Homeಮುಖಪುಟ’ಮುಂದಿನ 25 ವರ್ಷ ನಮ್ಮದೇ ಸರ್ಕಾರ ಎಂದ ಶಿವಸೇನೆಯ ಸಂಜಯ್ ರಾವತ್

’ಮುಂದಿನ 25 ವರ್ಷ ನಮ್ಮದೇ ಸರ್ಕಾರ ಎಂದ ಶಿವಸೇನೆಯ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮುಂದಿನ 25 ವರ್ಷಗಳವರೆಗೆ ಶಿವಸೇನೆ ನೇತೃತ್ವದ ಸರ್ಕಾರ ಆಡಳಿತ ನಡೆಸಲಿದೆ ಎಂದು ಪಕ್ಷದ ವಕ್ತಾರ ಸಂಜಯ್‌ ರಾವತ್‌ ವಿಶ್ವಾಸ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜತೆಗೆ ಮೈತ್ರಿಗೆ ಮನವಿ ಮಾಡಿರುವ ಶಿವಸೇನೆ ಸ್ಥಿರ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಈ ಮಧ್ಯೆ ಮೂರು ಪಕ್ಷಗಳ ನಿರ್ಧಾರ ಅಂತಿಮ ಹಂತದಲ್ಲಿದ್ದು, ಮಹಾರಾಷ್ಟ್ರದಲ್ಲಿ ಮುಂದಿನ ದಿನಗಳಲ್ಲಿ ಶಿವಸೇನೆಯ ಆಡಳಿತ ನಡೆಯಲಿದೆ. ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉದ್ಧವ್‌ ಠಾಕ್ರೆ ತಿಳಿಸಿರುವುದಾಗಿ, ಸಂಜಯ್‌ ರಾವತ್ ಹೇಳಿದರು.

ರಾಜ್ಯದ ಹಿತದೃಷ್ಟಿಯನ್ನು ಮುಂದಿಟ್ಟುಕೊಂಡು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಮಾತುಕತೆ ನಡೆಯುತ್ತಿದೆ. ಇದು ಏಕ ಪಕ್ಷದ ಸರ್ಕಾರವೇ ಆಗಿರಲಿ ಅಥವಾ ಮೈತ್ರಿ ಮಾಡಿಕೊಳ್ಳಲಿ, ಇದರಲ್ಲಿ ಆಡಳಿತದ ಕಾರ್ಯಸೂಚಿಯ ಅವಶ್ಯಕತೆಯಿದೆ. ರಾಜ್ಯದ ಜನತೆಗೆ ಮೂಲ ಸೌಕರ್ಯ, ಬರ ನಿರ್ವಹಣೆ ಮತ್ತು ಅತಿವೃಷ್ಟಿಯಿಂದ ಆದ ಹಾನಿ, ತೊಂದರೆ ನಿಭಾಯಿಸಬೇಕಿದೆ. ನಮ್ಮೊಂದಿಗೆ ಬರುವವರು ಅನುಭವ ಉಳ್ಳವರು. ಅವರ ಅನುಭವದ ಪ್ರಯೋಜನವನ್ನು ನಾವು ಪಡೆಯಲಿದ್ದೇವೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

ಇದನ್ನೂ ಓದಿ: `ಮಹಾ’ ಸರ್ಕಾರ ರಚನೆ ಸರ್ಕಸ್‌: ಸಿಎಂ ಹುದ್ದೆ ಶಿವಸೇನೆಗೆ ಎಂದ ಎನ್‌ಸಿಪಿ..!

ಇಲ್ಲಿಯವರೆಗೆ ಸೇನಾದ ರಾಜಕೀಯ ಪ್ರತಿಸ್ಪರ್ಧಿ ಆಗಿದ್ದ ಕಾಂಗ್ರೆಸ್‌ ಜತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವ ಮುಂದಿರಿಸಿದ್ದೇವೆ. ದೇಶದ ಅತ್ಯಂತ ಹಳೆಯ ಪಕ್ಷದ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಿದ್ದಾರೆ ಎಂದು ಹೇಳಿದರು.

