Homeಮುಖಪುಟಯಮುನಾ ನದಿಯ ನೀರು ಕುಡಿಯಲು ನಿಮಗೆ ಧೈರ್ಯವಿದೆಯೆ - ಆದಿತ್ಯನಾಥ್‌ಗೆ ಅಖಿಲೇಶ್ ಸವಾಲು

ಯಮುನಾ ನದಿಯ ನೀರು ಕುಡಿಯಲು ನಿಮಗೆ ಧೈರ್ಯವಿದೆಯೆ – ಆದಿತ್ಯನಾಥ್‌ಗೆ ಅಖಿಲೇಶ್ ಸವಾಲು

- Advertisement -
- Advertisement -

ದೆಹಲಿಯಲ್ಲಿ ಮುಂಬರುವ ಚುನಾವಣೆ ಪ್ರಚಾರದ ಸಂದರ್ಭ ಯಮುನಾ ನದಿಯ ಸ್ವಚ್ಛತೆಯ ಸ್ಥಿತಿಗಾಗಿ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಟೀಕಿಸಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶುಕ್ರವಾರ ಟೀಕಿಸಿದ್ದು, ತಮ್ಮದೇ ರಾಜ್ಯದ ಮಥುರಾದಲ್ಲಿನ ಯಮುನಾ ನದಿಯಿಂದ ನೀರು ಕುಡಿಯಬಹುದೇ ಎಂದು ಕೇಳಿದ್ದಾರೆ.

ಗುರುವಾರ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾಗ, ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಯಮುನಾ ನದಿಯನ್ನು “ಕೊಳಕು ಚರಂಡಿ”ಯನ್ನಾಗಿ ಮಾಡುವ ಮೂಲಕ ಪಾಪ ಮಾಡಿದ್ದಾರೆ ಎಂದು ಆದಿತ್ಯನಾಥ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

 

ಬುಧವಾರ ಪ್ರಯಾಗ್‌ರಾಜ್‌ನಲ್ಲಿ ನಡೆದ ಸಂಗಮದಲ್ಲಿ ತಮ್ಮ ಸಚಿವ ಸಂಪುಟವದ ಜೊತೆಗೆ ಪುಣ್ಯಸ್ಥಾನ ಮಾಡಿದ್ದ ಯುಪಿ ಸಿಎಂ ಆದಿತ್ಯನಾಥ್, ಕೇಜ್ರಿವಾಲ್ ಮತ್ತು ಅವರ ಸಚಿವರು ಯಮುನಾ ನದಿಯಲ್ಲಿ ಸ್ನಾನ ಮಾಡಲಿದ್ದಾರೆಯೆ ಎಂದು ಕೇಳಿದ್ದು, “ಅವರಿಗೆ ನೈತಿಕ ಧೈರ್ಯವಿದ್ದರೆ ಅವರು ಉತ್ತರಿಸಬೇಕು” ಎಂದು ಹೇಳಿದ್ದರು.

ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ಎಕ್ಸ್‌ನಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸದರೆ, “ಇತರರಿಗೆ ಸವಾಲು ಹಾಕುವ ಮೊದಲು, ತಮ್ಮದೇ ರಾಜ್ಯದ ಮಥುರಾ ಮೂಲಕ ಹರಿಯುವ ಯಮುನಾ ನದಿಯಿಂದ ನೀರು ಕುಡಿಯಲು ಧೈರ್ಯ ಮಾಡಬೇಕು” ಎಂದು ಸವಾಲು ಹಾಕಿದ್ದಾರೆ. ಯಮುನಾ ನದಿಯ

ದೆಹಲಿಯ ಕಿರಾರಿಯಲ್ಲಿ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ, ಆದಿತ್ಯನಾಥ್ ಅವರು ಮಥುರಾ-ವೃಂದಾವನದಲ್ಲಿರುವ ಭಕ್ತರು ಮತ್ತು ಸಂತರು ಎಎಪಿಯ “ಪಾಪಗಳಿಗೆ” ಬಲಿಯಾಗಿದ್ದಾರೆ ಎಂದು ಹೇಳಿದ್ದು, ಯಮುನಾ ನೀರು ಕೊಳಕು ಚರಂಡಿಯಾಗಿ ರಾಜ್ಯವನ್ನು ತಲುಪುತ್ತದೆ ಎಂದು ತಿಳೀಸಿದ್ದರು.

ನಮಾಮಿ ಗಂಗಾ ಯೋಜನೆಯಡಿ ಕೇಂದ್ರ ಸರ್ಕಾರದೊಂದಿಗೆ ಯಮುನಾದ ಸ್ವಚ್ಛತೆಗೆ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ಎಂದಿಗೂ ಸಹಕರಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಮತ್ತು ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವನ್ನು ಎದುರಿಸಲು ರಚಿಸಲಾದ ಇಂಡಿಯಾ ಮೈತ್ರಿಯಲ್ಲಿ ಜೊತೆಗೂಡಿದ್ದವು.

ಇದನ್ನೂಓದಿ: ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...