Homeಮುಖಪುಟಅಮೆರಿಕದಿಂದ ಅಕ್ರಮ ವಲಸಿಗ ಭಾರತೀಯರನ್ನು ಹಿಂಪಡೆಯಲು ಸಿದ್ದ: ಕೇಂದ್ರ ಪುನರುಚ್ಛಾರ

ಅಮೆರಿಕದಿಂದ ಅಕ್ರಮ ವಲಸಿಗ ಭಾರತೀಯರನ್ನು ಹಿಂಪಡೆಯಲು ಸಿದ್ದ: ಕೇಂದ್ರ ಪುನರುಚ್ಛಾರ

- Advertisement -
- Advertisement -

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ‘ಹಿಂತಿರುಗಿ ಪಡೆಯಲು’ ಸಿದ್ಧ ಎಂದು ಕೇಂದ್ರ ವಿದೇಶಾಂಗ ಸಚಿವಾಲಯವು ಶುಕ್ರವಾರ ಹೇಳಿದೆ. ಭಾರತೀಯರ ಅಕ್ರಮ ವಲಸೆಗೆ ವಿರೋಧವನ್ನು ಪುನರುಚ್ಛರಿಸಿದ ಕೇಂದ್ರವು, ಸರಿಯಾದ ದಾಖಲೆಗಳಿಲ್ಲದೆ ವಿದೇಶಗಳಲ್ಲಿ ವಾಸಿಸುವ ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸುವ ಬದ್ಧತೆಯನ್ನು ದೃಢಪಡಿಸಿದೆ. ಅಕ್ರಮ ವಲಸಿಗ

“ನಾವು ಇದನ್ನು ಮೊದಲೇ ಸ್ಪಷ್ಟಪಡಿಸಿದ್ದೇವೆ. ನಾವು ಅಕ್ರಮ ವಲಸೆಯನ್ನು ವಿರೋಧಿಸುತ್ತೇವೆ, ವಿಶೇಷವಾಗಿ ಇದು ಹಲವಾರು ರೀತಿಯ ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದೆ.” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಹೊಸದಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಆಡಳಿತದೊಂದಿಗೆ ಕೆಲಸ ಮಾಡುತ್ತಿರುವ ಭಾರತವು ಸುಮಾರು 18,000 ದಾಖಲೆರಹಿತ ಅಥವಾ ವೀಸಾ ಅವಧಿ ಮೀರಿದ ಭಾರತೀಯ ಪ್ರಜೆಗಳನ್ನು ಅಮೆರಿಕದಲ್ಲಿ ಗಡೀಪಾರು ಮಾಡುವ ವರದಿಗಳಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರಜೆಗಳು, ಅಮೆರಿಕದಲ್ಲಿ ಅಥವಾ ಬೇರೆಡೆ ಇರಲಿ, ಅವರು ಸರಿಯಾದ ದಾಖಲೆಗಳಿಲ್ಲದೆ ದೇಶದಲ್ಲಿ ಅವಧಿ ಮೀರಿದ ಅಥವಾ ವಾಸಿಸುತ್ತಿದ್ದರೆ, ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅಗತ್ಯವಾದ ದಾಖಲೆಗಳನ್ನು ನಮ್ಮೊಂದಿಗೆ ಹಂಚಿಕೊಂಡರೆ, ನಾವು ಅವರನ್ನು ಮರಳಿ ಕರೆತರುತ್ತೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ. ಅಕ್ರಮ ವಲಸಿಗ

ದೇಶದಲ್ಲಿ ಅಕ್ರಮವಾಗಿ ವಾಸಿಸುವ ಭಾರತೀಯ ನಾಗರಿಕರನ್ನು ಗುರುತಿಸಲು ಮತ್ತು ಸ್ವದೇಶಕ್ಕೆ ಕಳುಹಿಸಲು ಭಾರತವು ಅಮೆರಿಕದೊಂದಿಗೆ ಸಹಕರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಮಂಗಳವಾರ ಹೇಳಿತ್ತು. ಅದರ ನಂತರ ಪ್ರತಿಕ್ರಿಯಿಸಿದ್ದ ಅಮೆರಿಕ, ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಮತ್ತು “ಅನಿಯಮಿತ ವಲಸೆ”ಗೆ ಸಂಬಂಧಿಸಿದ ಕಳವಳಗಳನ್ನು ಪರಿಹರಿಸಲು ಭಾರತದೊಂದಿಗೆ ಕೆಲಸ ಮಾಡಲು ಬಯಸುವುದಾಗಿ ಹೇಳಿತ್ತು.

ಅಮೆರಿಕದಿಂದ ವಾಪಸಾಗಬೇಕಾದ ಭಾರತೀಯರ ಸಂಖ್ಯೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಸ್ವಾಲ್, “ಈ ಸಮಯದಲ್ಲಿ, ಸಂಖ್ಯೆಗಳ ಬಗ್ಗೆ ಯಾವುದೇ ಚರ್ಚೆ ಅಕಾಲಿಕವಾಗಿದೆ” ಎಂದು ಹೇಳಿದ್ದಾರೆ.

ಬುಧವಾರ, ವಾಷಿಂಗ್ಟನ್‌ನಲ್ಲಿ ಅಮೆರಿಕದ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ವರದಿಗಾರರೊಂದಿಗೆ ಮಾತನಾಡುತ್ತಾ, ದಾಖಲೆರಹಿತ ಭಾರತೀಯ ವಲಸಿಗರ “ಕಾನೂನುಬದ್ಧ ಮರಳುವಿಸುವಿಕೆ”ಗೆ ಭಾರತ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅಮೆರಿಕದಿಂದ ಗಡೀಪಾರು ಮಾಡಲು ಅರ್ಹ ವ್ಯಕ್ತಿಗಳನ್ನು ನಿರ್ಧರಿಸುವ ಪರಿಶೀಲನಾ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ನಿಖರವಾದ ಸಂಖ್ಯೆಯನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ಅವರು ಹೇಳಿದ್ದರು.

ಗೃಹ ಭದ್ರತಾ ಇಲಾಖೆಯ 2022 ರ ವರದಿಯು, 2,20,000 ದಾಖಲೆರಹಿತ ಭಾರತೀಯ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಿದೆ. ಈ ಹಿಂದಿನ ಜೋ ಬಿಡೆನ್ ಆಡಳಿತ ಸೇರಿದಂತೆ, 2024 ರ ಅಕ್ಟೋಬರ್‌ವರೆಗಿನ 12 ತಿಂಗಳುಗಳಲ್ಲಿ 1,100 ಕ್ಕೂ ಹೆಚ್ಚು ಭಾರತೀಯ ನಾಗರಿಕರನ್ನು ಗಡೀಪಾರು ಮಾಡಿತ್ತು.

ಇದನ್ನೂಓದಿ:  ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...