರಿಯನ್ ಹೆರಿಗೆ ಸಂಬಂಧ 20 ಕರೆಗಳನ್ನು ಸ್ವೀಕರಿಸಿರುವುದಾಗಿ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮದತ್ತ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಅಮೆರಿಕದಲ್ಲಿ ತಾತ್ಕಾಲಿಕ ಹೆಚ್‌-1ಬಿ ಮತ್ತು ಎಲ್‌1 ವೀಸಾಗಳ ಮೇಲೆ ಕೆಲಸ ಮಾಡುತ್ತಿರುವ ಲಕ್ಷಾಂತರ ಭಾರತೀಯರಿದ್ದಾರೆ. ಈ ಪೈಕಿ ಹೆಚ್ಚಿನವರು ಅಮೆರಿಕದಲ್ಲಿ ಶಾಶ್ವತ ವಾಸಕ್ಕೆ ಅವಕಾಶ ಕಲ್ಪಿಸುವ ಗ್ರೀನ್ ಕಾರ್ಡ್‌ ಪಡೆಯಲು ಕ್ಯೂನಲ್ಲಿದ್ದಾರೆ. ಟ್ರಂಪ್ ಆದೇಶದಿಂದ ಇನ್ನು ಮುಂದೆ ಪೋಷಕರಲ್ಲಿ ಯಾರದರು ಒಬ್ಬರು ಅಮೆರಿಕದ ನಾಗರಿಕ ಅಥವಾ ಗ್ರೀನ್ ಕಾರ್ಡ್ ಹೊಂದಿರುವವರು ಅಲ್ಲದೇ ಇದ್ದರೆ, ಅಂತಹ ಮಕ್ಕಳಿಗೆ ಜನ್ಮದತ್ತ ಪೌರತ್ವ ಸಿಗುವುದಿಲ್ಲ.

ನ್ಯೂಜೆರ್ಸಿಯಲ್ಲಿ ಹೆರಿಗೆ ಆಸ್ಪತ್ರೆ ಹೊಂದಿರುವ ಭಾರತದ ವೈದ್ಯ ಡಾ. ಎಸ್. ಡಿ. ರಾಮಾ ಅವರಿಗೆ ಎಂಟು ಮತ್ತು ಒಂಭತ್ತು ತಿಂಗಳು ತುಂಬಿರುವ ಹಲವು ಗರ್ಭಿಣಿಯರಿಂದ ಸಿಸೇರಿಯನ್ ಹೆರಿಗೆ ಮಾಡಿಸಲು ಕೋರಿಕೆ ಬಂದಿದೆ. ಕೆಲ ಗರ್ಭಿಣಿಯರು ತಿಂಗಳು ಭರ್ತಿಯಾಗದಿದ್ದರೂ ಹೆರಿಗೆ ಮಾಡಿಸಲು ಕೋರುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಏಳು ತಿಂಗಳ ಗರ್ಭಿಣಿಯೊಬ್ಬರು ತನ್ನ ಪತಿಯೊಂದಿಗೆ ಅವಧಿಪೂರ್ವ ಹೆರಿಗೆಗೆ ನೋಂದಣಿ ಮಾಡಿಕೊಳ್ಳಲು ಬಂದಿದ್ದರು. ಮಾರ್ಚ್‌ವರೆಗೆ ಅವಳಿಗೆ ಹೆರಿಗೆ ಆಗುವುದಿಲ್ಲ” ಎಂದು ಡಾ. ರಮಾ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಟೆಕ್ಸಾಸ್‌ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಎಸ್.ಜಿ ಮುಕ್ಕಳ ಅವರು ಅವಧಿಪೂರ್ವ ಹೆರಿಗೆಯ ಅಪಾಯಗಳ ಕುರಿತು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಸುಮಾರು 20 ಜೋಡಿಗಳೊಂದಿಗೆ ಮಾತನಾಡಿದ್ದೇನೆ ಎಂದು ಅವರು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ.

ಸಿಸೇರಿಯನ್ ಹೆರಿಗೆ ಸಾಧ್ಯವಾದರೂ, ಅವಧಿಪೂರ್ಣ ಅದನ್ನು ಮಾಡಿಸದಂತೆ ನಾನು ದಂಪತಿಗಳಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಪೌರತ್ವ ಕಳೆದುಕೊಳ್ಳುವ ದಾವಂತದಲ್ಲಿ ಅವಧಿಪೂರ್ಣ ಹೆರಿಗೆ ಮಾಡಿಸುವುದರಿಂದ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ. ಒಂದು ಮಗುವನ್ನು ಹೊರ ತೆಗೆದರೂ, ಅದು ಶ್ವಾಸಕೋಶ, ಕಡಿಮೆ ತೂಕ, ನರದ ಸಮಸ್ಯೆಗಳನ್ನು ಎದುರಿಸಬಹುದು ಎಂದು ಡಾ. ಮುಕ್ಕಳ ಆತಂಕ ವ್ಯಕ್ತಪಡಿಸಿದ್ದಾರೆ.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...