Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಸಂವಿಧಾನ ದಿನ: ಅಂಬೇಡ್ಕರ್‌ ಬದಲಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಫೋಟೋ ಹಾಕಿದ್ದಕ್ಕೆ ಛೀಮಾರಿ, ನಂತರ ಬದಲಾವಣೆ.

ಭಾರೀ ಪ್ರತಿರೋಧದ ನಂತರ ವಿವಾದಾತ್ಮಕ ಪೋಸ್ಟರ್ ಹಿಂಪಡೆದು ಅಂಬೇಡ್ಕರ್‌ ಭಾವಚಿತ್ರ ಇರುವ ಪೋಸ್ಟರ್‌ ಬಿಡುಗಡೆ ಮಾಡಿದ ಆಯೋಜಕರು

- Advertisement -
- Advertisement -

ಸಂವಿಧಾನದ ಶಿಲ್ಪಿ, ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ರವರನ್ನು ನೆನಪಿಸಿಕೊಳ್ಳದೇ ಸಂವಿಧಾನ ದಿನಾಚರಣೆ ಮಾಡಲು ಸಾಧ್ಯವೇ? ಅಂತಹ ದುಸ್ಸಾಹಸಕ್ಕೆ ಮುಂದಾಗಿ ಕೈ ಸುಟ್ಟುಕೊಂಡ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ.

ನವ ಬೆಂಗಳೂರು ಫೌಂಡೇಶನ್‌ ಎಂಬ ಸಂಸ್ಥೆಯು ನವೆಂಬರ್‌ 24ರ ಭಾನುವಾರ ಬೆಂಗಳೂರಿನ ಜಯನಗರದ ಆರ್‌ವಿ ಟೀಚರ್ಸ್‌ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಂಡಿದೆ. ಅದಕ್ಕಾಗಿ ಸಿದ್ದಪಡಿಸಿದ ಪೋಸ್ಟರ್‌ನಲ್ಲಿ ಭಾರತ ಸಂವಿಧಾನದ ಪಿತಾಮಹಾ ಬಾಬಾ ಸಾಹೇಬ್‌ ಅಂಬೇಡ್ಕರ್ ಫೋಟೊ ಹಾಕುವ ಬದಲು ಜನಸಂಘದ ಸ್ಥಾಪಕ ಶ್ಯಾಂ ಪ್ರಸಾದ್‌ ಮುಖರ್ಜಿಯವರ ಫೋಟೊ ಮತ್ತು ಕಾಶ್ಮೀರದ ಭೂಪಟ ಹಾಕಿದ್ದಾರೆ.

ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಬಂದಿದ್ದೆ ತಡ ಪ್ರಗತಿಪರ ಸಂಘಟನೆಗಳು ಮತ್ತು ವ್ಯಕ್ತಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನೂರಾರು ಜನ ಸಂಘಟಕರಿಗೆ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರವಿಲ್ಲದೆ “ಸಂವಿಧಾನ ದಿನಾಚರಣೆ” ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರ ಭಾವಚಿತ್ರ ಇಟ್ಟು ಅವಮಾನಿಸಲಾಗಿದೆ. ಇದನ್ನು ಅಂಬೇಡ್ಕರ್ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ವಜ್ರಮುನಿ ಸಿಂಗ್‌ ಎಂಬುವವರು ತಿಳಿಸಿದ್ದಾರೆ.

ಇದು ಯಾವ ಸಂವಿಧಾನ ದಿನಾಚರಣೆ? ಸಂವಿಧಾನ ರೂಪಿಸಿದವರು,ಬಾಬಾ ಸಾಹೇಬರಾ ಇಲ್ಲ ಸಂಘೀ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯಾ? ಕುಚೇಷ್ಟೆಗೂ ಒಂದು ಮಿತಿಯಿರಲಿ ಎಂದು ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು ಕಿಡಿಕಾರಿದ್ದಾರೆ.

