Homeಮುಖಪುಟಆಂಡ್ರಾಯ್ಡ್, ಐಫೋನ್‌ಗಳಲ್ಲಿ ದರ ವ್ಯತ್ಯಾಸ ಆರೋಪ : ಓಲಾ, ಊಬರ್‌ಗೆ ನೋಟಿಸ್

ಆಂಡ್ರಾಯ್ಡ್, ಐಫೋನ್‌ಗಳಲ್ಲಿ ದರ ವ್ಯತ್ಯಾಸ ಆರೋಪ : ಓಲಾ, ಊಬರ್‌ಗೆ ನೋಟಿಸ್

ಸ್ವಿಗ್ಗಿ, ಝೊಮ್ಯಾಟೋ ವಿರುದ್ದ ಸಿಸಿಐ ಮೊರೆ

- Advertisement -
- Advertisement -

ದರ ವ್ಯತ್ಯಾಸ ಆರೋಪಕ್ಕೆ ಸಂಬಂಧಿಸಿದಂತೆ ಆ್ಯಪ್‌ ಆಧಾರಿತ ಕ್ಯಾಬ್ ಸೇವೆ ಒದಗಿಸುತ್ತಿರುವ ಓಲಾ ಮತ್ತು ಊಬರ್ ಕಂಪನಿಗಳಿಗೆ ಕೇಂದ್ರ ಗ್ರಾಹಕರ ಹಿತರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೋಟಿಸ್ ನೀಡಿದೆ.

ಆ್ಯಪ್‌ ಬಳಕೆದಾರರು ಐಫೋನ್‌ನಲ್ಲಿ ಬುಕ್ಕಿಂಗ್ ಮಾಡುತ್ತಿದ್ದಾರೆಯೇ ಅಥವಾ ಆಂಡ್ರಾಯ್ಡ್ ಫೋನ್‌ನಲ್ಲಿ ಬುಕ್ಕಿಂಗ್ ಮಾಡುತ್ತಿದ್ದಾರೆಯೇ ಎಂಬ ಆಧಾರದ ಮೇಲೆ ಕಂಪನಿಗಳು ಒಂದೇ ಸ್ಥಳಕ್ಕೆ ವಿಭಿನ್ನ ದರ ನಿಗದಿಪಡಿಸುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

ದರ ವ್ಯತ್ಯಾಸದ ಮೂಲಕ ಕಂಪನಿಗಳು ಗ್ರಾಹಕರ ಹಕ್ಕುಗಳಿಗೆ ವಂಚಿಸುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಆರೋಪಗಳನ್ನು ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಪಿಎ ವಿಚಾರಣೆ ಕೈಗೆತ್ತಿಕೊಂಡಿದ್ದು, ಎರಡು ಕಂಪನಿಗಳಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ದರ ವ್ಯತ್ಯಾಸದ ಆರೋಪಗಳ ಸಂಬಂಧ ಗ್ರಾಹಕ ವ್ಯವಹಾರಗಳ ಇಲಾಖೆಯು ಸಿಸಿಪಿಎ ಮೂಲಕ ಓಲಾ ಮತ್ತು ಊಬರ್ ಕಂಪನಿಗಳಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ತಿಳಿಸಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ವಿರುದ್ದ ಸಿಸಿಐ ಮೊರೆ

ಸ್ವಿಗ್ಗಿ ಮತ್ತು ಝೊಮ್ಯಾಟೋ ಕಂಪನಿಯು ಖಾಸಗಿ ಲೇಬಲ್ ಬಳಕೆ ಮೂಲಕ ನ್ಯಾಯಸಮ್ಮತವಲ್ಲದ ವ್ಯಾಪಾರದಲ್ಲಿ ತೊಡಗಿವೆ ಎಂದು ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಸಂಘ (ಎನ್‌ಆರ್‌ಎಐ) ಆರೋಪಿಸಿದೆ. ಈ ಕುರಿತು ಭಾರತೀಯ ಸ್ಪರ್ಧಾತ್ಕ ಆಯೋಗಕ್ಕೆ(ಸಿಸಿಐ) ದೂರು ಸಲ್ಲಿಸಲು ಮುಂದಾಗಿದೆ.

ಆನ್‌ಲೈನ್‌ನಲ್ಲಿ ಆಹಾರ ವಿತರಿಸುವ ಈ ಕಂಪನಿಗಳು ತಮ್ಮ ಪಾಲುದಾರ ರೆಸ್ಟೋರೆಂಟ್‌ಗಳಿಂದ ದತ್ತಾಂಶ ಸಂಗ್ರಹಿಸುತ್ತವೆ. ನಮ್ಮ ಗ್ರಾಹಕರು ಯಾರೆಂದು ಅವುಗಳಿಗೆ ಸ್ಪಷ್ಟವಾದ ಅರಿವಿದೆ. ಆದರೆ, ಈ ಮಾಹಿತಿ ಹಂಚಿಕೊಳ್ಳಲು ನಿರಾಕರಿಸುತ್ತಿವೆ. ಇದೇ ರೀತಿಯ ಉತ್ಪನ್ನಗಳನ್ನು ತಯಾರಿಸಿ ಖಾಸಗಿ ಲೇಬಲ್ ಅಂಟಿಸುವ ಮೂಲಕ ಮಾರಾಟ ಮಾಡುವ ಸಾಧ್ಯತೆಯಿದೆ. ಇದರಿಂದ ರೆಸ್ಟೋರೆಂಟ್ ವಲಯವು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಸಂಘದ ಅಧ್ಯಕ್ಷ ಸಾಗರ್ ದರಿಯಾನಿ ಆತಂಕ ವ್ಯಕ್ತಪಡಿಸಿದ್ದಾರೆ.

ಝೆಪ್ಟೋ ವಿರುದ್ದ ದರ ವ್ಯತ್ಯಾಸ ಆರೋಪ

ಓಲಾ, ಊಬರ್‌ಗಳಂತೆ ಆಹಾರ ಸಾಮಾಗ್ರಿಗಳ ವಿತರಣ ಆ್ಯಪ್‌ ಝೆಪ್ಟೋ ಕೂಡ ಒಂದೇ ವಸ್ತುವಿಗೆ ಐಫೋನ್, ಆಂಡ್ರಾಯ್ಡ್ ಗ್ರಾಹಕರಿಗೆ ಬೇರೆ ಬೇರೆ ದರಗಳನ್ನು ನಿಗದಿ ಮಾಡಿ ಮೋಸ ಮಾಡುತ್ತಿವೆ ಎಂದು ಬೆಂಗಳೂರು ಮೂಲದ ಮಹಿಳೆಯೊಬ್ಬರು ಇತ್ತೀಚೇಗೆ ವಿಡಿಯೋ ಮೂಲಕ ಆರೋಪಿಸಿದ್ದರು.

ಬಿರಿಯಾನಿ ವಿವಾದ: ಪೊಲೀಸರೊಂದಿಗೆ ನವಾಸ್ ಕಾನಿ ಮಾತನಾಡುತ್ತಿರುವ ವಿಡಿಯೋ ಪೋಸ್ಟ್‌ ಮಾಡಿದ ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...