HomeUncategorizedಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗೋಡ್ಸೆ ಎಂಬ ಹಂತಕ ಗುಂಡಿಕ್ಕಿ ಹತ್ಯೆಗೈದದ್ದು ಇಡೀ ಜಗತ್ತೇ ಕಂಡ ಸತ್ಯ. ಆದರೆ ಅದನ್ನು ಒಡಿಶಾದಲ್ಲಿ ತಿರುಚಲಾಗಿದೆ. ಎರಡು ಪುಟಗಳ ಕಿರು ಪುಸ್ತಕವನ್ನು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿ, ವಿತರಿಸಿದೆ. ರಾಜ್ಯದ ಶಾಲೆಗಳಲ್ಲಿ ಗಾಂಧೀಜಿ ಹತ್ಯೆಯ ಸುತ್ತ ವಿವಾದ ಹುಟ್ಟುವಂತೆ ಮಾಡಿದೆ.

ಸಮೂಹ ಶಿಕ್ಷಣ ಇಲಾಖೆಯಿಂದ ಪ್ರಕಟಗೊಂಡಿರುವ ಎರಡು ಪುಟಗಳ ಕಿರು ಪುಸ್ತಕದಲ್ಲಿ ಮಹಾತ್ಮಾ ಗಾಂಧೀಜಿ ಅವರು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿವಾದಾತ್ಮಕ ವಿಷಯವನ್ನು ಬರೆಯಲಾಗಿದೆ. ಜನವರಿ 30, 1948 ರಂದು ನಡೆದ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟರು ಎಂದು ತಿರುಚಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯನ್ನು ಒಡಿಶಾ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ. ಇಂತಹ ವಿವಾದಾತ್ಮಕ ಪುಸ್ತಕವನ್ನು ಬರೆದವರು ಯಾರು, ಪ್ರಕಟಿಸಿ, ವಿತರಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಒಡಿಶಾ ಶಿಕ್ಷಣ ಮಂತ್ರಿ ಸಮೀರ್‌ ರಂಜನ್‌ ದಾಸ್‌ ಮಾತನಾಡಿ, ’ನಮ್ಮ ಬಾಪೂಜಿ, ಒಂದು ನೋಟ’ ಎಂಬ ಶೀರ್ಷಿಕೆಯಿರುವ ಎರಡು ಪುಟಗಳ ವಿವಾದಾತ್ಮಕ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದೆಲ್ಲಾ ಹೇಗೆ ನಡೆಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಯಾರೇ ಕೃತ್ಯವೆಸಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಿರುಪುಸ್ತಕವನ್ನು ಹಿಂತೆಗೆದುಕೊಳ್ಳಲಾಗುವುದು. ಪುಸ್ತಕದಲ್ಲಿ ಗಾಂಧೀಜಿ ಸಾವು ಆಕಸ್ಮಿಕ ಅಪಘಾತ ಎಂದು ಉಲ್ಲೇಖಿಸುವ ಬದಲು ಅವರನ್ನು ಹೇಗೆ ಹತ್ಯೆಗೈದರು ಎಂಬ ಬಗ್ಗೆ ಸ್ಪಷ್ಟವಾಗಿ ಬರೆಯಬೇಕಾಗಿತ್ತು ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಕಿರು ಪುಸ್ತಕದಲ್ಲಿ ವಿವಾದಾತ್ಮಕವಾಗಿ ನಿರೂಪಿಸಿರುವ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣವೇ ಸರ್ಕಾರ ಪುಸ್ತಕವನ್ನು ಹಿಂತೆಗೆದುಕೊಳ್ಳಬೇಕು ಎಂದು ಪ್ರಫುಲ್ಲಾ ಸಮಂತ್ರಾ ಒತ್ತಾಯಿಸಿದ್ದರು. ಪುಸ್ತಕದಲ್ಲಿ ತಪ್ಪುಗಳೇ ಹೆಚ್ಚಿವೆ. ಗಾಂಧೀಜಿಯವರು ಯಾವುದೋ ಅಪಘಾತದಿಂದ ನಿಧನರಾದರು ಎಂದು ತಿರುಚಲಾಗಿದೆ. ನಾಥುರಾಮ್ ಗೋಡ್ಸೆ ಅವರಂತಹ ಧರ್ಮಾಂಧರಿಂದ ಕೊಲ್ಲಲ್ಪಟ್ಟಿಲ್ಲ ಎಂದು ಬರೆಯುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಗಾಂಧೀಜಿ ಅವರ 150ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ನಾವು, ನಮ್ಮ ರಾಷ್ಟ್ರಪಿತನಿಗೆ ಅವಮಾನ ಮಾಡುತ್ತಿದ್ದೇವೆ. ಇದು ನಾವು ತೋರಿದ ಅಗೌರವ ಎಂದು ಪ್ರಫುಲ್ಲಾ ಖಂಡಿಸಿದರು.

