Homeಮುಖಪುಟಮಧ್ಯಪ್ರದೇಶ | ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟ ನಿಷೇಧ

ಮಧ್ಯಪ್ರದೇಶ | ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟ ನಿಷೇಧ

- Advertisement -
- Advertisement -

ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲು ಮಧ್ಯಪ್ರದೇಶ ಸರ್ಕಾರವು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಶುಕ್ರವಾರ ಪ್ರಕಟಿಸಿದ್ದಾರೆ. “ದೇವರು ಬಯಸಿದರೆ, ನಾವು ಇತರ ಸ್ಥಳಗಳಲ್ಲಿಯೂ ಮದ್ಯದಂಗಡಿಗಳನ್ನು ಮುಚ್ಚುತ್ತೇವೆ” ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಮಧ್ಯಪ್ರದೇಶ

ಉಜ್ಜಯಿನಿ ಮಹಾನಗರ ಪಾಲಿಕೆ, ದಾಟಿಯಾ, ಪನ್ನಾ, ಮಂಡ್ಲಾ, ಮುಲ್ತಾಯಿ, ಮಂಡ್ಸೌರ್ ಮತ್ತು ಮೈಹಾರ್ ನಗರ ಪಾಲಿಕೆಗಳು (ಪುರಸಭೆಗಳು), ಓಂಕಾರೇಶ್ವರ, ಮಹೇಶ್ವರ, ಮಂಡ್ಲೇಶ್ವರ, ಓರ್ಚಾ, ಚಿತ್ರಕೂಟ ಮತ್ತು ಅಮರಕಂಟಕ್ ನಗರ ಪರಿಷತ್ತುಗಳು (ನಗರ ಮಂಡಳಿಗಳು) ಮತ್ತು ಸಲ್ಕನ್‌ಪುರ, ಬರ್ಮನ್ ಕಲಾ, ಲಿಂಗ, ಕುಂದಲ್‌ಪುರ, ಬಂದಕ್‌ಪುರ ಮತ್ತು ಬರ್ಮನ್‌ಖುರ್ಡ್‌ಗಳ ಆರು ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಈ ನಿಷೇಧವನ್ನು ಜಾರಿಗೆ ಬರಲಿದೆ.

ಇಲ್ಲಿನ ಮದ್ಯದ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದಿಲ್ಲ ಎಂದು ಸಿಎಂ ಯಾದವ್ ಹೇಳಿದ್ದು, “ಉಜ್ಜಯಿನಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು.” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಷ್ಟೆ ಅಲ್ಲದೆ, ನರ್ಮದಾ ನದಿಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಮೇಲಿನ ನಿಷೇಧ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ನದಿಯನ್ನು ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾಗಿದ್ದು, ಮಧ್ಯಪ್ರದೇಶದ ನದಿ ದಂಡೆಯ 21 ಜಿಲ್ಲೆಗಳಲ್ಲಿ 450 ಕ್ಕೂ ಹೆಚ್ಚು ಧಾರ್ಮಿಕ ಸ್ಥಳಗಳಿವೆ.

ಮುಂದಿನ ವರ್ಷ ಏಪ್ರಿಲ್ 1 ರ ನಂತರ, ಈ ಸ್ಥಳಗಳಲ್ಲಿ ಯಾವುದೇ ಮದ್ಯದಂಗಡಿ ಕಾರ್ಯನಿರ್ವಹಿಸುವುದಿಲ್ಲ ಎಂದು ಸಿಎಂ ಯಾದವ್ ಮಹೇಶ್ವರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. “ದೇವರು ಬಯಸಿದರೆ, ನಾವು ಇತರ ಸ್ಥಳಗಳಲ್ಲಿಯೂ ಮದ್ಯದಂಗಡಿಗಳನ್ನು ಮುಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಬಿಜೆಪಿ ಸರ್ಕಾರವು ಧಾರ್ಮಿಕ ಪಟ್ಟಣಗಳಲ್ಲಿ ಮಾಂಸ ಮತ್ತು ಮದ್ಯದಂಗಡಿಗಳನ್ನು ನಿಷೇಧಿಸುವ ಗುರಿಯನ್ನು ಹೊಂದಿದೆ ಎಂದು ಸಿಎಂ ಯಾದವ್ ಹೇಳಿದ್ದರು. “ಇದು ಒಂದು ದಿನದ ಪ್ರಕ್ರಿಯೆಯಲ್ಲ, ಇದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದ ಅವರು, ನರ್ಮದಾ ನದಿಯ ದಡದಲ್ಲಿರುವ ಧಾರ್ಮಿಕ ಪಟ್ಟಣಗಳಲ್ಲಿ ಮಾಂಸ ಮತ್ತು ಮದ್ಯ ಸೇವಿಸದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ವಿರೋಧ ಪಕ್ಷದ ಕಾಂಗ್ರೆಸ್ ಈ ಕ್ರಮವನ್ನು “ಪವಿತ್ರ” ಉಪಕ್ರಮ ಎಂದು ಕರೆದಿತ್ತು. “ಇದು ಪವಿತ್ರ ಕಲ್ಪನೆ” ಎಂದು ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಹೇಳಿದ್ದಾರೆ ಎಂದು ANI ವರದಿ ಮಾಡಿದೆ. “ಮುಖ್ಯಮಂತ್ರಿ ಸ್ವತಃ ಮಹಾಕಲ್ ಕಿ ನಾಗ್ರಿ [ಉಜ್ಜಯಿನಿ] ಮೂಲದವರು. ಅವರು ಮೊದಲು ಅಲ್ಲಿ ಮದ್ಯವನ್ನು ನಿಷೇಧಿಸಬೇಕು.” ಎಂದು ಹೇಳಿತ್ತು.

ಡಿಸೆಂಬರ್ 2023 ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಸಿಎಂ ಯಾದವ್ ಅವರು ತೆರೆದ ಸ್ಥಳಗಳಲ್ಲಿ ಮಾಂಸ ಮತ್ತು ಮೊಟ್ಟೆಗಳ ಮಾರಾಟದ ಮೇಲೆ ನಿರ್ಬಂಧಗಳನ್ನು ಘೋಷಿಸಿದ್ದರು.

ಇದನ್ನೂಓದಿ:  ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...