Homeಮುಖಪುಟಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ 'ಪದ್ಮ ಪ್ರಶಸ್ತಿ'

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ ‘ಪದ್ಮ ಪ್ರಶಸ್ತಿ’

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಪ್ರಮುಖ ವ್ಯಕ್ತಿ ಸಾಧ್ವಿ ರಿತಂಭರ, ಮಂದಿರದ ಮುಖ್ಯ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ ಮತ್ತು ಮಂದಿರ ಪವಿತ್ರೀಕರಣದ ಮಹೂರ್ತ ನಿರ್ಧರಿಸುವ ಜವಾಬ್ದಾರಿ ವಹಿಸಿಕೊಂಡಿದ್ದ ವೇದ ವಿದ್ವಾಂಸ ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಈ ವರ್ಷದ ಪದ್ಮ ಪ್ರಶಸ್ತಿ ಪುರಸ್ಕೃತ ಪಟ್ಟಿಯಲ್ಲಿದ್ದಾರೆ. ಇವರನ್ನು ಕ್ರಮವಾಗಿ ಸಾಮಾಜಿಕ ಕಾರ್ಯ, ವಾಸ್ತುಶಿಲ್ಪ ಮತ್ತು ಸಾಹಿತ್ಯ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಶ್ವ ಹಿಂದೂ ಪರಿಷತ್‌ನ (ವಿಹೆಚ್‌ಪಿ) ಮಹಿಳಾ ವಿಭಾಗ ‘ದುರ್ಗಾ ವಾಹಿನಿಯ’ ಸಂಸ್ಥಾಪಕಿ ಸಾಧ್ವಿ ರಿತಂಭರ 1989-90ರ ಅವಧಿಯಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಅಭಿಯಾನದ ಭಾಗವಾಗಿ ದೇಶದಾದ್ಯಂತ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಚಂದ್ರಕಾಂತ್ ಸೋಂಪುರ ಗುಜರಾತ್‌ನ ದೇವಾಲಯ ನಿರ್ಮಾಣಕಾರರ ಕುಟುಂಬದಿಂದ ಬಂದವರು. ದೇಶದಾದ್ಯಂತ 200ಕ್ಕೂ ಹೆಚ್ಚು ದೇವಾಲಯಗಳ ನಿರ್ಮಾಣದಲ್ಲಿ ಸೋಂಪುರ ಕುಟುಂಬವು ಪ್ರಮುಖ ಪಾತ್ರ ವಹಿಸಿದೆ. ಗುಜರಾತ್‌ನ ಸೋಮನಾಥ ದೇವಾಲಯದ ಪುನರ್ನಿರ್ಮಾಣದಲ್ಲೂ ಈ ಕುಟುಂಬ ಭಾಗಿಯಾಗಿದೆ.

ವೇದ ವಿದ್ವಾಂಸ ಎನ್ನಲಾದ ಗಣೇಶ್ವರ್ ಶಾಸ್ತ್ರಿ ದ್ರಾವಿಡ್, ರಾಮ ಮಂದಿರದ ಭೂಮಿ ಪೂಜೆಯ ಮಹೂರ್ತ ಮತ್ತು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಯಲ್ಲಿಯೂ ಭಾಗಿಯಾಗಿದ್ದರು. ಕಳೆದ ವರ್ಷ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದಾಗ ಅವರ ಪಕ್ಕದಲ್ಲಿದ್ದ ಏಕೈಕ ವ್ಯಕ್ತಿ ಇವರಾಗಿದ್ದಾರೆ.

ಸಾಧ್ವಿ ರಿತಂಭರ ಅವರಿಗೆ ಪದ್ಮಭೂಷಣ, ಚಂದ್ರಕಾಂತ್ ಸೋಂಪುರ ಮತ್ತು ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಈ ಬಾರಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧ ಕ್ಷೇತ್ರಗಳ 139 ಸಾಧಕರಿ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ 7 ಮಂದಿಯನ್ನು ಪದ್ಮ ವಿಭೂಷಣ, 19 ಜನರನ್ನು ಪದ್ಮ ಭೂಷಣ ಮತ್ತು 113 ಮಂದಿಯನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಮಂದಿಗೆ ವಿವಿಧ ಪದ್ಮ ಪ್ರಶಸ್ತಿಗಳು ಘೋಷಣೆಯಾಗಿವೆ.

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...