Homeಕರ್ನಾಟಕಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದರು.

ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಮತ್ತು ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡುತ್ತೇವೆ. ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.

ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚಿಸಿದ್ದೇವೆ ಎಂದು ತಿಳಿಸಿದರು.

‘Banning of Unregulated lending Activities’ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ ಕೈಗೊಳ್ಳುತ್ತೇವೆ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ಸಾಲ ವಸೂಲಾತಿ ಕುರಿತಾಗಿ ಆರ್‌ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು. ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಸಿಎಂ ಹೇಳಿದರು.

ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...