Homeಮುಖಪುಟಕೇಂದ್ರದ 'ಕೃಷಿ ಮಾರುಕಟ್ಟೆ ನೀತಿ' ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಹೊಸ ಮಾರುಕಟ್ಟೆ ನೀತಿ ಹಿಂಪಡೆದ ಕೃಷಿ ಕಾನೂನಿನ ಮರುಹುಟ್ಟು ಎಂದ ಎಸ್‌ಕೆಎಂ

- Advertisement -
- Advertisement -

ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್‌, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ.

ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ ಫೆಬ್ರವರಿ 8 ಮತ್ತು 9ರಂದು ದೇಶದಾದ್ಯಂತ ಎಲ್ಲಾ ಸಂಸದರ ನಿವಾಸ, ಕಚೇರಿಗಳ ಮುಂದೆ ಸಾಮೂಹಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಶುಕ್ರವಾರ (ಜನವರಿ 24, 2025) ನವದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಹಾಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

“ಕೇಂದ್ರದ ಕೃಷಿ ಮಾರುಕಟ್ಟೆ ನೀತಿಯು ಈ ಹಿಂದೆ ಹಿಂಪಡೆಯಲಾದ ಮೂರು ಕೃಷಿ ಕಾನೂನುಗಳ ಹೊಸ ರೂಪವಾಗಿದೆ. ರಾಜ್ಯ ಸರ್ಕಾರಗಳ ಮೂಲಕ ಹಿಂಬಾಗಿಲಲ್ಲಿ ಬಲವಂತವಾಗಿ ಇದನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ. ಈ ನೀತಿಯು ರೈತ ವಿರೋಧಿ ಮತ್ತು ರಾಜ್ಯ ಸರ್ಕಾರಗಳ ವಿರೋಧಿಯಾಗಿದೆ” ಎಂದು 2020-21ರಲ್ಲಿ ಸಾಮೂಹಿಕ ರೈತ ಆಂದೋಲನದ ನೇತೃತ್ವ ವಹಿಸಿದ್ದ ಕೃಷಿ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ಹೇಳಿದೆ.

ಮಾರ್ಚ್ 5ರಿಂದ ‘ಪ್ರತಿರೋಧ ರ್‍ಯಾಲಿ’

ಎಸ್‌ಕೆಎಂ ರಾಜ್ಯ ಸಮಿತಿಗಳ ನಾಯಕರು ಆಯಾ ರಾಜ್ಯಗಳ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹೊಸ ಕೃಷಿ ಮಾರುಕಟ್ಟೆ ನೀತಿಯ ವಿರುದ್ದ ವಿಧಾನಸಭೆಗಳಲ್ಲಿ ನಿರ್ಣಯ ಅಂಗೀಕರಿಸುವಂತೆ ಮತ್ತು ಅದನ್ನು ವಾಪಸ್ ಹಿಂಪಡೆಯಲು ಕೇಂದ್ರವನ್ನು ಆಗ್ರಹಿಸುವಂತೆ ಮನವಿ ಮಾಡಲಿದ್ದಾರೆ. ಯಾವುದಾದರು ರಾಜ್ಯ ಸರ್ಕಾರ ರೈತರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಆ ರಾಜ್ಯದ ರಾಜಧಾನಿ, ಜಿಲ್ಲಾ ಕೇಂದ್ರಗಳು ಮತ್ತು ಉಪ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ 5ರಿಂದ ಮಹಾಪಂಚಾಯತ್, ರೈತ ಸಮಾವೇಶಗಳನ್ನು
ಆಯೋಜಿಸುವ ಮೂಲಕ ಮಹಾ ಪ್ರತಿರೋಧ ರ್‍ಯಾಲಿ ನಡೆಸಲಾಗುವುದು ಎಂದು ಎಸ್‌ಕೆಂಎಂ ಎಚ್ಚರಿಸಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಎಂಎನ್‌ಸಿಗಳಿಗೆ ಸಹಾಯ ಮಾಡುವ ಹುನ್ನಾರ

ಹೊಸ ನೀತಿಯು ಸರ್ಕಾರಿ ಬೆಂಬಲಿತ ಕೃಷಿ ಮಾರುಕಟ್ಟೆಗಳ ಮೇಲಿನ ನೇರ ದಾಳಿಯಾಗಿದೆ. ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಸಹಾಯ ಮಾಡುವ ಸಲುವಾಗಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿದೆ. ದೊಡ್ಡ ಕಂಪನಿಗಳು ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಉದ್ಯಮವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ ಎಂದು ಎಸ್‌ಕೆಎಂ ಆರೋಪಿಸಿದೆ.

ಹೊಸ ಕೃಷಿ ಮಾರುಕಟ್ಟೆ ನೀತಿಯು ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಮತ್ತು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳನ್ನು ಜೋಡಿಸುತ್ತದೆ. ಎಫ್‌ಪಿಒ, ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಗುಂಪುಗಳ ಮೂಲಕ ಒಪ್ಪಂದ ಕೃಷಿಯನ್ನು ಜಾರಿಗೊಳಿಸುತ್ತದೆ. ಆಹಾರ ಸಂಸ್ಕಾರಕ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಭವಿಷ್ಯದ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯೊಂದಿಗೆ ಸಂಪರ್ಕಿಸುತ್ತದೆ. ಇವೆಲ್ಲವೂ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮತ್ತು ವಿಶ್ವಬ್ಯಾಂಕ್ ಅನತಿಯಂತೆ ನಡೆಯುತ್ತಿವೆ ಎಂದು ಎಸ್‌ಕೆಎಂ ಹೇಳಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ, ಸರ್ಕಾರಿ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಪೂರೈಕೆಗಾಗಿ ಆಹಾರ ಸಂಗ್ರಹಣೆ ಸೇರಿದಂತೆ ಯಾವುದೇ ವಿಚಾರಗಳು ಹೊಸ ಕೃಷಿ ಮಾರುಕಟ್ಟೆ ನೀತಿಯಲ್ಲಿ ಇಲ್ಲ. ಇದು ಬಫರ್ ಸ್ಟಾಕ್‌ಗಳನ್ನು ಮಾತ್ರ ಪೂರೈಸುತ್ತದೆ ಎಂದು ಎಸ್‌ಕೆಂ ತಿಳಿಸಿದೆ.

ರೈತ ಸಂಘಗಳ ನಾಯಕರಾದ ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನಿಲಂ ಜೊತೆ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಎಸ್‌ಕೆಎಂನ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ಸಭೆಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಕ್ರಮವನ್ನೂ ಖಂಡಿಸಿದೆ ಮತ್ತು ಕಾರ್ಮಿಕ ಸಂಘಗಳ ಪ್ರತಿರೋಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...