ಸಿಎಂ ಹುದ್ದೆಯನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆಗೆ ಹಂಚಿಕೊಳ್ಳುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವತ್‌, ’ಮುಂದಿನ 25 ವರ್ಷಗಳವರೆಗೆ ನಾವು ಮುಖ್ಯಮಂತ್ರಿ ಹುದ್ದೆ ಹೊಂದಲು ಬಯಸುತ್ತೇವೆ. ಶಿವಸೇನೆ ರಾಜ್ಯಕ್ಕೆ ನಾಯಕತ್ವವನ್ನು ಒದಗಿಸಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಹಾರಾಷ್ಟ್ರದ ಜತೆಗೆ ತಮ್ಮ ಪಕ್ಷದ ಸಂಬಂಧ ಶಾಶ್ವತ. ಇದು ತಾತ್ಕಾಲಿಕವಲ್ಲ. 50 ವರ್ಷಗಳವರೆಗೆ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿದೆ. ಶಿವಸೇನೆ ಪಕ್ಷವನ್ನು 1966 ರಲ್ಲಿ ಬಾಳಾ ಠಾಕ್ರೆ ಸ್ಥಾಪಿಸಿದ್ದರು ಎಂದು ರಾವತ್‌ ಹೇಳಿದರು.

ಇನ್ನು ಕಾಂಗ್ರೆಸ್-ಎನ್‌ಸಿಪಿ ಜತೆಗಿನ ಒಪ್ಪಂದದ ನಂತರ ವೀರ್‌ ಸಾವರ್ಕರ್‌ಗೆ ಭಾರತ ರತ್ನ ಕೊಡುವುದನ್ನು ವಿರೋಧಿಸುವುದು, ಮುಸ್ಲಿಂರಿಗೆ ಮೀಸಲಾತಿ ಒದಗಿಸಲು ನೀವು ಒಪ್ಪಿಕೊಳ್ಳುತ್ತೀರಾ ಎಂದು ಕೇಳಿ ಬಂದ ಪ್ರಶ್ನೆಗೆ ರಾವತ್‌ ನೇರವಾಗಿ ಉತ್ತರಿಸಲಿಲ್ಲ. ಈ ಪ್ರಶ್ನೆಯ ಮೂಲ ಮಾಹಿತಿ ಎಲ್ಲಿಯದು ಎಂದು ತಮಗೆ ತಿಳಿದಿದೆ ಎಂದು ಹಾರಿಕೆಯ ಉತ್ತರ ನೀಡಿದರು.

ಇದನ್ನೂ ಓದಿ: ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್‌ ಸೂತ್ರಗಳೇ ಹೆಚ್ಚಿವೆ ಎಂಬ ಪ್ರಶ್ನೆಗೆ ಸೇನಾ ಪತ್ರಿಕೆ ಸಾಮ್ನಾದ ಪ್ರಮುಖ ಉತ್ತರಿಸಿ, ನೀವು ಇದಕ್ಕೆಲ್ಲಾ ಆಲೋಚನೆ ಮಾಡಬೇಕಾಗಿಲ್ಲ. ಯಾಕೆಂದರೆ ಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ನಿರ್ಧಾರ ತೆಗೆದುಕೊಳ್ಳುವಲ್ಲಿ ನಿಸ್ಸೀಮರು ಎಂದು ಹೇಳಿದರು.

ಇನ್ನು ಹಿಂದುತ್ವ ರಾಜಕೀಯ, ಕಾಂಗ್ರೆಸ್‌ ವಿರೋಧಿ ಅಜೆಂಡಾ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ, ಯಾವುದು ಸಿದ್ಧಾಂತ..? ನಾವು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಮೂಲಕ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...