Homeಕರ್ನಾಟಕದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

- Advertisement -
- Advertisement -

ಮಹಿಳೆಯರು, ವೃದ್ಧರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಬಗ್ಗೆ ವರದಿಗಳು ಪತ್ರಿಕೆಗಳಲ್ಲಿ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಎಚ್ಚರಿಕೆ ನೀಡಿದರು.

ರಾಜ್ಯದ ವಿವಿದೆಡೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಊರು ಬಿಟ್ಟು ಹೋಗುತ್ತಿರುವ ಹಿನ್ನೆಲೆ, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಶನಿವಾರ (ಜ.25) ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಭೆ ನಡೆಸಿದರು.

“ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಭೆಯಯಲ್ಲಿ ಸಿಎಂ ಖಾರವಾಗಿ ಪ್ರಶ್ನಿಸಿದರು.

ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಅರ್ಹತೆ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಿಎಂ ತರಾಟೆಗೆ ತೆಗೆದುಕೊಂಡರು.

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದರು.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ (ಐಡಿ ಕಾರ್ಡ್‌ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ, ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಕೇಳಿದರು.

ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಇದೇ ಸಂದರ್ಭದಲ್ಲಿ ಆರ್‌ಬಿಐ ಅಧಿಕಾರಿಗಳಿಗೆ ಸಿಎಂ ಪ್ರಶ್ನಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಮೈಕ್ರೋ ಫೈನಾನ್ಸ್ ಕಂಪನಿ ಮುಖ್ಯಸ್ಥರು, ಆರ್‌ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ. ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಹೇಳಿದರು.

ಇದಕ್ಕೆ ಸಚಿವರಾದ ಕೃಷ್ಣಬೈರೇಗೌಡ, ಹೆಚ್.ಕೆ ಪಾಟೀಲ್ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್‌ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿಗಳ ಎಂ.ಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಗುಡುಗಿದರು.

ಮೊದಲ ಹಂತದ ಸಭೆ ಬಳಿಕ ಬ್ಯಾಂಕಿಂಗ್, ಫೈನಾನ್ಸ್, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳನ್ನು ಸಭೆಯಿಂದ ಹೊರಗಿರಲು ಹೇಳಿದ ಸಿಎಂ, ಕಾನೂನು, ಗೃಹ ಮತ್ತು ಕಂದಾಯ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಎರಡನೇ ಹಂತದ ಸಭೆ ನಡೆಸಿದರು.

ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...