Homeಅಂತರಾಷ್ಟ್ರೀಯ477 ದಿನಗಳ ಸೆರೆವಾಸದ ನಂತರ ತಮ್ಮವರನ್ನು ಸೇರಿಕೊಂಡ ಇಸ್ರೇಲ್ ಒತ್ತೆಯಾಳುಗಳು

477 ದಿನಗಳ ಸೆರೆವಾಸದ ನಂತರ ತಮ್ಮವರನ್ನು ಸೇರಿಕೊಂಡ ಇಸ್ರೇಲ್ ಒತ್ತೆಯಾಳುಗಳು

- Advertisement -
- Advertisement -

ಹಮಾಸ್ ಶನಿವಾರ ನಾಲ್ಕು ಮಹಿಳಾ ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದ ನಂತರ, ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) 477 ದಿನಗಳ ಸೆರೆವಾಸದ ನಂತರ ಕುಟುಂಬ ಸದಸ್ಯರೊಂದಿಗೆ ಮತ್ತೆ ಒಂದಾಗುವ ವೀಡಿಯೊಗಳನ್ನು ಪೋಸ್ಟ್ ಮಾಡಿದೆ.

ಹಮಾಸ್ ಶನಿವಾರ ನಾಲ್ಕು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ, ಕರೀನಾ ಅರಿಯೆವ್, ಡೇನಿಯೆಲ್ಲಾ ಗಿಲ್ಬೋವಾ, ನಾಮಾ ಲೆವಿ ಮತ್ತು ಲಿರಿ ಅಲ್ಬಾಗ್ ಅವರನ್ನು ಅಕ್ಟೋಬರ್ 7, 2023 ರಂದು ಹಮಾಸ್ ನಡೆಸಿದ ದಾಳಿಯ ನಂತರ ಸೆರೆಹಿಡಿಯಲಾಯಿತು. ಬಳಿಕ ಆ ಪ್ರದೇಶದಲ್ಲಿ ಒಂದು ದೊಡ್ಡ ಯುದ್ಧವಾಗಿ ಮಾರ್ಪಟ್ಟಿತು. ಅವರ ಬಿಡುಗಡೆಯ ನಂತರ, ನಾಲ್ವರು ಇಸ್ರೇಲಿ ಸೈನಿಕರು ಮುಗುಳ್ನಗುತ್ತಾ ಪ್ಯಾಲೆಸ್ಟೈನ್ ಚೌಕದ ವೇದಿಕೆಯಿಂದ ಹೆಬ್ಬೆರಳುಗಳನ್ನು ಮೇಲಕ್ಕೆತ್ತಿದರು.

ಎರಡೂ ಕಡೆಗಳಲ್ಲಿ ಶಸ್ತ್ರಸಜ್ಜಿತ, ಮುಖವಾಡ ಧರಿಸಿದ ಉಗ್ರಗಾಮಿಗಳು ಅವರನ್ನು ಸುತ್ತುವರೆದಿದ್ದರಿಂದ ಈ ನಡೆ ಮಹತ್ವದ್ದಾಗಿತ್ತು. ಮುಖ್ಯವಾಗಿ, ಹಿಂದೆ ಬಿಡುಗಡೆಯಾದ ಒತ್ತೆಯಾಳುಗಳು ತಮ್ಮನ್ನು ಕ್ರೂರ ಪರಿಸ್ಥಿತಿಗಳಲ್ಲಿ ಇರಿಸಲಾಗಿದೆ ಮತ್ತು ಪ್ರಚಾರದ ವೀಡಿಯೊಗಳನ್ನು ರೆಕಾರ್ಡ್ ಮಾಡಲು ಒತ್ತಾಯಿಸಲಾಗಿದೆ ಎಂದು ಹೇಳಿದರು.

ಒಂದು ವರ್ಷಕ್ಕೂ ಹೆಚ್ಚು ಕಾಲ ಸೆರೆಯಲ್ಲಿದ್ದ ನಂತರ ಅವರನ್ನು ಬಿಡುಗಡೆ ಮಾಡಿದಾಗ, ಟೆಲ್ ಅವೀವ್‌ನ ಒತ್ತೆಯಾಳು ಚೌಕದಲ್ಲಿ ನೂರಾರು ಜನರು ಹರ್ಷೋದ್ಗಾರ ಮಾಡಿದರು. ಅಲ್ಲಿ ಅವರು ದೊಡ್ಡ ಪರದೆಯಲ್ಲಿ ಇಡೀ ಸಂದರ್ಭ ವೀಕ್ಷಿಸುತ್ತಿದ್ದರು.

