Homeಮುಖಪುಟಮಧ್ಯಪ್ರದೇಶ | ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟ ನಿಷೇಧ

ಮಧ್ಯಪ್ರದೇಶ | ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟ ನಿಷೇಧ

- Advertisement -
- Advertisement -

ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲು ಮಧ್ಯಪ್ರದೇಶ ಸರ್ಕಾರವು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಶುಕ್ರವಾರ ಪ್ರಕಟಿಸಿದ್ದಾರೆ. “ದೇವರು ಬಯಸಿದರೆ, ನಾವು ಇತರ ಸ್ಥಳಗಳಲ್ಲಿಯೂ ಮದ್ಯದಂಗಡಿಗಳನ್ನು ಮುಚ್ಚುತ್ತೇವೆ” ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಮಧ್ಯಪ್ರದೇಶ

ಉಜ್ಜಯಿನಿ ಮಹಾನಗರ ಪಾಲಿಕೆ, ದಾಟಿಯಾ, ಪನ್ನಾ, ಮಂಡ್ಲಾ, ಮುಲ್ತಾಯಿ, ಮಂಡ್ಸೌರ್ ಮತ್ತು ಮೈಹಾರ್ ನಗರ ಪಾಲಿಕೆಗಳು (ಪುರಸಭೆಗಳು), ಓಂಕಾರೇಶ್ವರ, ಮಹೇಶ್ವರ, ಮಂಡ್ಲೇಶ್ವರ, ಓರ್ಚಾ, ಚಿತ್ರಕೂಟ ಮತ್ತು ಅಮರಕಂಟಕ್ ನಗರ ಪರಿಷತ್ತುಗಳು (ನಗರ ಮಂಡಳಿಗಳು) ಮತ್ತು ಸಲ್ಕನ್‌ಪುರ, ಬರ್ಮನ್ ಕಲಾ, ಲಿಂಗ, ಕುಂದಲ್‌ಪುರ, ಬಂದಕ್‌ಪುರ ಮತ್ತು ಬರ್ಮನ್‌ಖುರ್ಡ್‌ಗಳ ಆರು ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಈ ನಿಷೇಧವನ್ನು ಜಾರಿಗೆ ಬರಲಿದೆ.

ಇಲ್ಲಿನ ಮದ್ಯದ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದಿಲ್ಲ ಎಂದು ಸಿಎಂ ಯಾದವ್ ಹೇಳಿದ್ದು, “ಉಜ್ಜಯಿನಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು.” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಷ್ಟೆ ಅಲ್ಲದೆ, ನರ್ಮದಾ ನದಿಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಮೇಲಿನ ನಿಷೇಧ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ನದಿಯನ್ನು ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾಗಿದ್ದು, ಮಧ್ಯಪ್ರದೇಶದ ನದಿ ದಂಡೆಯ 21 ಜಿಲ್ಲೆಗಳಲ್ಲಿ 450 ಕ್ಕೂ ಹೆಚ್ಚು ಧಾರ್ಮಿಕ ಸ್ಥಳಗಳಿವೆ.

ಮುಂದಿನ ವರ್ಷ ಏಪ್ರಿಲ್ 1 ರ ನಂತರ, ಈ ಸ್ಥಳಗಳಲ್ಲಿ ಯಾವುದೇ ಮದ್ಯದಂಗಡಿ ಕಾರ್ಯನಿರ್ವಹಿಸುವುದಿಲ್ಲ ಎಂದು ಸಿಎಂ ಯಾದವ್ ಮಹೇಶ್ವರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. “ದೇವರು ಬಯಸಿದರೆ, ನಾವು ಇತರ ಸ್ಥಳಗಳಲ್ಲಿಯೂ ಮದ್ಯದಂಗಡಿಗಳನ್ನು ಮುಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಬಿಜೆಪಿ ಸರ್ಕಾರವು ಧಾರ್ಮಿಕ ಪಟ್ಟಣಗಳಲ್ಲಿ ಮಾಂಸ ಮತ್ತು ಮದ್ಯದಂಗಡಿಗಳನ್ನು ನಿಷೇಧಿಸುವ ಗುರಿಯನ್ನು ಹೊಂದಿದೆ ಎಂದು ಸಿಎಂ ಯಾದವ್ ಹೇಳಿದ್ದರು. “ಇದು ಒಂದು ದಿನದ ಪ್ರಕ್ರಿಯೆಯಲ್ಲ, ಇದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದ ಅವರು, ನರ್ಮದಾ ನದಿಯ ದಡದಲ್ಲಿರುವ ಧಾರ್ಮಿಕ ಪಟ್ಟಣಗಳಲ್ಲಿ ಮಾಂಸ ಮತ್ತು ಮದ್ಯ ಸೇವಿಸದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ವಿರೋಧ ಪಕ್ಷದ ಕಾಂಗ್ರೆಸ್ ಈ ಕ್ರಮವನ್ನು “ಪವಿತ್ರ” ಉಪಕ್ರಮ ಎಂದು ಕರೆದಿತ್ತು. “ಇದು ಪವಿತ್ರ ಕಲ್ಪನೆ” ಎಂದು ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಹೇಳಿದ್ದಾರೆ ಎಂದು ANI ವರದಿ ಮಾಡಿದೆ. “ಮುಖ್ಯಮಂತ್ರಿ ಸ್ವತಃ ಮಹಾಕಲ್ ಕಿ ನಾಗ್ರಿ [ಉಜ್ಜಯಿನಿ] ಮೂಲದವರು. ಅವರು ಮೊದಲು ಅಲ್ಲಿ ಮದ್ಯವನ್ನು ನಿಷೇಧಿಸಬೇಕು.” ಎಂದು ಹೇಳಿತ್ತು.

ಡಿಸೆಂಬರ್ 2023 ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಸಿಎಂ ಯಾದವ್ ಅವರು ತೆರೆದ ಸ್ಥಳಗಳಲ್ಲಿ ಮಾಂಸ ಮತ್ತು ಮೊಟ್ಟೆಗಳ ಮಾರಾಟದ ಮೇಲೆ ನಿರ್ಬಂಧಗಳನ್ನು ಘೋಷಿಸಿದ್ದರು.

ಇದನ್ನೂಓದಿ:  ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...