ಗಾಂಧಿ ಸ್ಮಾರಕ ಗ್ರಂಥಾಲಯದ ಕಾರ್ಯದರ್ಶಿ ಮನೋರಂಜನ್ ಸಾಹು ಮಾತನಾಡಿ, ಕಿರುಪುಸ್ತಕ ಸತ್ಯವನ್ನು ಮರೆಮಾಚಲು ಯತ್ನಿಸಿ, ವಿಫಲವಾಗಿದೆ. ಗಾಂಧೀಜಿ ಅವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ ಎಂದರೆ ಏನರ್ಥ..? ಅವರು ರಸ್ತೆಯಲ್ಲಿ ಹೋಗುವಾಗ ಮುಗ್ಗರಿಸಿ ಬಿದ್ದು ಮೃತಪಟ್ಟರೇ..? ಇಲ್ಲ. ಅವರನ್ನು ನಾಥುರಾಮ್‌ ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದರು.

ಸಮಾಜವಾದಿ ಪತ್ರಿಕೆಯ ಸಂಪಾದಕ ಸುಧೀರ್‌ ಪಟ್ನಾಯಕ್‌ ಮಾತನಾಡಿ, ಒಡಿಶಾ ಶಿಕ್ಷಣದಲ್ಲಿ ಉಂಟಾಗುತ್ತಿರುವ ಕೇಸರೀಕರಣ ಮತ್ತು ಸಾಂಸ್ಥಿಕೀಕರಣ ಹೇಗೆ ನಡೆಯುತ್ತಿದೆ ಎಂಬುದು ಪುಸ್ತಕದಿಂದ ಗೊತ್ತಾಗಿದೆ. ಇದೊಂದು ದುರುದ್ದೇಶಪೂರಿತ ಯತ್ನವಾಗಿದೆ. ಒಡಿಶಾ ಸಿಎಂ, ಮಹಾತ್ಮಾ ಗಾಂಧೀಜಿಯವರ ಆದರ್ಶಗಳ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರ ಇಲಾಖೆಯಲ್ಲೇ ಇಂಥದ್ದೊಂದು ಅವಮಾನ ಮಾಡುವ ಘಟನೆ ನಡೆದಿದೆ ಎಂದು ಟೀಕಿಸಿದರು.

ಇನ್ನು ಕಳೆದ ತಿಂಗಳಷ್ಟೇ ಗುಜರಾತ್‌ನಲ್ಲಿ ಇದೇ ರೀತಿಯ ವಿವಾದ ಭುಗಿಲೆದ್ದಿತ್ತು. ಒಂಭತ್ತನೇ ತರಗತಿಯ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ‘ಮಹಾತ್ಮ ಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’ ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳಿಗೆ ಕೇಳಲಾಗಿತ್ತು. ಒಟ್ಟಿನಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನಿಗೆ ದೇಶವಿಂದು ವಿವಾದದ ಕೊಡುಗೆ ನೀಡುತ್ತಿರುವುದು ಶೋಚನೀಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...