ಐಡಿಎಫ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, “ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ, ಇಂದು ಹಮಾಸ್ ಸೆರೆಯಲ್ಲಿ 477 ದಿನಗಳ ನಂತರ ನಾವು ನಾಲ್ಕು ಇಸ್ರೇಲಿ ಒತ್ತೆಯಾಳುಗಳನ್ನು ಮನೆಗೆ ಸ್ವಾಗತಿಸಿದ್ದೇವೆ. ಪ್ರತಿಯೊಬ್ಬ ಒತ್ತೆಯಾಳು ಮನೆಗೆ ಬರುವವರೆಗೆ ನಮ್ಮ ಮಿಷನ್ ಮುಗಿದಿಲ್ಲ” ಎಂದು ಹೇಳಿದೆ.

ನಂತರ, ವಿನಿಮಯ ಒಪ್ಪಂದದ ಭಾಗವಾಗಿ, ಇಸ್ರೇಲಿ ಅಧಿಕಾರಿಗಳು ಶನಿವಾರ 200 ಪ್ಯಾಲೆಸ್ತೀನಿಯನ್ ಕೈದಿಗಳು ಮತ್ತು ಬಂಧಿತರನ್ನು ಬಿಡುಗಡೆ ಮಾಡಿದ್ದಾರೆ ಎಂದು ಘೋಷಿಸಿದರು.

ಪ್ಯಾಲೆಸ್ತೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದ ನಂತರ, ಅವರನ್ನು ಹೊತ್ತ ಬಸ್‌ಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಓಫರ್ ಜೈಲಿನಿಂದ ಜೆರುಸಲೆಮ್ ಮತ್ತು ರಮಲ್ಲಾ ನಗರದ ಕಡೆಗೆ ಸಾಗಿದವು. ಅಲ್ಲಿ ಸಂಬಂಧಿಕರು ಮತ್ತು ಬೆಂಬಲಿಗರು ತಮ್ಮವರ ವಾಪಸಾತಿಗಾಗಿ ಕಾಯುತ್ತಿದ್ದರು.

ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ:

ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮದ ಮೊದಲ ಹಂತದಲ್ಲಿ ಗಾಜಾದಲ್ಲಿ 33 ಒತ್ತೆಯಾಳುಗಳನ್ನು ಕ್ರಮೇಣ ಬಿಡುಗಡೆ ಮಾಡಲು ಒಪ್ಪಿಕೊಂಡಿವೆ, ಇಸ್ರೇಲ್ ವಶದಲ್ಲಿರುವ ಸುಮಾರು 2,000 ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ. ಈ ಕದನ ವಿರಾಮದ ಸಮಯದಲ್ಲಿ ಇಸ್ರೇಲ್ ವಶದಲ್ಲಿರುವ 90 ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಮೂವರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿತ್ತು.

ಒತ್ತೆಯಾಳುಗಳ ಕದನ ವಿರಾಮ-ಬಿಡುಗಡೆಯು ಇಸ್ರೇಲಿಗಳಲ್ಲಿ ಭರವಸೆ ಮತ್ತು ಭಯ ಎರಡನ್ನೂ ಹುಟ್ಟುಹಾಕಿದೆ. ಎಲ್ಲ ಒತ್ತೆಯಾಳುಗಳು ಹಿಂತಿರುಗುವ ಮೊದಲು ಕದನ ವಿರಾಮ ಕುಸಿಯಬಹುದು ಅಥವಾ ಬಿಡುಗಡೆಯಾದವರು ಆರೋಗ್ಯ ಹದಗೆಟ್ಟಿರುತ್ತೆ ಎಂದು ಹಲವರು ಚಿಂತಿಸುತ್ತಾರೆ. ಸಾವನ್ನಪ್ಪಿದ ಬಂಧಿತರ ಸಂಖ್ಯೆ ನಿರೀಕ್ಷೆಗಿಂತ ಹೆಚ್ಚಾಗಿದೆ ಎಂದು ಇತರರು ಹಲವರು ಚಿಂತೆಗೀಡಾಗಿದ್ದಾರೆ.

ಇದನ್ನೂ ಓದಿ; ಅದಾನಿ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಿದ ಶ್ರೀಲಂಕಾ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....