Homeಕರ್ನಾಟಕಸಿಎಂ ಸಿದ್ದರಾಮಯ್ಯ ವಿರುದ್ಧದ ಲಂಚ ಪ್ರಕರಣ: ಮುಕ್ತಾಯ ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯ

ಸಿಎಂ ಸಿದ್ದರಾಮಯ್ಯ ವಿರುದ್ಧದ ಲಂಚ ಪ್ರಕರಣ: ಮುಕ್ತಾಯ ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವೇಕ್‌ ಹೋಟೆಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಎಲ್‌. ವಿವೇಕಾನಂದ ಅಲಿಯಾಸ್‌ ಕಿಂಗ್ಸ್‌ ಕೋರ್ಟ್‌ ವಿವೇಕ್‌ ಅವರನ್ನು ಕೋಟ್ಯಾಂತರ ರೂಪಾಯಿ ಲಂಚ ಪಡೆದು ಬೆಂಗಳೂರು ಟರ್ಫ್‌ ಕ್ಲಬ್‌ ಲಿಮಿಟೆಡ್‌ನ (ಬಿಟಿಸಿಎಲ್‌) ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಿದ್ದಾರೆ ಎಂದು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಲೋಕಾಯುಕ್ತ ಪೊಲೀಸರ ಅಂತಿಮ ವರದಿಗೆ ಆಕ್ಷೇಪಿಸಿ, ದೂರುದಾರ ಬೆಂಗಳೂರಿನ ಬಿಜೆಪಿ ಮುಖಂಡ ಎನ್‌. ಆರ್‌ ರಮೇಶ್‌ ಅವರು ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಆದೇಶ ಪ್ರಕಟಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2024ರ ಸೆಪ್ಟೆಂಬರ್ 12 ಸಲ್ಲಿಸಿರುವ ಅಂತಿಮ ವರದಿಯನ್ನು ಒಪ್ಪಿಕೊಳ್ಳಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದಾಗಿ ವರದಿ ತಿಳಿಸಿದೆ.

ಸಿದ್ದರಾಮಯ್ಯ ಅವರು ಲಂಚ ಪಡೆದು ವಿವೇಕಾನಂದ ಅವರನ್ನು ಬಿಟಿಸಿಎಲ್‌ಗೆ ಸ್ಟ್ಯುವರ್ಡ್‌ ಆಗಿ ನೇಮಕ ಮಾಡಿದ್ದಾರೆ ಎಂಬುವುದಕ್ಕೆ ಯಾವುದೇ ದಾಖಲೆಗಳು ಇಲ್ಲ ಎಂದು ಲೋಕಾಯುಕ್ತದ ಪ್ರಾಥಮಿಕ ತನಿಖಾ ವರದಿಯಲ್ಲಿ ಹೇಳಲಾಗಿದೆ. ದೂರುದಾರರು ತನಿಖೆಗೆ ಹಾಜರಾಗದ ಕಾರಣ, ಆರೋಪಿಗಳ ವಿರುದ್ಧ ಮುಂದುವರಿಯಲು ಸೂಕ್ತ ದಾಖಲೆಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯದ ಆದೇಶದಲ್ಲಿ ವಿವರಿಸಲಾಗಿದೆ.

“ಲೋಕಾಯುಕ್ತ ಸಲ್ಲಿಸಿರುವ ಮುಕ್ತಾಯ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, 1998-99ರಲ್ಲಿ ವಿವೇಕಾನಂದ ಅವರು ಮೈಸೂರು ಟರ್ಫ್‌ ಕ್ಲಬ್‌ನ ಸ್ಟ್ಯುವರ್ಡ್‌ ಆಗಿದ್ದರು. 2003-04ರಲ್ಲಿ ಬೆಂಗಳೂರು ಟರ್ಫ್‌ ಕ್ಲಬ್‌ಗೆ (ಬಿಟಿಸಿ) ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಲಾಗಿತ್ತು. ಆನಂತರ ಮತ್ತೆ ಬಿಟಿಸಿ ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಲಾಗಿತ್ತು. ಈ ಎಲ್ಲಾ ವಿಚಾರಗಳು ಗಮನಿಸಿದರೆ ಸರ್ಕಾರವು ತನಗೆ ದೊರೆತಿರುವ ವಿಶೇಷ ಅಧಿಕಾರವನ್ನು ಸ್ವೇಚ್ಛೆಯಿಂದ ಬಳಸಿ ನೇಮಕ ಮಾಡಬೇಕಾದ ಹೊಸಬರು ವಿವೇಕಾನಂದ ಅವರಲ್ಲ. ಈ ನೆಲೆಯಲ್ಲಿ ಸ್ಟ್ಯುವರ್ಡ್‌ ಆಗಿ ನೇಮಕವಾಗಲು ವಿವೇಕಾನಂದ ಅವರು ಅರ್ಹರಾಗಿದ್ದು, ಸ್ವೇಚ್ಛೆಯ ನಡೆ ಅನುಸರಿಸಬೇಕಿಲ್ಲ. ಇದರಿಂದ ವಿವೇಕಾನಂದ ಅವರ ನೇಮಕಾತಿ ಸಮರ್ಥನೀಯವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