ನಮ್ಮ ಕಾಲದ ಭಂಡಾಟ ಎಂದರೆ ಇದು!! ಎಲ್ಲೂ ಬಾಬಾಸಾಹೇಬರ ಪ್ರಸ್ತಾಪವೇ ಇಲ್ಲ. ಶಾಂಪ್ರಸಾದ್ ಮುಖರ್ಜಿ ಪಟ.ಕೂತಿದೆ. ಚರಿತ್ರೆ ಅಳಿಸಿ ಫೇಕ್ ಚರಿತ್ರೆ ಪ್ರತಿಷ್ಠಾಸುವ ಕ್ರಮ ಇದು. ಸ್ಪೀಕರುಗಳು ಯಾರು ಅಂತ ನೋಡಿದರೆ ಸಾಕು.. ಎಂದು ಹಿರಿಯ ಚಿಂತಕರಾದ ಸುರೇಶ್ ಕಂಜರ್ಪಣೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟು ಧೈರ್ಯ ಇವರಿಗೆ ಅಂತ. ಬಹಳ ಅತಿ ಆಗಿದೆ ಈ RSS ಅವರದ್ದು ಬಾಬಾಸಾಹೇಬರ ಫೋಟೋ ತಗೆದುಹಾಕ್ತಾರೆ ಅಂದ್ರೆ‍? ನಿಜಕ್ಕೂ ಇವರಿಗೆ ಪಾಠ ಕಲಿಸದೇ ಬಿಡಬಾರದು ಎಂದು ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜಾತಿವ್ಯಾದಿ ಮನುವಾದಿಗಳ ಮನಸ್ಸು ಅದೆಷ್ಟು ಪೂರ್ವಾಗ್ರಹ ಪೀಡಿತರಾಗಿ ಕೊಳೆತು ನಾರುತ್ತಿದೆ ಎಂಬುದನ್ನು ಇಲ್ಲಿ ನೋಡಿ…
#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ. ಎಂದು ಅಶೋಕ್‌ ಮೌರ್ಯಯವರು ನುಡಿದಿದ್ದಾರೆ.

#ಅಂಬೇಡ್ಕರರ ಭಾವಚಿತ್ರವಿಲ್ಲದೆ ಸಂವಿಧಾನ ದಿನಾಚರಣೆ ಆಚರಿಸುತ್ತಿರುವುದಲ್ಲದೆ, ಅಂಬೇಡ್ಕರರ ಜಾಗದಲ್ಲಿ ಶ್ಯಾಮ್ ಪ್ರಕಾಶ್ ಮುಖರ್ಜಿಯವರನ್ನು ಇಟ್ಟು ಶೋಷಿತರಿಗೆ ಸಂದೇಶ ನೀಡುತ್ತಿದ್ದಾರೆ. ನೀವು ನಮ್ಮ ಕೆಳಗೇ ಇರಬೇಕು ಅಂತ. ನಾವು ಒಗ್ಗಟ್ಟಾಗದಿದ್ದರೆ ಕೆಲವೇ ವರ್ಷಗಳಲ್ಲಿ ಭಾರತವನ್ನ ಸರ್ವಾಧಿಕಾರಕ್ಕೆ ದೂಡಿ ಚಾತುರ್ವರ್ಣ ಸಿದ್ಧಾಂತವನ್ನು ಅಧಿಕೃತವಾಗಿ ಜಾರಿ ಮಾಡಿಬಿಡುತ್ತಾರೆ ಎಂದು ವಿಕಾಸ್ ಆರ್‌ ಮೌರ್ಯ ಹೇಳಿದ್ದಾರೆ.

ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಘಟಕರು ಕೂಡಲೇ ಅಂಬೇಡ್ಕರ್‌ ಭಾವಚಿತ್ರವುಳ್ಳ ಹೊಸ ಪೋಸ್ಟರ್ ಬಿಟ್ಟಿದ್ದಾರೆ. ಶ್ಯಾಂ ಪ್ರಸಾದ್ ಮುಖರ್ಜಿಯವರ ಫೋಟೊವನ್ನು ಕೈಬಿಟ್ಟಿದ್ದಾರೆ.

ಫೋಟೊ ಮಾತ್ರ ಬದಲಾಗಿದೆ ಅಷ್ಟೇ. ಆದರೆ ನಿಮ್ಮ ಮನಸ್ಸಿನಲ್ಲಿನ ವಿಷ ಬದಲಾಗಿಲ್ಲ. ಇರಲಿ ಹೋರಾಟ ಮುಂದುವರೆಯುತ್ತದೆ. ಕೆಟ್ಟ ಮೇಲೆ ನಿಮಗೆ ಬುದ್ದಿ ಬರುತ್ತದೆ ಎಂದು ಹಲವಾರು ಜನ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...