“ಸಿದ್ದರಾಮಯ್ಯ ಅವರು ಸಲ್ಲಿಸಿರುವ ಆದಾಯ ತೆರಿಗೆ ವರದಿ, ಅಫಿಡವಿಟ್‌, ಅವರ ಬ್ಯಾಂಕ್‌ ಖಾತೆ ಹಾಗೂ ವಿವೇಕಾನಂದ ಅವರ ಘೋಷಣಾ ಪತ್ರವನ್ನು ಲೋಕಾಯುಕ್ತ ಸಂಗ್ರಹಿಸಿದೆ. ವಿವೇಕಾನಂದ ಅವರ ಹೇಳಿಕೆಯನ್ನು ಪರಿಶೀಲಿಸಲಾಗಿದ್ದು, ಬಡ್ಡಿರಹಿತ ಸಾಲವನ್ನು ಸಿದ್ಧರಾಮಯ್ಯ ಅವರಿಗೆ ನೀಡಲಾಗಿದೆ ಎಂದು ವಿವೇಕಾನಂದ ಹೇಳಿದ್ದು, ಅವರ ಐಟಿ ದಾಖಲೆಯಲ್ಲಿ ಉಲ್ಲೇಖಿತವಾಗಿದೆ. ಗೌರವಾನ್ವಿತ ಹುದ್ದೆಯ ಸ್ಟ್ಯುವರ್ಡ್‌ಶಿಪ್‌ಗೆ ನೇಮಕವಾಗುವ ಎಲ್ಲಾ ಅರ್ಹತೆಯನ್ನು ವಿವೇಕಾನಂದ ಹೊಂದಿದ್ದು, ಇದರಿಂದ ಅಕ್ರಮವಾಗಿ ಸಂಪಾದಿಸುವುದು ಏನೂ ಇಲ್ಲ. ಹೀಗಾಗಿ, ಹಾಲಿ ಪ್ರಕರಣಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್‌ 7,8 ಅಥವಾ 13 ಅನ್ವಯಿಸುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

“ದೂರುದಾರರ ಪರ ವಕೀಲರು ತನಿಖಾ ಸಂಸ್ಥೆಗೆ ಅಗತ್ಯವಾದ ಸಮಯ ನೀಡಿಲ್ಲ ಎಂದಿದ್ದಾರೆ. ಇದನ್ನು ಒಪ್ಪಿಕೊಳ್ಳುವುದಾದರೆ ದೂರುದಾರರು ಪ್ರತಿಭಟನಾ ಅರ್ಜಿ ಸಲ್ಲಿಕೆಯ ವಾದದ ಸಂದರ್ಭದಲ್ಲಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಯಾರೂ ಅವರನ್ನು ನಿರ್ಬಂಧಿಸಿರಲಿಲ್ಲ. ಹಾಲಿ ಪ್ರಕರಣದಲ್ಲಿ ಆರೋಪ ಮಾಡಿರುವುದನ್ನು ಹೊರತುಪಡಿಸಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“2014ರಲ್ಲಿ ಕೃತ್ಯ ನಡೆದಿದ್ದು, 2022ರಲ್ಲಿ ಮೊದಲ ಬಾರಿಗೆ ಎಂಟು ವರ್ಷಗಳ ಬಳಿಕ ದೂರು ದಾಖಲಿಸಲಾಗಿದೆ. ತಡವಾಗಿ ದೂರು ದಾಖಲಿಸಿರುವುದಕ್ಕೆ ನ್ಯಾಯಾಲಯವು ಯಾವುದೇ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ. ಆದರೆ, ತಡವಾಗಿ ದೂರು ದಾಖಲಿಸಲು ಕಾರಣವೇನು ಎಂದ ಹೇಳಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

“ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ಸ್ವೀಕರಿಸಿರುವ 1.30 ಕೋಟಿ ರೂಪಾಯಿಯನ್ನು ಅವರಿಗೆ ಸ್ಟ್ಯುವರ್ಡ್‌ ಆಗಿ ನಾಮನಿರ್ದೇಶನ ಮಾಡಿರುವುದಕ್ಕೆ ಪಡೆದಿರುವ ಹಣ ಎನ್ನಲಾಗದು. ಈ ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ವಿವೇಕಾನಂದ ಅವರ ವಿರುದ್ಧ ಪ್ರಕ್ರಿಯೆ ಮುಂದುವರಿಸಲು ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ತನಿಖಾ ಸಂಸ್ಥೆಯು ಸಲ್ಲಿಸಿರುವ ಮುಕ್ತಾಯ ವರದಿಯನ್ನು ಒಪ್ಪಿಕೊಳ್ಳಬೇಕಿದೆ” ಎಂದು ನ್ಯಾಯಾಲಯ ಹೇಳಿದೆ. ‌

ಕೃಪೆ : ಬಾರ್ & ಬೆಂಚ್

ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...